Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿಪಕ್ಷ ನಾಯಕರಾಗಿ ಆರ್. ಅಶೋಕ್ ಆಯ್ಕೆ : ವೀಕ್ಷಕರಿಂದ ಅಧಿಕೃತ ಘೋಷಣೆ

---Advertisement---

ಸುದ್ದಿಒನ್, ಬೆಂಗಳೂರು. ನವೆಂಬರ್.17 :ಭಾರತೀಯ ಜನತಾ ಪಕ್ಷ (ಬಿಜೆಪಿ) ಶುಕ್ರವಾರ ಆರ್. ಅಶೋಕ ಅವರನ್ನು ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಿಸಿದೆ. 

ಇಂದು ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ.ಸುನೀಲ್ ಕುಮಾರ್, ಅಶ್ವಥ್ ನಾರಾಯಣ್ ಮತ್ತು ಆರಗ ಜ್ಞಾನೇಂದ್ರ ಅವರ ಹೆಸರುಗಳು ಕೂಡಾ ಈ ಸ್ಥಾನಕ್ಕೆ ಕೇಳಿ ಬಂದಿತ್ತು.

ರಾಜ್ಯ ಬಿಜೆಪಿಯಲ್ಲಿ ಖಾಲಿಯಿದ್ದ ಹುದ್ದೆಗಳೆಲ್ಲಾ ಫುಲ್ ಫಿಲ್ ಆಗಿದೆ. ಕಳೆದ ಆರು ತಿಂಗಳಿನಿಂದ ಬಿಜೆಪಿಯಲ್ಲಿ ಖಾಲಿಯಿದ್ದ
ವಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷನ ಹುದ್ದೆಗೆ ಆಯ್ಕೆ ಮಾಡಲಾಗಿದೆ. ಇತ್ತಿಚೆಗಷ್ಟೇ ಬಿ.ವೈ. ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಿದ್ದು, ಇದೀಗ ಆರ್.ಅಶೋಕ್ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಘೋಷಣೆ ಮಾಡಲಾಗಿದೆ.

ಇಂದು ದೆಹಲಿಯಿಂದ ವೀಕ್ಷಕರು ಬಂದಿದ್ದರು. ಸಭೆಯಲ್ಲಿ ಶಾಸಕರ ಅಭಿಪ್ರಾಯಗಳನ್ನು ಪಡೆದು ಘೋಷಣೆ ಮಾಡಲಾಗಿದೆ.

ಈ ಮೂಲಕ ಒಕ್ಕಲಿಗರ ಸಮುದಾಯದವರಿಗೆ ಮಣೆ ಹಾಕಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ಸೋಲಾಗಬಾರದು ಎಂಬ ಕಾರಣಕ್ಕೆ ಹೈಕಮಾಂಡ್ ಈ ನಿರ್ಧಾರ ತೆಗೆದುಕೊಂಡಿದೆ. ಇಂದು ವೀಕ್ಷಕರು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಚುನಾವಣೆ ನಡೆದು ಸುಮಾರು ಆರು ತಿಂಗಳುಗಳ ನಂತರ ವಿರೋಧ ಪಕ್ಷದ ನಾಯಕರ ನೇಮಕವಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಆಡಳಿತಾರೂಢ ಕಾಂಗ್ರೆಸ್‌ನಿಂದ ಬಿಜೆಪಿ ಟೀಕೆಗಳನ್ನು ಎದುರಿಸಿತ್ತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment