ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
Asco kaita disease for chickpea crop: Agriculture department advice for control
ಕಡಲೆ ಬೆಳೆಗೆ ಆಸ್ಕೋ ಕೈಟಾ ಅಂಗಮಾರಿ ರೋಗ: ಹತೋಟಿಗೆ ಕೃಷಿ ಇಲಾಖೆ ಸಲಹೆ
ಚಿತ್ರದುರ್ಗ. ಜ.19: ಚಿತ್ರದುರ್ಗ ತಾಲ್ಲೂಕು ಗುಡ್ಡದರಂಗವ್ವನಹಳ್ಳಿ ಗ್ರಾಮಕ್ಕೆ ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ-ರೈತ ಸಂಜೀವಿನಿ ವಾಹನವು ಈಚೆಗೆ ಭೇಟಿ ನೀಡಿ ಕಡಲೆ ಬೆಳೆಯನ್ನು ಪರೀಕ್ಷಿಸಿದ ಸಂದರ್ಭದಲ್ಲಿ ಆಸ್ಕೋ ಕೈಟಾ ಅಂಗಮಾರಿ ರೋಗ ಕಂಡುಬಂದಿರುತ್ತದೆ.

ಜಿಲ್ಲೆಯಲ್ಲಿ ಪ್ರಸ್ತುತ ಕಡಲೆ ಬೆಳೆ ಬೆಳವಣಿಗೆಯಿಂದ ಹೂವಾಡುವ ಹಂತದಲ್ಲಿರುತ್ತದೆ. ಕಡಲೆ ಬೆಳೆಗೆ ಆಸ್ಕೋ ಕೈಟಾ ಅಂಗಮಾರಿ ರೋಗವು ಗುಡ್ಡದ ರಂಗವ್ವನಹಳ್ಳಿ ಗ್ರಾಮ, ಸುತ್ತಮುತ್ತ ಪ್ರದೇಶದಲ್ಲಿ ಹಾಗೂ ಕಡಲೆ ಬೆಳೆದಂತಹ ಚಿತ್ರದುರ್ಗ ತಾಲ್ಲೂಕಿನಲ್ಲಿ ಕೂಡ ಈ ಸಂದರ್ಭದಲ್ಲಿ ಕಂಡುಬರುವ ಸಾಧ್ಯತೆ ಇರುತ್ತದೆ.
ಆಸ್ಕೋ ಕೈಟಾ ಅಂಗಮಾರಿ ರೋಗದ ಹತೋಟಿಗೆ ಮ್ಯಾಂಕೋಜೆಬ್ 2 ಗ್ರಾಂ ಪ್ರತಿ ಲೀಟರ್ಗೆ ಅಥವಾ ಸಾಫ್ 2 ಗ್ರಾಂ ಪ್ರತಿ ಲೀಟರ್ಗೆ ಅಥವಾ ಕಾರ್ಬನ್ಡೈಜಿಯಂ 2 ಗ್ರಾಂ ಪ್ರತಿ ಲೀಟರ್ಗೆ ಬೆರೆಸಿ ಸಂಪಡಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಸಹಾಯಕ ನಿರ್ದೇಶಕರು (ವಿಷಯ ತಜ್ಞರು) ರೈತರಿಗೆ ಸಲಹೆ ನೀಡಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್