Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯಾಧ್ಯಕ್ಷನಾಗಿ ಗೊಡ್ಡು ಬೆದರಿಕೆಗಳಿಗೆ ಹೆದರುವುದಿಲ್ಲ : ಬಿವೈ ವಿಜಯೇಂದ್ರ

Facebook
Twitter
Telegram
WhatsApp

ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನ ರಕ್ಷಣೆ ಮಾಡುವುದು ನನ್ನ ಆದ್ಯ ಕರ್ತವ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಗೊಡ್ಡು ಬೆದರಿಕೆಗಳಿಗೆ ಹೆದರುವ ಪಕ್ಷ ಬಿಜೆಪಿಯಲ್ಲ. ರಾಜ್ಯಾಧ್ಯಕ್ಷನಾಗಿ ನಾನು ಕುಇಡ ಹೆದರುವುದಿಲ್ಲ. ಇವೆಲ್ಲವನ್ನೂ ನಾವೂ ಹೆದರಿಸುತ್ತೇವೆ. ಬಿಜೆಪಿ ಅಧ್ಯಕ್ಷನಾಗಿ ಪ್ರತಿಯೊಬ್ಬ ಕಾರ್ಯಕರ್ತನನ್ನು ರಕ್ಷಣೆ ಮಾಡುವುದು ನನ್ನ ಕರ್ತವ್ಯ ಎಂದಿದ್ದಾರೆ.

ಇದೆ ವೇಳೆ ಮಾತನಾಡಿದ ವಿಜಯೇಂದ್ರ ಅವರು, ಗುಲ್ಬರ್ಗಾದಲ್ಲಿ ಮಣಿಕಂಠ ರಾಠೋಡ್ ಅವರು, ಮತ್ತೊಂದೆಡೆ ಪ್ರಿಯಾಂಕ್ ಖರ್ಗೆ ಅವರು ಪೊಲೀಸ್ ವರದಿಯ ಆಧಾರದ ಮೇಲೆ ಹೇಳಿಕೆ ಕೊಟ್ಟಿದ್ದಾರೆ. ಪೊಲೀಸರು ಹೇಳಿದ್ದೆಲ್ಲವನ್ನು ಸತ್ಯವೆಂದು ನಂಬುವುದಿಲ್ಲ. ದಲಿತ ಮುಖಂಡನ ಮನೆಗೆ ಹೋಗಿ ಹೊರಗೆ ಕರೆದೊಯ್ದು ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಆದರೆ, ರಾಜ್ಯ ಸರಕಾರ, ಪೊಲೀಸರು 307ನೇ ವಿಧಿಯಡಿ ಕೊಲೆ ಯತ್ನದ ಪ್ರಕರಣ ದಾಖಲಿಸಿಲ್ಲ ಎಂದು ಆಕ್ಷೇಪಿಸಿದರು. ಕಾಂಗ್ರೆಸ್ ಎಂಎಲ್‍ಸಿ ಹೆಸರನ್ನು ಎ1 ಆರೋಪಿ ಎಂದು ಉಲ್ಲೇಖಿಸಿದರೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಟೀಕಿಸಿದರು.

ಬರಗಾಲದ ಬಗ್ಗೆಯೂ ಮಾತಮಾಡಿದ ವಿಜಯೇಂದ್ರ ಅವೆಉ, ಈ ರಾಜ್ಯ ಸರ್ಕಾರಕ್ಕೆ ಬರಗಾಲದ ಸಂದರ್ಭದಲ್ಲಿ ರೈತರುಗೆ ಪರಿಹಾರ ಕೊಡಬೇಕೆಂಬ ಪ್ರಾಮಾಣಿಕ ಕಳಕಳಿ ಇಲ್ಲ. ರೈತರಿಗೆ ಪರಿಹಾರ ನೀಡುತ್ತಿಲ್ಲ. ಪರಿಹಾರ ನೀಡಲು ಖಜಾನೆಯಲ್ಲಿ ಹಣವಿಲ್ಲದೆ ಇದ್ದರು ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ಕೊಡುವುದಾಗಿ ತಿಳಿಸಿದ್ದಾರೆ. ಮತ್ತೊಂದು ಕಡೆ ಎಸ್‍ಸಿ, ಎಸ್‍ಟಿ ಸಮುದಾಯಕ್ಕಾಗಿ ಬಳಸಬೇಕಿದ್ದ ಎಸ್‍ಇಪಿಟಿಎಸ್‍ಪಿ ಹಣವನ್ನು ಬೇರೆಡೆಗೆ ಬಳಸಿಕೊಳ್ಳುತ್ತಾರೆ. ರಾಜ್ಯ ಸರಕಾರದ ಆದ್ಯತೆ ಸಂಕಷ್ಟದಲ್ಲಿರುವ ರೈತರಲ್ಲ. ಅದನ್ನು ಬಿಟ್ಟು ರಾಜಕಾರಣ ಮಾಡುವುದು, ಅಲ್ಪಸಂಖ್ಯಾತರನ್ನು ಓಲೈಸುವುದೇ ಅದರ ಪ್ರಥಮ ಆದ್ಯತೆಯಾಗಿದೆ ಎಂದು ಕಿಡಿಕಾರಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಾಜಿ ಸಚಿವ ಹೆಚ್ ಡಿ ರೇವಣ್ಣ ಮತ್ತೆ ನ್ಯಾಯಾಂಗ ಬಂಧನಕ್ಕೆ..!

ಬೆಂಗಳೂರು: ಮಹಿಳೆಯ ಕಿಡ್ನ್ಯಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರಿಗೆ ಮತ್ತೆ ನ್ಯಾಯಾಂಗ ಬಂಧನವಾಗಿದೆ. ರೇವಣ್ಣ ಅವರನ್ನು ಮತ್ತೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ನ್ಯಾಯಲಯ ಮಹತ್ವದ ಆದೇಶವನ್ನು ಹೊರಡಿಸಿದೆ. ಕಿಡ್ನ್ಯಾಪ್ ಕೇಸ್

ತುರುವನೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ರೈತರಿಗೆ ಬೆಳೆವಿಮೆ ಹಣವನ್ನು ಖಾತೆಗೆ ಜಮಾಮಾಡುವಂತೆ ಒತ್ತಾಯಿಸಿ ರೈತರ ಮನವಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ,ಮೇ.08 : ತಾಲ್ಲೂಕಿನ ತುರುವನೂರು ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಬೆಳೆ ವಿಮೆಯ ಕಟ್ಟಿದ ರೈತರಿಗೆ ವಿಮಾ ಕಂಪನಿಯವರು

ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವುದಕ್ಕಾಗಿ ವಿಧಾನ ಪರಿಷತ್‍ನಲ್ಲಿ ಶಿಕ್ಷಕರ ಪರವಾಗಿ ಹೋರಾಟ : ಲೋಕೇಶ್ ತಾಳಿಕಟ್ಟೆ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817   ಸುದ್ದಿಒನ್, ಚಿತ್ರದುರ್ಗ,ಮೇ.08 : ಶಿಕ್ಷಕರುಗಳಿಗೆ ಓಪಿಎಸ್ ಅಥವಾ ಪಿಂಚಣಿಯನ್ನು ಕೊಡಿಸುವುದು. ಕಾಲ್ಪನಿಕ ವೇತನವನ್ನು ಕೊಡಿಸುವುದು. ಬಡ್ತಿ ಪಡೆದ ಶಿಕ್ಷಕರಿಗೆ

error: Content is protected !!