Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಸಿದ್ದರಾಮಯ್ಯ, ಡಿಕೆಶಿ ಪ್ರಾಬಲ್ಯ ಇರುವ ಕ್ಷೇತ್ರದಲ್ಲಿ ಗೆಲ್ತಾರಾ ಅಶೋಕ್, ಸೋಮಣ್ಣ..?

---Advertisement---

 

ಬೆಂಗಳೂರು: ಬಿಜೆಪಿಗೆ ಟಾರ್ಗೆಟ್ ಇರುವುದು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ಸೋಲಿಸ ಬೇಕೆಂಬುದು. ಹೀಗಾಗಿ ಈ ಚುನಾವಣೆಯಲ್ಲಿ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಬಲ ಅಭ್ಯರ್ಥಿಯನ್ನೇ ಹಾಕಿದ್ದಾರೆ. ಈ ಬಾರಿ ಸಿದ್ದರಾಮಯ್ಯ ಕೋಲಾರ ಬಿಟ್ಟು ಮತ್ತೆ ವರುಣಾ ಕ್ಷೇತ್ರದಲ್ಲಿಯೇ ಸ್ಪರ್ಧಿಸುತ್ತಿದ್ದಾರೆ.

ಈ ಹಿಂದೆ ಸಿದ್ದರಾಮಯ್ಯ ಅವರಿಗೆ ಪ್ರತಿ ಸ್ಪರ್ಧಿಯಾಗಿ, ಬಿವೈ ವಿಜಯೇಂದ್ರ ಅವರನ್ನು ನಿಲ್ಲುಸುವ ಯೋಜನೆ ಇದೆ ಎನ್ನಲಾಗಿತ್ತು. ಒಂದು ವೇಳೆ ಸಿದ್ದರಾಮಯ್ಯ ಅವರು ವರುಣಾದಲ್ಲಿ ನಿಂತರೆ, ವಿಜಯೇಂದ್ರ ಅವರಿಗೂ ವರುಣಾ ಟಿಕೆಟ್ ಕೊಡಲು ಬಿಜೆಪಿ ಬಯಸಿತ್ತು. ಆದರೆ ಈಗ ವಿ ಸೋಮಣ್ಣ ಅವರಿಗೆ ವರುಣಾ ಟಿಕೆಟ್ ನೀಡಲಾಗಿದೆ. ವರುಣಾ ಕ್ಷೇತ್ರದ ಜೊತೆಗೆ ಚಾಮರಾಜನಗರಕ್ಕೂ ಟಿಕೆಟ್ ನೀಡಲಾಗಿದೆ. ಆದರೆ ಪ್ರಾಬಲ್ಯತೆ ಹೊಂದಿದ್ದ ಗೋವಿಂದರಾಜನಗರ ಮಿಸ್ಸಾಗಿದೆ.

ಇನ್ನು ಡಿಕೆ ಶಿವಕುಮಾರ್ ಅವರು ಕನಕಪುರದಲ್ಲಿ ಸ್ಪರ್ಧಿಸಲಿದ್ದಾರೆ. ಕನಕಪುರದ ಬಂಡೆ ಎಂದೇ ಖ್ಯಾತಿ ಪಡೆದಿರುವ ಡಿಕೆಶಿ ಎದುರು ಆರ್ ಅಶೋಕ್ ಅವರಿಗೆ ಟಿಕೆಟ್ ನೀಡಲಾಗಿದೆ. ಜೊತೆಗೆ ತನ್ನ ಪ್ರಾಬಲ್ಯವಿರುವ ಪದ್ಮನಾಭನಗರದಲ್ಲೂ ಟಿಕೆಟ್ ಘೋಷಣೆ ಮಾಡಿದೆ. ಇದನ್ನೆಲ್ಲಾ ಗಮನಿಸಿದರೆ ಈ ಬಾರಿಯ ಚುನಾವಣೆಯಲ್ಲಿ ಘಟಾನುಘಟಿ ನಾಯಕರ ಸ್ಪರ್ಧೆ ಜೋರಾಗಿಯೇ ಇರಲಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment