Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗಂಧದ ಗುಡಿ ಸಿನಿಮಾದ ಟಿಕೆಟ್ ದರ ಇಳಿಸಿದ ಅಶ್ವಿನಿ ಪುನೀತ್ ರಾಜ್ ಕುಮಾರ್

Facebook
Twitter
Telegram
WhatsApp

 

ಅಕ್ಟೋಬರ್ 28ರಂದು ರಿಲೀಸ್ ಆದ ಗಂಧದ ಗುಡಿ ಸಿನಿಮಾ ಎಲ್ಲಾ ಕಡೆ ಅದ್ಭುತವಾಗಿ ರೆಸ್ಪಾನ್ಸ್ ಪಡೆದುಕೊಂಡಿದೆ. ಅಪ್ಪುರನ್ನು ನೋಡಿದ ಜನ ಫಿದಾ ಆಗಿದ್ದಾರೆ. ಅವರ ನಗು, ಅವರ ಮಾತು ಕೇಳಿ ಅಪ್ಪು ನಮ್ಮ ಜೊತೆ ನಿಜವಾಗಿಯೂ ಇರಬೇಕಿತ್ತು ಎಂದು ಮತ್ತೆ ವಿಧಿಯನ್ನು ಶಪಿಸಿದ್ದಾರೆ. ಅರಣ್ಯ ಸಂಪತ್ತನ್ನು ನೋಡಿ ವಾವ್ ಈ ಜಾಗ ಇಷ್ಟು ಅದ್ಭುತವಾಗಿದೆಯಾ ಎನಿಸಿದೆ. ಅಷ್ಟು ಬ್ಯೂಟಿಫುಲ್ ಜಗತ್ತನ್ನು ಗಂಧದ ಗುಡಿಯಲ್ಲಿ ತೋರಿಸಲಾಗಿದೆ.

ಇನ್ನು ಕೂಡ ಹಲವು ಜನ ಸಿನಿಮಾ ನೋಡಿಲ್ಲ. ಒಂದು ಇಡೀ ಫ್ಯಾಮಿಲಿ ಕರೆದುಕೊಂಡು ಹೋಗುವುದಕ್ಕೆ ದುಬಾರಿ ಎನಿಸಿರಬಹುದು. ಇನ್ನ ಕೆಲವರಿಗೆ ಸಮಯದ ಅಭಾವವೂ ಇರಬಹುದು. ಆದ್ರೆ ಇಂದಿನಿಂದ ಗುರುವಾರದವರೆಗೆ ಗಂಧದ ಗುಡಿ ನೋಡುತ್ತೀವಿ ಎನ್ನುವವರಿಗೆ ದೊಡ್ಮನೆಯಿಂದ ಭರ್ಜರಿ ಗಿಫ್ಟ್ ಸಿಕ್ಕಿದೆ.

ಅರಣ್ಯ ಸಂಪತ್ತನ್ನು ಉಳಿಸಿ, ಬೆಳೆಸುವ ವಿಚಾರವನ್ನು ಹೊಂದಿರುವ ಗಂಧದ ಗುಡಿ ಸಿನಿಮಾವನ್ನು ಮಕ್ಕಳು ನೋಡಲೇಬೇಕು ಎಂಬುದು ಅಶ್ವಿನಿ ಪುನೀತ್ ರಾಜ್ಕುಮಾರ್ ಆಸೆಯಾಗಿದೆ. ಹೀಗಾಗಿ ಟಿಕೆಟ್ ದರವನ್ನು ಕಡಿಮೆ ಮಾಡಲಾಗಿದೆ.

