ಕಲಾವಿದರು ಬದುಕು ಎಷ್ಟೇ ಸಂಕಷ್ಟದಲ್ಲಿದ್ದರೂ ಕಲೆಯಿಂದ ಸಮಾಜದ ಸಂಕಷ್ಟಗಳನ್ನು ಮರೆಸಿ, ಮನರಂಜಿಸುತ್ತಾರೆ : ತಹಶೀಲ್ದಾರ್ ಎನ್. ರಘುಮೂರ್ತಿ

ಚಳ್ಳಕೆರೆ : ನಾಟಕವು ಎಲ್ಲವನ್ನೂ ಒಳಗೊಂಡ ಸಮಗ್ರ ಕಲೆಯಾಗಿದ್ದು, ಇದನ್ನು ಪ್ರತಿಯೊಬ್ಬರು ಸ್ವೀಕರಿಸುವಂತಾಗಬೇಕು. ಸಮಾಜದ ಹುಳುಕುಗಳನ್ನು ಎತ್ತಿ ತೋರಿಸುವ, ಸಮಾಜದ ಸಂಬಂಧಗಳನ್ನು ಗಟ್ಟಿಗೊಳಿಸುವ ಸಾಮರ್ಥ್ಯ‌ ನಾಟಕಗಳಿಗಿದೆ ಎಂದು ತಹಶೀಲ್ದಾರ್ ಎನ್. ರಘುಮೂರ್ತಿ ಹೇಳಿದರು.

ತಾಲೂಕಿನ ತಳಕು ಹೋಬಳಿ ಬಂಜಗೆರೆ  ಗ್ರಾಮದಲ್ಲಿ ಕೃಪಪೊಷಕ ನಾಟಕ ಮಂಡಳಿ ಯುವಕರ ಸಂಘದ ವತಿಯಿಂದ ಗುರುವಾರ ನಡೆದ  “ಕುಡುಕ ಕಟ್ಟಿದ ಪ್ರೇಮಕೊಟೆ” ಸಾಮಾಜಿಕ ನಾಟಕ ದಲ್ಲಿ  ಅವರು  ಮಾತನಾಡಿ, ಎರಡು ವರ್ಷ ಕೋವಿಡ್ ಇದ್ದ ಕಾರಣ ನಾಟಕಗಳು ಸಂಪೂರ್ಣ ನಿಂತು ಹೋಗಿದ್ದವು. ಈಗ ಕೋವಿಡ್ ಕಡಿಮೆ ಆದ ಹಿನ್ನೆಲೆಯಲ್ಲಿ ಇಂದು ಎಲ್ಲೆಡೆ ನಾಟಕಗಳು ಕಳೆ ಕಟ್ಟಿವೆ. ನಾಟಕ ಪುರಾತನ ಗಂಡು ಕಲೆ. ರಂಗಭೂಮಿ ಬದುಕಿನ ಕನ್ನಡಿ ಹಾಗೂ ನೈಜ ಕಲೆಯಾಗಿದ್ದು, ಪ್ರೇಕ್ಷಕರೇ ಇದರ ಜೀವಾಳವಾಗಿದ್ದಾರೆ ಎಂದರು.

ಜಾಗತೀಕರಣ ಮತ್ತು ಅಧುನಿಕತೆಯ ಭರಾಟೆಯಲ್ಲಿ ನಮ್ಮ ಸಂಸ್ಕೃತಿಯ ಪ್ರತಿಬಿಂಬಗಳಾಗಿರುವ ನಾಟಕಗಳು ಇಂದು ಹೆಚ್ಚು ಜನರನ್ನು ತಲುಪುತ್ತಿಲ್ಲ. ಜನತೆ ಸಿನಿಮಾ, ಟಿವಿ ಕಡೆಗೆ ಆಕರ್ಷಿತರಾಗಿ ನಾಟಕಗಳನ್ನು ನೋಡುವುದನ್ನೇ ಕಡಿಮೆ ಮಾಡಿದ್ದಾರೆ ಎಂದು ವಿಷಾಧಿಸಿದ ಅವರು, ಸಿನಿಮಾ, ಧಾರವಾಹಿಗಳ ಪ್ರಭಾವ ಎಷ್ಟೇ ಬೀರಿದರೂ ನಾಟಕ ಎಂದಿಗೂ ಜೀವಂತವಾಗಿರುತ್ತದೆ.

