ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಮಂಡ್ಯ: ಹಳೆ ಮೈಸೂರು ಭಾಗದಲ್ಲಿ ಈ ಬಾರಿ ಕಮಲ ಅರಳಿಸಲೇಬೇಕೆಂದುಕೊಂಡಿರುವ ಬಿಜೆಪಿ ಹೊಸ ಹೊಸ ಪ್ಲ್ಯಾನ್ ಮಾಡುತ್ತಿದೆ. ಅದರ ಭಾಗವಾಗಿ ಮಂಡ್ಯ ಉಸ್ತುವಾರಿಯನ್ನು ಬದಲಾವಣೆ ಮಾಡಿದ್ದರು. ಗೋಪಾಲಯ್ಯ ಅವರನ್ನು ತೆಗೆದು ಸಚಿವ ಆರ್ ಅಶೋಕ್ ಅವರನ್ನು ಉಸ್ತುವಾರಿಯನ್ನಾಗಿ ನೇಮಕ ಮಾಡಿತ್ತು. ಆದ್ರೆ ಪಕ್ಷದವರಿಂದಾನೇ ಇದಕ್ಕೆ ವಿರೋಧ ವ್ಯಕ್ತವಾಗಿತ್ತು.
ಗೋ ಬ್ಯಾಕ್ ಅಶೋಕ್ ಎಂಬ ಘೋಷಣೆ ಕೂಡ ಎದುರಾಗಿತ್ತು. ಕಂಡ ಕಂಡ ಗೋಡೆಗಳಲ್ಲೆಲ್ಲಾ ಗೋ ಬ್ಯಾಕ್ ಅಶೋಕ್ ಎಂಬ ಪೋಸ್ಟರ್ ಕಾಣಿಸುತ್ತಿತ್ತು. ಇದನ್ನೆಲ್ಲಾ ಗಮನಿಸಿ, ಅಶೋಕ್ ಅವರು ಉಸ್ತುವಾರಿಯಿಂದ ಹಿಂದೆ ಸರಿದಿದ್ದಾರೆ. ಈ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಸಚಿವ ಆರ್ ಅಶೋಕ್ ಅವರು ಮನವಿ ಮಾಡಿಕೊಂಡಿದ್ದರಂತೆ.
ಚುನಾವಣೆ ಬೇರೆ ಹತ್ತಿರವಾಗುತ್ತಿದೆ. ಹೀಗಾಗಿ ತಾನು ಸ್ಪರ್ಧಿಸುವ ಪದ್ಮನಾಭನಗರ ಕ್ಷೇತ್ರದಲ್ಲಿ ಓಡಾಡಬೇಕಾಗಿದೆ. ಜೊತೆಗೆ ಅಂತರಾಷ್ಟ್ರೀಯ ಸಿನಿಮೋತ್ಸವದ ಉಸ್ತುವಾರಿ ಜೊತೆಗೆ ಗ್ರಾಮ ವಾಸ್ತವ್ಯ ಕೂಡ ಮಾಡಬೇಕಾಗಿದೆ. ಹೀಗಾಗಿ ಮಂಡ್ಯ ಉಸ್ತುವಾರಿ ಹೊರೆಯಾಗಿದೆ ಎಂದಿದ್ದರಂತೆ. ಹೀಗಾಗಿ ಉಸ್ತುವಾರಿಯಿಂದ ಮುಕ್ತಗೊಳಿಸಿದ್ದಾರೆ ಎನ್ನಲಾಗಿದೆ.
ಇನ್ನು ಈ ಮೊದಲೇ ಉಸ್ತುವಾರಿಯಾಗಿ ಗೋಪಾಲಯ್ಯ ಅವರು ಇದ್ದರು. ಇದೀಗ ಮತ್ತೆ ಅವರನ್ನೇ ಉಸ್ತುವಾರಿಯನ್ನಾಗಿ ಮಾಡಲಿದ್ದಾರೆ ಎನ್ನಲಾಗಿದೆ. ಚುನಾವಣೆ ಮೇಲೆ ಯಾವುದೇ ರೀತಿಯ ವ್ಯತಿರಿಕ್ತ ಪರಿಣಾಮ ಬೀರಬಾರದು ಎಂಬ ಕಾರಣಲ್ಕೆ ಉಸ್ತುವಾರಿಯನ್ನು ಬದಲಾಯಿಸಿದ್ದಾರೆ ಎನ್ನಲಾಗಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್