ಈ ಬಗ್ಗೆ ತಮ್ಮ ಪಿಆರ್ಕೆ ಅಧಿಕೃತ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ಅಶ್ವಿನಿ ಪುನೀತ್ ರಾಜ್ಕುಮಾರ್, ನಾನು ಮತ್ತು ಚಿತ್ರತಂಡ ಎಲ್ಲರೊಡನೆ ಚರ್ಚಿಸಿ, ವಿತರಕರ ಹಾಗೂ ಪ್ರದರ್ಶಕರ ಸಹಕಾರದೊಂದಿಗೆ ನಮ್ಮ ಚಿತ್ರ ಗಂಧದ ಗುಡಿಯನ್ನು 07-11-2022 ರಿಂದ 10-11-2022 ಗುರುವಾರದವರೆಗೂ ಸಿಂಗಲ್ ಸ್ಕ್ರೀನ್ಗಳಲ್ಲಿ 56 ರೂಪಾಯಿ ಹಾಗೂ ಮಲ್ಟಿಪ್ಲೆಕ್ಸ್ನಲ್ಲಿ 112 ರೂಪಾಯಿಗಳಿಗೆ ಕರ್ನಾಟಕದಾದ್ಯಂತ ದಿನದ ಎಲ್ಲಾ ಆಟಗಳು ಪ್ರದರ್ಶನ ಮಾಡಬೇಕೆಂದು ನಿರ್ಧಾರ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸನಾತನ ಧರ್ಮದ ತತ್ವಜ್ಞಾನವನ್ನು ಜಗತ್ತಿಗೆ ಸಾರಿದ ಜಗದ್ಗುರು ಶಂಕರಾಚಾರ್ಯರರು : ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಹೇಳಿಕೆ

  ಚಿತ್ರದುರ್ಗ.12: ಬುದ್ದ ಹಾಗೂ ಜೈನ ಧರ್ಮಗಳ‌ ಪ್ರಭಾವದಿಂದ ಸನಾತನ ಧರ್ಮವನ್ನು ಮೇಲೆತ್ತಿ, ಸನಾತನ ಧರ್ಮದ ಉನ್ನತ‌ ತತ್ವಜ್ಞಾನವನ್ನು ಜಗತ್ತಿಗೆ ಸಾರುವ ಕೆಲಸವನ್ನು ಆದಿಗುರು ಶಂಕರಾಚಾರ್ಯರು ಮಾಡಿದರು ಎಂದು ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಹೇಳಿದರು. ನಗರದ

ಹಣ್ಣುಗಳ ರಾಜ ಮಾವಿನಹಣ್ಣನ್ನು ಹೀಗೆ ತಿನ್ನಿ….!

ಸುದ್ದಿಒನ್ : ಬೇಸಿಗೆಯಲ್ಲಿ ದೊರೆಯುವ ಮಾವಿನ ಹಣ್ಣುಗಳನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ಇವುಗಳ ರುಚಿ ಚೆನ್ನಾಗಿರುತ್ತದೆ. ಅಷ್ಟೇ ಅಲ್ಲದೇ ಅವು ನಮ್ಮ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಹೊಂದಿರುತ್ತವೆ. ಆಯುರ್ವೇದದ ಪ್ರಕಾರ ಮಾವಿನ ಹಣ್ಣಿನಲ್ಲಿ

ಈ ರಾಶಿಯವರಿಗೆ ವಯಸ್ಸು ಮೀರುತ್ತಿದೆ ಮದುವೆ ಬಗ್ಗೆ ಯೋಚನೆ ಮಾಡುವುದು ಉತ್ತಮ

ಈ ರಾಶಿಯವರಿಗೆ ವಯಸ್ಸು ಮೀರುತ್ತಿದೆ ಮದುವೆ ಬಗ್ಗೆ ಯೋಚನೆ ಮಾಡುವುದು ಉತ್ತಮ, ಈ ರಾಶಿಯವರಿಗೆ ವಂಶೋದ್ಧಾರ ಗಂಡು ಸಂತಾನದ ಚಿಂತೆ ಭಾನುವಾರ-ರಾಶಿ ಭವಿಷ್ಯ ಮೇ-12,2024 ಶಂಕರಾಚಾರ್ಯ ಜಯಂತಿ, ತಾಯಿ ದಿನ ಸೂರ್ಯೋದಯ: 05:49, ಸೂರ್ಯಾಸ್ತ

error: Content is protected !!