Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿಎಂ ಆಗುವ ಆಸೆಗೆ ಬಾವಿ ಮುಚ್ಚಿಸಿದ್ರಾ ಅರವಿಂದ್ ಬೆಲ್ಲದ್ : ಕಾಂಗ್ರೆಸ್ ನಾಯಕ ಕೊಟ್ಟ ದೂರಿನಲ್ಲೇನಿದೆ..?

Facebook
Twitter
Telegram
WhatsApp

ಧಾರವಾಡ : ಕಳೆದ ಬಾರಿ ಸಿಎಂ ರೇಸ್ ನಲ್ಲಿ ಶಾಸಕ ಅರವಿಂದ್ ಬೆಲ್ಲದ್ ಹೆಸರು ಕೂಡ ಇತ್ತು. ಕೆಲವು ಮೂಲಗಳು ಇನ್ನೇನು ಅರವಿಂದ್ ಬೆಲ್ಲದ್ ಮುಖ್ಯಮಂತ್ರಿ ಪಟ್ಟಕ್ಕೇರುತ್ತಾರೆ ಎನ್ನುವಾಗಲೇ ಎಲ್ಲವೂ ಉಲ್ಟಾ ಪಲ್ಟಾ ಆಗಿತ್ತು. ಆದರೆ ಇದೀಗ ಹೊಸ ರೀತಿಯ ಆರೋಪವೊಂದು ಕೇಳಿ ಬರುತ್ತಿದೆ. ಸಿಎಂ ಆಗುವುದಕ್ಕಾಗಿ ಶಾಸಕ ಅರವಿಂದ್ ಬೆಲ್ಲದ್ ಅವರು ಬಾವಿಯೊಂದನ್ನು ಮುಚ್ಚಿಸಿದ್ದಾರೆ ಎಂಬ ಆರೋಪವನ್ನು ಎದುರಿಸುತ್ತಿದ್ದಾರೆ.

ಈ ಸಂಬಂಧ ಕಾಂಗ್ರೆಸ್ ನಾಯಕ ನಾಗರಾಜ ಗೌರಿ, ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ನಗರದಲ್ಲಿ ಸಾರ್ವಜನಿಕ ಬಾವಿ ಕಾಣೆಯಾಗಿದೆ. ಹುಡುಕಿಕೊಡಿ ಎಂದು ಧಾರವಾಡ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಅಷ್ಟೇ ಅಲ್ಲ ದೂರು ಸ್ವೀಕರಿಸದೇ ಇದ್ದಲ್ಲಿ ಲೋಕಾಯುಕ್ತ ಮೊರೆ ಹೋಗುವುದಾಗಿ ತಿಳಿಸಿದ್ದಾರೆ.

ಜ್ಯೋತಿಷಿಯೊಬ್ಬರು ಹೇಳಿದ ಮಾತಿನಂತೆ ಬಾವಿ ಮುಚ್ಚಿಸಿದ್ದಾರೆ. ನೀವೂ ಬಾವಿಯನ್ನು ಮುಚ್ಚಿದರೆ ಮುಂದೆ ಮುಖ್ಯಮಂತ್ರಿಯಾಗುತ್ತೀರಿ ಎಂದು ಹೇಳಿದ್ದರಂತೆ. ಸ್ಥಳೀಯರು ಕೂಡ ಇದನ್ನೇ ಆರೋಪಿಸುತ್ತಿದ್ದಾರೆ. ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡುವುದಕ್ಕೆ ಶಾಸಕರು ಹಿಂದೇಟು ಹಾಕುತ್ತಿದ್ದಾರೆ. ನೀವೂ ಬಾವಿಯನ್ನು ಹುಡುಕಿಕೊಡಿ ಎಂದು ಕಾಂಗ್ರೆಸ್ ನಾಯಕ ದೂರು ನೀಡಿದ್ದಾರೆ.

ಇನ್ನು ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಶಾಸಕ ಬೆಲ್ಲದ್, ಯಾರೋ ಏನೋ ಹೇಳುತ್ತಾರೆ ಅಂತ ಎಲ್ಲದಕ್ಕೂ ಪ್ರತಿಕ್ರಿಯೆ ನೀಡುವುದಕ್ಕೆ ಆಗಲ್ಲ. ನೋ ಕಮೆಂಟ್ಸ್ ಎಂಬ ಉತ್ತರ ನೀಡಿ ಜಾರಿಕೊಂಡಿದ್ದಾರೆ. ಇನ್ನು ಧಾರವಾಡದ ಸರ್ವೆ ನಂಬರ್ 31/1ರಲ್ಲಿ ಸಾರ್ವಜನಿಕ ಬಾವಿ ಇದ್ದ ದಾಖಲೆ ಇದ್ದು, ಸದ್ಯ ಆ ಜಾಗದಲ್ಲಿ ಈಗ ಬಾವಿ ಕಾಣೆಯಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೈಸೂರಿನಲ್ಲಿ ಅಭ್ಯರ್ಥಿ ಬದಲಾಯಿಸಿದ್ದೇಕೆ..? ಯದುವೀರ್ ಗೆ ಟಿಕೆಟ್ ಕೊಟ್ಟಿದ್ದೇಕೆ..?: ಸ್ಪಷ್ಟನೆ ನೀಡಿದ ವಿಜಯೇಂದ್ರ

ಬೆಂಗಳೂರು: ಲೋಕಸಭಾ ಚುನಾವಣೆಯ ಪ್ರಚಾರ ಭರ್ಜರಿಯಾಗಿ ನಡೆಯುತ್ತಿದೆ. ಇಂದು ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಅದರಲ್ಲೂ ಈ ಬಾರಿ ಬಿಜೆಪಿಯಲ್ಲಿ ಹೊಸಬರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಘಟಾನುಘಟಿಗಳಿಗೆ ಟಿಕೆಟ್ ಮಿಸ್ ಆಗಿದೆ. ಮೈಸೂರಿನಿಂದ ಪ್ರತಾಪ್

ಡಾ.ರಾಜ್ 95ನೇ ಹುಟ್ಟುಹಬ್ಬ : ಸಮಾಧಿಗೆ ಪೂಜೆ ಸಲ್ಲಿಸಿದ ರಾಘಣ್ಣ, ಅಶ್ವಿನಿ, ವಂದಿತಾ

ಬೆಂಗಳೂರು: ಇಂದು ವರನಟ ಡಾ.ರಾಜ್ ಕುಮಾರ್ ಅವರ 95ನೇ ವರ್ಷದ ಹುಟ್ಟುಹಬ್ಬ. ಅವರ ಅಭಿಮಾನಿಗಳು ರಾಜ್ಯಾದ್ಯಂತ ಈ ಸಂಭ್ರಮವನ್ನು ಆಚರಿಸುತ್ತಿದ್ದಾರೆ. ಸಮಾಜಮುಖಿ ಕೆಲಸಗಳನ್ನು ಮಾಡುತ್ತಾ, ಅಣ್ಣಾವ್ರ ಹುಟ್ಟುಹಬ್ಬವನ್ನು ಸಾರ್ಥಕ ಮಾಡುತ್ತಿದ್ದಾರೆ. ಅವರ ಅಭಿಮಾನಿಗಳಿಂದ ಪ್ರತಿ

Summer Migraine: ಬಿಸಿಲಿಗೆ ಹೋದಾಗ ಈ ನಿಯಮಗಳನ್ನು ಪಾಲಿಸಿ : ಮೈಗ್ರೇನ್‌ ನಿಂದ ದೂರವಿರಿ….!

ಸುದ್ದಿಒನ್ : ಈ ಬೇಸಿಗೆಯಲ್ಲಿ ಬಿಸಿಲು ಜೋರಾಗಿದೆ. ತಾಪಮಾನವು 37 ರಿಂದ 40 ಡಿಗ್ರಿ  ಆಸುಪಾಸಿನಲ್ಲಿದೆ. ವಿಪರೀತ ಬಿಸಿಲಿನಿಂದ ಮಕ್ಕಳಿಂದ ವೃದ್ಧರವರೆಗೆ ಬಹುತೇಕ ಎಲ್ಲರೂ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಆದರೆ ಮೈಗ್ರೇನ್ ಪೀಡಿತರು ಸ್ವಲ್ಪ ಹೆಚ್ಚು

error: Content is protected !!