ನಾಟಕಗಳನ್ನು ಜನರು ಹೆಚ್ಚು ಹೆಚ್ಚು ನೋಡಿದಾಗ ಮತ್ತು ಹೆಚ್ಚು ಹೆಚ್ಚು ಪ್ರದರ್ಶನಗಳಾದಾಗ ಮಾತ್ರ ನಾಟಕಗಳ ಸಾರ್ಥಕತೆ ಪಡೆಯುತ್ತವೆ. ಸಮಾಜದಲ್ಲಿ ಕಲಾವಿದರಿಗೆ ಉತ್ತಮ ಸ್ಥಾನಮಾನಗಳು ಸಿಗಬೇಕು. ಕಲಾವಿದರು ಬದುಕು ಎಷ್ಟೇ ಸಂಕಷ್ಟದಲ್ಲಿದ್ದರೂ ತಮ್ಮ ರಕ್ತಗತವಾದ ಕಲೆಯಿಂದ ಸಮಾಜದ ಸಂಕಷ್ಟಗಳನ್ನು ಮರೆಸಿ, ಮನರಂಜಿಸುತ್ತಾರೆ.

ಆಧುನಿಕ ಯುಗದ ಒತ್ತಡಗಳಿಗೆ ನಮ್ಮ ಸಾಂಪ್ರದಾಯಿಕ ಕಲಾ ಪ್ರಕಾರಗಳು ಅವನತಿಗೊಳ್ಳುತ್ತಿವೆ. ರಾಜ್ಯದಲ್ಲಿ ಹಿಂದೊಮ್ಮೆ ನಾಟಕಗಳು ಉಚ್ಛ್ರಾಯ ಸ್ಥಿತಿಯಲ್ಲಿದ್ದವು ಈಗ ಆ ಪರಿಸ್ಥಿತಿ ಇಲ್ಲವಾಗಿದೆ. ಅಳಿದುಳಿದ ಕೆಲವು ವೃತ್ತಿ ರಂಗಭೂಮಿ ಕಂಪನಿಗಳು ಈ ನಾಟಕದ ಪರಂಪರೆಯನ್ನು ಮುಂದುವರೆಸುತ್ತಿವೆ. ಇವರಿಗೆ ನಮ್ಮ ಸಹಕಾರ, ಪ್ರೋತ್ಸಾಹ ನೀಡಬೇಕಿದೆ ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ನಿವೃತ ಇಂಜಿನಿಯರ್ ನಾಗಭೂಷನ್, ಗುತ್ತಿಗೆದಾರ ಹನುಮಂತಪ್ಪ, ನಿವೃತ ಎಸಿಪಿ ಅಜ್ಜಪ್ಪ,,ದಾವಣಗೆರೆ ಬಸಣ್ಣ,ನಗರಸಭೆ ಗ್ರಾಮಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರು ಮುಖಂಡರು ಇದ್ದರು.

suddionenews

Recent Posts

ಉದ್ಯೋಗ ವಾರ್ತೆ : ಚಿತ್ರದುರ್ಗದಲ್ಲಿ ಮಾರ್ಚ್ 01 ರಂದು ಬೃಹತ್ ಉದ್ಯೋಗ ಮೇಳ

ಚಿತ್ರದುರ್ಗ. ಫೆ.24:  ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…

2 hours ago

ಮಧ್ಯ ಕರ್ನಾಟಕದಲ್ಲಿಯೇ ಪ್ರಪ್ರಥಮ ENT ಲೇಸರ್ ಶಸ್ತ್ರಚಿಕಿತ್ಸಾ ಯಂತ್ರ ಲೋಕಾರ್ಪಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

2 hours ago

ಭದ್ರಾ ಮೇಲ್ದಂಡೆಗೆ ರಾಜ್ಯ ಬಜೆಟ್ ನಲ್ಲಿ ಐದು ಸಾವಿರ ಕೋಟಿ ಅನುದಾನಕ್ಕೆ ಹಕ್ಕೊತ್ತಾಯ

ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…

3 hours ago

ಶಾಲಾ ಪಠ್ಯದಲ್ಲಿ ಸಂಭಾಜಿ ಜೀವನ ಸೇರಿಸಲು ಒತ್ತಾಯ ; ಕಾರಣ ಏನು ಗೊತ್ತಾ..?

ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…

3 hours ago