Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಲಾತಂಡಗಳು ಮನೋರಂಜನೆಯೊಂದಿಗೆ ಸರ್ಕಾರದ ವಿವಿಧ ಯೋಜನೆಗಳನ್ನು ಜನರಿಗೆ ತಲುಪಿಸಿ : ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್

Facebook
Twitter
Telegram
WhatsApp

 

ಚಿತ್ರದುರ್ಗ : ಕಲಾತಂಡಗಳು ಮನೋರಂಜನೆಯೊಂದಿಗೆ ಸರ್ಕಾರದ ವಿವಿಧ ಯೋಜನೆಗಳನ್ನು ಜನರಿಗೆ ತಲುಪಿಸಬೇಕು ಎಂದು ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ಹೇಳಿದರು.

ನಗರದ ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಮಾಹಿತಿ ಶಿಕ್ಷಣ ಸಂವಹನ, ಸಾಮಾಜಿಕ ವರ್ತನೆ ಬದಲಾವಣೆ ಸಂವಹನ ಕಾರ್ಯಕ್ರಮದಡಿಯಲ್ಲಿ ಜಾನಪದ ಕಲಾತಂಡಗಳ ಆಯ್ಕೆ ಪ್ರಕ್ರಿಯೆಯಲ್ಲಿ ಅವರು ಮಾತನಾಡಿದರು.

ಬೀದಿ ನಾಟಕಗಳ ಮೂಲಕ ನೀಡುವ ಕಲಾ ಪ್ರದರ್ಶನಗಳು ಬೆಳೆದು ಬಂದ ರೀತಿಯನ್ನು ತಿಳಿಸಿ, ಆಧುನಿಕ ಪೈಪೋಟಿ ಇರುವ ಈ ಸಂದರ್ಭದಲ್ಲಿ ಕಲಾತಂಡಗಳು ಮನೋರಂಜನೆಯೊಂದಿಗೆ ಸಾರ್ವಜನಿಕರು, ಆರೋಗ್ಯ ಇಲಾಖೆಯ ಯೋಜನೆಗಳನ್ನು ಒಪ್ಪಿಕೊಳ್ಳುವಂತಹ ಕಾರ್ಯನಿರ್ವಹಣೆ, ನಿಪುಣತೆ ಹೊಂದಬೇಕಿದೆ. ಮನೋರಂಜನೆಯೊಂದಿಗೆ ಇಲಾಖೆ ಯೋಜನೆಗಳ್ನು ಜನರಿಗೆ ತಲುಪಿಸಿ ಎಂದು ಹೇಳಿದರು.

ಜಿಲ್ಲಾ ಕುಟುಂಬ ಯೋಜನೆಗಳ ಅನುಷ್ಠಾನಾಧಿಕಾರಿ ಡಾ. ರೇಣುಪ್ರಸಾದ್ ಮಾತನಾಡಿ, ಕುಟುಂಬ ಕಲ್ಯಾಣ ಯೋಜನೆಗಳ ಅನುಷ್ಠಾನದಲ್ಲಿ ಪುರುಷರ ಭಾಗವಹಿಸುವಿಕೆ ಬಹಳಷ್ಟು ಕಡಿಮೆ ಇದೆ. ಬಾಲ್ಯ ವಿವಾಹಗಳು ಹೆಚ್ಚು ಹೆಚ್ಚು ನಡೆಯುತ್ತಲೇ ಇದೆ. ತಾಯಿ ಮರಣ ಶಿಶು ಮರಣ ನಿಯಂತ್ರಿಸಲು ಸ್ಥಳೀಯ ಭಾಷೆ ಬಳಸಿ ಜಾನಪದ ಕಲೆಯ ಮೂಲಕ ಸಾರ್ವಜನಿಕರಿಗೆ ಆರೋಗ್ಯ ಇಲಾಖೆಯ ಯೋಜನೆಗಳ ಬಗ್ಗೆ ಮನನ ಮಾಡಿಕೊಡಿ ಎಂದರು.

ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಅಭಿನವ ಮಾತನಾಡಿ, ಕಲಾತಂಡಗಳ ಆಯ್ಕೆಯು ಕಲಾತಂಡಗಳ ಅನುಭವ, ಉಪಯೋಗಿಸುವ ವಾದ್ಯ ಪರಿಕರಗಳು, ಕಲಾ ಪ್ರಕಾರ ಭಾಷೆಯ ಬಳಕೆ ಮತ್ತು ಪ್ರಭುತ್ವ, ಕಲಾತಂಡಗಳು ಉಪಯೋಗಿಸುವ ಸಮವಸ್ತ್ರ ಆಧಾರಿತ ಮಾನದಂಡ ರಚಿಸಿ ಅಂಕ ನಿಗದಿಪಡಿಸಲಾಗಿದೆ. ಗಳಿಸಿದ ಅಂಕದ ಮೇಲೆ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣ ನಾಯ್ಕ್, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜೆ.ಆರ್.ಗೌರಮ್ಮ, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್, ಮುಖ್ಯ ಆರೋಗ್ಯ ಮೇಲ್ವಿಚಾರಣಾಧಿಕಾರಿ ಎಂ.ಬಿ.ಹನುಮಂತಪ್ಪ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಬಿ.ಮೂಗಪ್ಪ, ಜಾನಕಿ, ಜಿಲ್ಲಾ ಮೇಲ್ವಿಚಾರಣಾ ಅಧಿಕಾರಿ ಆಂಜನೇಯ, ಗಣಕಯಂತ್ರ ನಿರ್ವಾಹಕ ಜಬ್ಬರ್ ಸೇರಿದಂತೆ ಐದು ಕಲಾ ತಂಡಗಳಿಂದ 25 ಜನ ಕಲಾವಿದರು ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!