Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಶೋಕ್ ಅವರಿಗೇನೆ ಏಡ್ಸ್ ರಕ್ತ ಇಂಜೆಕ್ಟ್ ಮಾಡಲು ಹೋಗಿದ್ರಂತೆ ಮುನಿರತ್ನ : ಬೆಚ್ಚಿಬಿದ್ದ ವಿಪಕ್ಷ ನಾಯಕ..!

---Advertisement---

 

ರಾಜಕೀಯದಲ್ಲಿ ಎಷ್ಟೇ ದ್ವೇಷಿಗಳಿದ್ದರೂ ಅದು ಸ್ಪರ್ಧೆಯ ವಿಚಾರಕ್ಕೆ ಮಾತ್ರ ಯುದ್ಧ ಸಾರಬೇಕು. ಅದೆಷ್ಟೋ ರಾಜಕಾರಣಿಗಳು ಇರುವುದೇ ಹಾಗೇ. ರಾಜಕೀಯದ ಪಡಸಾಲೆಯಲ್ಲಿ ಕಿತ್ತಾಡಿಕಿಂಡರು, ಸಭೆ ಸಮಾರಂಭಗಳಲ್ಲಿ ಆತ್ಮೀಯರಾಗಿಯೇ ಕಾಣಿಸಿಕೊಳ್ಳುತ್ತಾರೆ. ಆದರೆ ಮುನಿರತ್ನ ಮಾಡಿದ್ದ ಪ್ಲ್ಯಾನ್ ಗಳನ್ನ ಕೇಳಿದರೆ ಎಂಥವರಿಗೆ ಆದರೂ ಎದೆ ನಡುಗುತ್ತದೆ. ಅದರಲ್ಲೂ ತಮ್ಮದೇ ಪಕ್ಷದಲ್ಲಿದ್ದ ವ್ಯಕ್ತಿಗಳ ಜೀವನವನ್ನೇ ಹಾಳು ಮಾಡುವ ಹುನ್ನಾರ ಮಾಡಿದ್ದಾರೆ ಎನ್ನಲಾಗಿದೆ.

ವಿಪಕ್ಷ ನಾಯಕ ಆರ್ ಅಶೋಕ್ ಅವರ ಹುಟ್ಟುಹಬ್ಬಕ್ಕೆ ಹೂಗುಚ್ಛ ನೀಡುವ ಪ್ಲ್ಯಾನ್ ಮಾಡಿಕೊಂಡಿದ್ದವ, ಕೈಗೆ ಗ್ಲೌಸ್ ಹಾಕಿಕೊಂಡು, ಅದರಲ್ಲಿ ಬ್ಲೇಡ್ ಅಳವಡಿಸಿಕೊಂಡು, ಆ ಗ್ಲೌಸ್ ನಲ್ಲಿ ಹೆಚ್ಐವಿ ಸೋಂಕಿತನ ರಕ್ತದ ಟ್ಯೂಬ್ ಇಟ್ಟುಕೊಂಡು, ಆ ರಕ್ತವನ್ನು ಆರ್ ಅಶೋಕ್ ಅವರಿಗೆ ಇಂಜೆಕ್ಟ್ ಮಾಡುವುದಕ್ಕೆ ಪ್ಲ್ಯಾನ್ ಮಾಡಿದ್ದರಂತೆ. ಈ ವಿಚಾರ ಕೇಳಿ ಆರ್ ಅಶೋಕ್ ಅವರಿಗೆ ದಿಗಿಲು ಬಡಿದಂತಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆರ್ ಅಶೋಕ್ ಅವರು, ಮುನಿರತ್ನ ಅವರನ್ನ ನಾವ್ಯಾರು ಬೆಂಬಲಿಸಲ್ಲ. ಉಪ್ಪು ತಿಂದವ ನೀರು ಕುಡಿಯಲೇಬೇಕು. ಈ ಬಗ್ಗೆ ಪೊಲೀಸರು ತನಿಖೆ ಮಾಡಬೇಕು‌. ಆಗ ಸತ್ಯಾಸತ್ಯತೆ ಹೊರಗೆ ಬರುತ್ತದೆ. ರಾಜಕೀಯದಲ್ಲಿ ಈ ರೀತಿಯ ಘಟನೆಗಳು ನಡೆದರೆ ಯಾವ ರಾಜಕಾರಣಿಯೂ ಬದುಕುವುದಿಲ್ಲ. ನಮ್ಮ ಪಕ್ಷಕ್ಕೆ ಮುನಿರತ್ನ ಅವರು ಬಂದು ಐದು ವರ್ಷಗಳಾಗಿವೆ. ಕಾಂಗ್ರೆಸ್ ನಲ್ಲಿ 30 ವರ್ಷವಿದ್ದರು. ನಾವೂ ಮಂತ್ರಿಗಳಾಗಿ, ಶಾಸಕರಾಗಿ ಕೆಲಸ ಮಾಡಲು ಭಯವಾಗುತ್ತಿದೆ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಲೇಬೇಕು. ಈ ಬಗ್ಗೆ ಸರ್ಕಾರ ಹಾಗೂ ಗೃಹ ಸಚಿವರು ಯಾವ ರೀತಿಯ ಕ್ರಮ ತೆಗೆದುಕೊಳ್ಳುತ್ತಾರೆ ನೋಡುತ್ತೇನೆ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment