Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿಪಕ್ಷ ನಾಯಕರಾಗಿ ಆರ್. ಅಶೋಕ್ ಆಯ್ಕೆ : ವೀಕ್ಷಕರಿಂದ ಅಧಿಕೃತ ಘೋಷಣೆ

Facebook
Twitter
Telegram
WhatsApp

ಸುದ್ದಿಒನ್, ಬೆಂಗಳೂರು. ನವೆಂಬರ್.17 :ಭಾರತೀಯ ಜನತಾ ಪಕ್ಷ (ಬಿಜೆಪಿ) ಶುಕ್ರವಾರ ಆರ್. ಅಶೋಕ ಅವರನ್ನು ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಿಸಿದೆ. 

ಇಂದು ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ.ಸುನೀಲ್ ಕುಮಾರ್, ಅಶ್ವಥ್ ನಾರಾಯಣ್ ಮತ್ತು ಆರಗ ಜ್ಞಾನೇಂದ್ರ ಅವರ ಹೆಸರುಗಳು ಕೂಡಾ ಈ ಸ್ಥಾನಕ್ಕೆ ಕೇಳಿ ಬಂದಿತ್ತು.

ರಾಜ್ಯ ಬಿಜೆಪಿಯಲ್ಲಿ ಖಾಲಿಯಿದ್ದ ಹುದ್ದೆಗಳೆಲ್ಲಾ ಫುಲ್ ಫಿಲ್ ಆಗಿದೆ. ಕಳೆದ ಆರು ತಿಂಗಳಿನಿಂದ ಬಿಜೆಪಿಯಲ್ಲಿ ಖಾಲಿಯಿದ್ದ
ವಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷನ ಹುದ್ದೆಗೆ ಆಯ್ಕೆ ಮಾಡಲಾಗಿದೆ. ಇತ್ತಿಚೆಗಷ್ಟೇ ಬಿ.ವೈ. ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಿದ್ದು, ಇದೀಗ ಆರ್.ಅಶೋಕ್ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಘೋಷಣೆ ಮಾಡಲಾಗಿದೆ.

ಇಂದು ದೆಹಲಿಯಿಂದ ವೀಕ್ಷಕರು ಬಂದಿದ್ದರು. ಸಭೆಯಲ್ಲಿ ಶಾಸಕರ ಅಭಿಪ್ರಾಯಗಳನ್ನು ಪಡೆದು ಘೋಷಣೆ ಮಾಡಲಾಗಿದೆ.

ಈ ಮೂಲಕ ಒಕ್ಕಲಿಗರ ಸಮುದಾಯದವರಿಗೆ ಮಣೆ ಹಾಕಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ಸೋಲಾಗಬಾರದು ಎಂಬ ಕಾರಣಕ್ಕೆ ಹೈಕಮಾಂಡ್ ಈ ನಿರ್ಧಾರ ತೆಗೆದುಕೊಂಡಿದೆ. ಇಂದು ವೀಕ್ಷಕರು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಚುನಾವಣೆ ನಡೆದು ಸುಮಾರು ಆರು ತಿಂಗಳುಗಳ ನಂತರ ವಿರೋಧ ಪಕ್ಷದ ನಾಯಕರ ನೇಮಕವಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಆಡಳಿತಾರೂಢ ಕಾಂಗ್ರೆಸ್‌ನಿಂದ ಬಿಜೆಪಿ ಟೀಕೆಗಳನ್ನು ಎದುರಿಸಿತ್ತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!