Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿಧಾನಸಭಾ ಚುನಾವಣೆ-2023 ಮತಯಂತ್ರದಲ್ಲಿ ಭದ್ರವಾದ ಅಭ್ಯರ್ಥಿಗಳ ಭವಿಷ್ಯ, ಮೇ 13 ಕ್ಕೆ ಎಲ್ಲರ ಚಿತ್ತ

Facebook
Twitter
Telegram
WhatsApp

ದಾವಣಗೆರೆ,(ಮೇ.10): ರಾಜ್ಯದ 16 ನೇ ವಿಧಾನಸಭೆಗೆ ಚುನಾವಣೆ ನಡೆಯುತ್ತಿದ್ದು ಮೇ 10 ರಂದು ಮತದಾನ ಮುಕ್ತಾಯವಾಗಿದ್ದು ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಮತಯಂತ್ರಗಳಲ್ಲಿ ಭದ್ರವಾಗಿದೆ. ಎಲ್ಲರ ಚಿತ್ತ ಮೇ 13 ರಂದು ನಡೆಯುವ ಮತ ಎಣಿಕೆಯಲ್ಲಿ ಜಯದ ಮಾಲೆ ಯಾರ ಪಾಲಾಗಲಿದೆ ಎಂಬ ನಿರೀಕ್ಷೆ ಮತದಾರ ಪ್ರಭುಗಳದ್ದಾಗಿದೆ.

16 ನೇ ವಿಧಾನಸಭಾ ಚುನಾವಣೆ ಹಲವಾರು ಹೊಸತುಗಳಿಗೆ ಮುನ್ನುಡಿ ಬರೆದಿರುವುದು ವಿಶೇಷವಾಗಿದೆ. ಪರೋಕ್ಷ ಪ್ರಜಾಪ್ರಭುತ್ವದಲ್ಲಿ ತನ್ನ ಪ್ರತಿನಿಧಿಗಳನ್ನು ಜನರಿಂದ ಆಯ್ಕೆ ಮಾಡಿಕೊಳ್ಳುವ ವಿಧಾನವೇ ಮತದಾನವಾಗಿದೆ. ಆಯ್ಕೆಯಾದವರಲ್ಲಿ ಪ್ರಮಾಣಾನುಗುಣ ಬಹುಮತ ಸಬೀತುಪಡಿಸಿದ ಪಕ್ಷವು ಸರ್ಕಾರ ರಚನೆ ಮಾಡಲಿದೆ. ಆದರೆ ಚುನಾವಣೆಯಲ್ಲಿ ಹೆಚ್ಚು ಜನರು ಮತದಾನ ಮಾಡುವ ಮೂಲಕ ಪ್ರತಿನಿಧಿಗಳನ್ನು ಆಯ್ಕೆ ಮಾಡಿದಲ್ಲಿ ಉತ್ತಮ ಪ್ರತಿನಿಧಿಗಳ ಆಯ್ಕೆಯಾಗಲಿದೆ ಎಂದು ಆಯೋಗವು 80 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರಿಗೆ, ವಿಶೇಷಚೇತನ ಮತದಾರರಿಗೆ ಮನೆಯಲ್ಲಿಯೇ ಮತದಾನ ಮಾಡಲು ಅವಕಾಶ ಕಲ್ಪಿಸಿದೆ. ಮತ್ತು ಮತದಾರರ ಜಾಗೃತಿ ಮೂಲಕ ಎಲ್ಲರೂ ಮತದಾನ ಹಬ್ಬದಲ್ಲಿ ಭಾಗವಹಿಸಬೇಕೆಂದು ಮತ್ತು ಇದರ ಲಾಭದ ಬಗ್ಗೆ ಮನವರಿಕೆ ಮಾಡಿಕೊಡಲಾಗಿದೆ.

