Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಟ್ರೈನ್ ದುರಂತದಲ್ಲಿ ಸಾವನ್ನಪ್ಪಿದ್ದು ಬರೋಬ್ಬರಿ 233 ಮಂದಿ : ಸಾವು ಹೆಚ್ಚಾಗುವ ಆತಂಕ..!

Facebook
Twitter
Telegram
WhatsApp

ನಿನ್ನೆ ರಾತ್ರಿ ನಡೆದ ರೈಲು ದುರಂತ ಎಲ್ಲರನ್ನು ಶಾಕ್ ಗೆ ಒಳಗಾಗಿಸಿದೆ. ದೇಶದಲ್ಲಿಯೇ ಇಂಥ ಘೋರ ರೈಲು ದುರಂತ ಇದೆ ಮೊದಲಾಗಿದೆ. ಎರಡು ಪ್ಯಾಸೆಂಜರ್ ಮತ್ತು ಒಂದು ಗೂಡ್ಸ್ ರೈಲು ಡಿಕ್ಕಿಯಾದ ಪರಿಣಾಮ ಬರೋಬ್ಬರಿ 233 ಜನ ಅಸುನೀಗಿದ್ದಾರೆ. 900 ಮಂದಿ ಗಾಯಗೊಂಡಿದ್ದಾರೆ. ಇನ್ನು ಕೂಡ ಜನರ ನರಳಾಟ ಜಾಸ್ತಿಯಾಗಿಯೇ ಇದೆ.

ಗಾಯಗೊಂಡವರಿಗೆ ಅಲ್ಲಿನ ಸ್ಥಳೀಯರೇ ರಕ್ತದಾನ ಮಾಡಿ ಕಾಪಾಡಿದ್ದಾರೆ. ಶಾಲಿಮಾರ್ – ಚೆನ್ನೈ ಕೊರೋಮಂಡಲ್ ಟ್ರೈನ್ ಮುಖಾಮುಖಿಯಾಗಿ ಈ ದುರ್ಘಟನೆ ಸಂಭವಿಸಿದೆ. ಟ್ರೈನ್ ಚಲಿಸುತ್ತಿದ್ದ ಬೋಗಿ ಬಿಟ್ಟು ಮತ್ತೊಂದು ಬೋಗಿಗೆ ಹೋಗಿ ಬಿದ್ದಿದ್ದವು. 10-12 ಕೋಚ್ ಗಳು ಹಳಿ ತಪ್ಪಿದ್ದವು. ಇದೆ ವೇಳೆ ಅದೇ ಟ್ರ್ಯಾಕ್ ನಲ್ಲಿ ಬೆಂಗಳೂರು – ಹೌರಾ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ಬಂದು ಹಳಿ ಮೇಲೆ ಬಿದ್ದಿದ್ದ ಬೋಗಿಗಳಿಗೆ ಹೊಡೆದಿದೆ. ಇದರಿಂದ ಗೂಡ್ಸ್ ರೈಲು ಕೂಡ ಅಪಘಾತಕ್ಕೀಡಾಗಿದೆ.

NDRF ನ ಮೂರು ತಂಡಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿವೆ. ಅಷ್ಟೇ ಅಲ್ಲ ಒರಿಸ್ಸಾದ ಡಿಸಾಸ್ಟರ್ ರ್ಯಾಪಿಡ್ ಆಕ್ಷನ್ ಫೋರ್ಸ್ ತಂಡ ಕೂಡ ಕಾರ್ಯಾಚರಣೆಯಲ್ಲಿ ತೊಡಗಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಒಡಿಶಾದ ಜನ ಸಹಾಯಕ್ಕೆ ಧಾವಿಸಿದ್ದಾರೆ. ರಕ್ತದಾನ ಮಾಡಲು ಮುಂದಾಗಿದ್ದಾರೆ. ಸ್ಥಳೀಯರ ಮಾನವೀಯತೆ ಕಂಡು ಅಲ್ಲಿನ ವೈದ್ಯರು ಧನ್ಯವಾದ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ ಪ್ರಕರಣ : ಯಾರನ್ನೂ ರಕ್ಷಿಸುವ ಉದ್ದೇಶವಿಲ್ಲದೆ ಇದ್ದರೆ ಸಿಬಿಐಗೆ ವಹಿಸಲಿ ಎಂದ ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಾಕಷಗಟು ಹೋರಾಟಗಳು ನಡೆದಿವೆ. ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು, ನೇಹಾ ಸಾವಿಗೆ ನ್ಯಾಯ ಸಿಗಬೇಕು ಎಂಬ ಒತ್ತಾಯಗಳು ಕೇಳಿವೆ. ಇದೀಗ ಮಾಜಿ ಸಿಎಂ

ಚಿತ್ರದುರ್ಗ ಸೇರಿದಂತೆ 11 ಜಿಲ್ಲೆಗಳಲ್ಲಿ 3 ದಿನಗಳ ಕಾಲ ಮಳೆ

ಬೆಂಗಳೂರು: ಬಿರು ಬೇಸಿಗೆಯಿಂದ ಬೇಯುತ್ತಿದ್ದ ಜನರಿಗೆ ವರುಣರಾಯ ಹಂಗ್ ಬಂದು ಹಿಂಗ್ ತಂಪೆರೆದು ಹೋಗಿದ್ದ. ಇನ್ನು ಮಳೆಯಾಗಲಿದೆ ಎಂದುಕೊಳ್ಳುವಾಗಲೇ ಒಣ ಹವೆ ಜಾಸ್ತಿಯಾಗಿತ್ತು. ಉಷ್ಣಾಂಶ ದಿನೇ ದಿನೇ ಏರಿಕೆಯಾಗುತ್ತಲೆ ಇತ್ತು. ಇದೀಗ ಮತ್ತೆ ಮಳೆಯಾಗುವ

ಚಿತ್ರದುರ್ಗ ಅಭ್ಯರ್ಥಿ ಗೋವಿಂದ ಕಾರಜೋಳ ಅವರೇ ಇಂದು ಮತ ಚಲಾಯಿಸಿಲ್ಲ : ಕಾರಣವೇನು ಗೊತ್ತಾ..?

ಚಿತ್ರದುರ್ಗ: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಮೇ 7 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಮತದಾರರೆಲ್ಲಾ ಬಹಳ ಉತ್ಸುಕತೆಯಿಂದ ಮತದಾನ ಮಾಡುತ್ತಿದ್ದಾರೆ. ಆದರೆ ಕೆಲ ಅಭ್ಯರ್ಥಿಗಳು ತಮ್ಮ ಮತವನ್ನು ತಾವೇ

error: Content is protected !!