Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದೇವಸ್ಥಾನಗಳನ್ನು ಕಟ್ಟುವುದು ಎಷ್ಟು ಮುಖ್ಯವೋ ಪಾವಿತ್ರತೆ ಕಾಪಾಡವುದು ಅಷ್ಟೇ ಮುಖ್ಯ : ಮಾದಾರ ಚನ್ನಯ್ಯ ಸ್ವಾಮೀಜಿ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

 

ಸುದ್ದಿಒನ್, ಚಿತ್ರದುರ್ಗ, ಮಾರ್ಚ್.04  : ದೇವಸ್ಥಾನಗಳನ್ನು ಕಟ್ಟುವುದು ಎಷ್ಟು ಮುಖ್ಯವೋ ಪಾವಿತ್ರತೆ ಕಾಪಾಡವುದು ಅಷ್ಠೆ ಮುಖ್ಯ ಎಂದು ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ಹುಲ್ಲೂರು ಗ್ರಾಮದಲ್ಲಿ ದುರ್ಗಾಂಬಿಕಾದೇವಿಯ ಉತ್ಸವ ಮೂರ್ತಿ ಹಾಗೂ ದೇವಸ್ಥಾನದ ಕಳಸ ಪ್ರತಿಷ್ಠಾಪನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಸಮಾಜ ಒಂದು ಕುಟುಂಬ ಬದಲಾವಣೆಯಾಗಬೇಕಾದರೆ ಮಹಿಳೆಯರು ಮುಂದೆ ಬರಬೇಕು. ಪುರುಷರು ದುಡಿಯುವ ಹಣ ಹೆಣ್ಣು ಮಕ್ಕಳ ಕೈಗೆ ಬರುವಂತಾಗಬೇಕು. ದೇವಸ್ಥಾನಕ್ಕೆ ಹೋದರೆ ಮನಸ್ಸಿಗೆ ಶಾಂತಿ ಸಮಾಧಾನ ಸಿಗುತ್ತದೆ. ಮಠ
ಮಂದಿರ, ಚರ್ಚ್, ಮಸೀದಿ ದೇಶಕ್ಕೆ ಬೇಕು. ದೇವಸ್ಥಾನ ಜೀರ್ಣೋದ್ದಾರವಾದಂತೆ ಮನುಷ್ಯನ ಜೀವನ ಕೂಡ ಜೀರ್ಣೋದ್ದಾರವಾಗಬೇಕು ಎಂದು ತಿಳಿಸಿದರು.

ದಾರಿದ್ರ್ಯ ನಿವಾರಣೆಯಾಗಬೇಕಾದರೆ ಮಕ್ಕಳಿಗೆ ಶಿಕ್ಷಣ ಬೇಕು. ಎಲ್ಲಿಯವರೆಗೂ ಜೀವನದಲ್ಲಿ ಬದಲಾವಣೆಯಾಗುವುದಿಲ್ಲವೋ ಅಲ್ಲಿಯವರೆಗೂ ಗೌರವ ಸಿಗುವುದಿಲ್ಲ. ಜೀವನದಲ್ಲಿ ಸುಖವಾಗಿರಬೇಕಾದರೆ ಕಷ್ಟ ಪಡಬೇಕು ಎಂದು ಹುಲ್ಲೂರು ಗ್ರಾಮಸ್ಥರಿಗೆ ಹೇಳಿದರು.
ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮಾತನಾಡಿ ಅಯೋಧ್ಯೆಯಲ್ಲಿ ರಾಮ ಮಂದಿರ ಅಬುದಾಬಿಯಲ್ಲಿ ಹಿಂದೂ ದೇವಾಲಯವಾಗಿದೆ. ಸರ್ಕಾರದ ಹಣದಿಂದ ದೇವಸ್ಥಾನ ನಿರ್ಮಾಣವಾಗುವುದಕ್ಕಿಂತಲೂ ಮಿಗಿಲಾಗಿ ಭಕ್ತರು ನೀಡುವ ಹಣದಿಂದ ದೇವಾಲಯಗಳಾಗುತ್ತಿರುವುದು ಸಂತಸದ ಸಂಗತಿ. ದೇವಸ್ಥಾನ ಕಟ್ಟುವುದರ ಜೊತೆ ಮಕ್ಕಳಿಗೆ ಶಿಕ್ಷಣ ಕೊಡಿಸಿ. ಸಂವಿಧಾನದಡಿ ಎಲ್ಲರಿಗೂ ಸಮಾನವಾದ ಹಕ್ಕಿದೆ. ಪ್ರಯೋಜನ ಪಡೆದುಕೊಳ್ಳಬೇಕಷ್ಟೆ ಎಂದರು.

ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಮಾತನಾಡುತ್ತ ಜನಾಂಗದ ಹೆಸರೇಳಿಕೊಂಡು ಬೇಳೆ ಬೇಯಿಸಿಕೊಳ್ಳುವವರು ಜಾಸ್ತಿಯಿದ್ದಾರೆ. ರಾಜಕಾರಣದಲ್ಲಿ ಅಧಿಕಾರದಲ್ಲಿದ್ದಾಗ ಜನಾಂಗಕ್ಕೆ ಕಿಂಚಿತ್ತಾದರೂ ಸಹಾಯವಾಗುವಂತ ಕೆಲಸವಾಗಬೇಕು. ಸಮಾಜದ ಹೆಸರಿನಲ್ಲಿ ಸಿಕ್ಕ ಅಧಿಕಾರವನ್ನು ಸಮಾಜಕ್ಕೆ ಅರ್ಪಿಸಬೇಕು. ಜನಾಂಗದ ಗೌರವ ಕಳೆಯುವ ಕೆಲಸ ಮಾಡಬಾರದು. ಬೇರೆ ಜನಾಂದವರೊಂದಿಗೆ ಪ್ರೀತಿ ಸಹಭಾಳ್ವೆಯಿಂದ ಬದುಕಬೇಕು ಎಂದು ಹೇಳಿದರು.

ಒಳ್ಳೆಯ ರೀತಿಯಿಂದ ಏನು ಬೇಕಾದರೂ ಸಾಧನೆ ಮಾಡಬಹುದು. ಪ್ರೀತಿಯಿಂದ ಇದ್ದರೆ ಯಾರು ಯಾರನ್ನು ದ್ವೇಷಿಸುವುದಿಲ್ಲ. ಎಲ್ಲರೊಳಗೊಂದಾಗಿ ಬದುಕುವುದನ್ನು ಕಲಿಯಬೇಕು. ಅದಕ್ಕಾಗಿ ಸರಿಯಾದ ಮಾರ್ಗದಲ್ಲಿ ಸಾಗಬೇಕು. ಬಡತನವಿದೆಯೆಂದು ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿಸಬೇಡಿ. ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನದಲ್ಲಿ ಎಲ್ಲಾ ಜಾತಿ ಧರ್ಮದವರಿಗೂ ಸಮಾನತೆ ಕಲ್ಪಿಸಿದ್ದಾರೆ. ಸದುಪಯೋಗಪಡಿಸಿಕೊಳ್ಳಿ ಎಂದು ಹುಲ್ಲೂರು ಗ್ರಾಮಸ್ಥರಿಗೆ ಕರೆ ನೀಡಿದರು.

ಹುಲ್ಲೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರಾಜಪ್ಪ ಪಿ. ಸದಸ್ಯರುಗಳಾದ ರವಿಕುಮಾರ್, ದುಗ್ಗಪ್ಪ, ನಿವೃತ್ತ ಪೊಲೀಸ್ ಅಧಿಕಾರಿ ಸಮಾದಪ್ಪ, ಕಲ್ಲೇಶಪ್ಪ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಹುಲ್ಲೂರು ಕೃಷ್ಣಪ್ಪ, ಹುಲ್ಲೂರು ಕುಮಾರ್ ವೇದಿಕೆಯಲ್ಲಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment