ಬೆಳಗಾವಿ: ಆರ್ ಅಶೋಕ್ ಅವರ ವಿಪಕ್ಷ ನಾಯಕನ ಆಯ್ಕೆಗೆ ಬಿಜೆಪಿಯಲ್ಲಿಯೇ ವಿರೋಧವಿತ್ತು. ಆದರೆ ಮುಂದಿನ ಲೋಕಸಭಾ ಚುನಾವಣೆಯ ಸ್ಟಾಟರ್ಜಿ ಬಿಜೆಪಿಯಲ್ಲಿ ಬೇರೆಯದ್ದೇ ಆಗಿತ್ತು. ಹೀಗಾಗಿ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕನ ಆಯ್ಕೆಗೆ ಸಮಯ ತೆಗೆದುಕೊಂಡೇ ಆಯ್ಕೆ ಮಾಡಲಾಗಿತ್ತು. ಈ ನಡುವೆ ವಿಪಕ್ಷ ನಾಯಕ ಆರ್ ಅಶೋಕ್ ಇದ್ದರೆ ನಾನು ಆ ಕೊಠಡಿಗೆ ಹೆಜ್ಜೆ ಇಡುವುದಿಲ್ಲ ಎಂದು ಬಿಜೆಪಿ ಶಾಸಕ ವಿಶ್ವನಾಥ್ ಹೇಳಿದ್ದಾರೆ. ಈ ಮೂಲಕ ಮನಸ್ತಾಪಗಳು ಇನ್ನು ಮುಂದುವರೆದಂತೆ ಕಾಣುತ್ತಿದೆ.

ಸದನದಲ್ಲಿ ಚರ್ಚೆ ಮಾಡಬೇಕಾದ ವಿಚಾರಗಳ ಕುರಿತು ಬಿಜೆಪಿ ನಾಯಕರು ಕ್ಲೋಸ್ಡ್ ಡೋರ್ ಮೀಟಿಂಗ್ ಅನ್ನು ಅರೆಂಜ್ ಮಾಡಿದ್ದರು. ಅದು ಪ್ರತಿಪಕ್ಷ ನಾಯಕನ ಕೊಠಡಿಯಲ್ಲಿಯೇ ಆಗಿತ್ತು. ಈ ವೇಳೆ ಶಾಸಕ ಮುನಿರತ್ನ ಅವರು, ಯಲಹಂಕ ಶಾಸಕ ವಿಶ್ವನಾಥ್ ಅವರ ಕೈಹಿಡಿದು ಕರೆದುಕೊಂಡು ಹೋಗುತ್ತಿದ್ದರು. ಆರ್. ಅಶೋಕ್ ಅವರ ಕೊಠಡಿ ಬರುತ್ತಿದ್ದಂತೆ ಒಳಗೆ ಬರಲು ನಿರಾಕರಣೆ ಮಾಡಿದರು.
‘ಅಶೋಕ್ ಹೆಸರಿನ ನಾಮಫಲಕ ಇರುವ ತನಕ ಆ ಕೊಠಡಿಗೆ ನಾನು ಕಾಲು ಇಡುವುದಿಲ್ಲ. ಬೇಕಾದರೆ ಆ ಬೋರ್ಡ್ ತೆಗೆಯಲಿ, ನಂತರದಲ್ಲಿ ನಾನು ಹೋಗುತ್ತೇನೆ’ ಎಂದು ಕಡ್ಡಿ ತುಂಡಾಗುವಂತೆ ಹೇಳಿದರು. ಇದೇ ವೇಳೆ ಬಿವೈ ವಿಜಯೇಂದ್ರ ಅವರ ಬಳಿಯೂ ಚರ್ಚೆ ನಡೆಸಿದ್ದಾರೆ. ಇಬ್ಬರು ಕುಳಿತು ಮಾತುಕತೆ ನಡೆಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