ಜನಸ್ನೇಹಿ ಮತಗಟ್ಟೆಗಳ ಸ್ಥಾಪನೆ; ಮತದಾನ ಮಾಡುವ ಎಲ್ಲಾ ಮತಗಟ್ಟೆಗಳಲ್ಲಿ ಸ್ವಚ್ಚತೆ, ನೆರಳು, ಶೌಚಾಲಯ, ಕುಡಿಯುವ ನೀರಿನ ಸೌಕರ್ಯದ ಜೊತೆಗೆ ವಿಶೇಷ ಆಕರ್ಷಣೆಯ ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ಯುವ ಮತದಾರರು ಸೇರಿದಂತೆ, ಹಿರಿಯ ನಾಗರೀಕರು, ಮಹಿಳೆಯರು ಸೇರಿದಂತೆ ಎಲ್ಲರೂ ಮುಕ್ತವಾಗಿ, ನಿರ್ಭೀತಿಯಿಂದ ಮತದಾನ ಮಾಡುವ ಎಲ್ಲಾ ವ್ಯವಸ್ಥೆಯನ್ನು ಆಯೋಗವು ಕಲ್ಪಿಸಿರುವುದು ವಿಶೇಷವಾಗಿದೆ. ಈ ಭಾರಿ ಮತದಾರರ ಪಟ್ಟಿಯಲ್ಲಿ ಹೆಸರು ಕೈಬಿಡಲಾಗಿದೆ, ಬೇರೆಡೆ ವರ್ಗವಾಗಿದೆ ಎಂಬ ದೂರುಗಳು ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿರುವುದು ಸಹ ಪ್ರಸ್ತುತ ಚುನಾವಣೆ ವಿಶೇಷವಾಗಿದೆ.

ಮತದಾನ ಆರಂಭದಿಂದಲೇ ಜನೋತ್ಸಾಹ;  ಮೇ 10 ರಂದು ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಯಿತು. ಇದಕ್ಕೂ ಮೊದಲು ಅಭ್ಯರ್ಥಿಗಳ ಏಜೆಂಟರ ಸಮ್ಮುಖದಲ್ಲಿ ಅಣಕು ಮತದಾನ ಮಾಡಿಸುವ ಮೂಲಕ ಮತಯಂತ್ರಗಳ ಬಗ್ಗೆ ತಿಳಿಸಲಾಯಿತು.

ಈ ಕೆಲಸವು ಬೆಳಗ್ಗೆ 6 ರಿಂದ 7 ಗಂಟೆಯ ಅವಧಿಯಲ್ಲಿ ಮುಕ್ತಾಯವಾಯಿತು. 7 ಗಂಟೆಯಿಂದಲೇ ಮತದಾನ ಮಾಡಲು ಜನರು ಸಾಲಗಟ್ಟಿ ಬರುತ್ತಿದ್ದರು. ಬೆಳಗ್ಗೆ 9 ಗಂಟೆಯ ವೇಳೆಗೆ ದಾವಣಗೆರೆ ಜಿಲ್ಲೆಯ 7 ಕ್ಷೇತ್ರಗಳಿಂದ 100792 ಮತದಾರರು ಮತದಾನ ಮಾಡಿ ಶೇ 6.99 ಮತದಾನವಾಗಿತ್ತು.

ಮತದಾನ ದಿನ ಎಲ್ಲಾ ಸರ್ಕಾರಿ ಕಚೇರಿಗಳಿಗೆ, ಶಾಲಾ, ಕಾಲೇಜುಗಳಿಗೆ ರಜೆ ಮತ್ತು ಸಾರ್ವಜನಿಕ, ಖಾಸಗಿ ಕೈಗಾರಿಕೆಗಳಿಗೆ ಹಾಗೂ ಎಲ್ಲಾ ಅಂಗಡಿ ಮುಂಗಟ್ಟುಗಳಿಗೆ ರಜೆ ನೀಡಿದ್ದರಿಂದ ಕುಟುಂಬ ಸಮೇತರಾಗಿ ಬೆಳಗಿನ ಉಪಹಾರ ಮುಗಿಸಿ ಮತದಾನ ಕೇಂದ್ರದತ್ತ ಹೆಜ್ಜೆ ಹಾಕಿದರು.

ಇದು ಮಧ್ಯಾಹ್ನ 11 ಗಂಟೆಯ ವೇಳೆಗೆ 299670 ಜನರು ಮತದಾನ ಮಾಡಿ ಶೇ 20.78 ಕ್ಕೆ ತಲುಪಿತು. ಮೊದಲ ಮತದಾರರಾದ ಯುವಕ, ಯುವತಿಯರು ತಮ್ಮ ಪೋಷಕರ ಜೊತೆಗೆ ಮತದಾನ ಮಾಡಲು ಮತಗಟ್ಟೆಯಲ್ಲಿ ಸರದಿ ಸಾಲಿನಲ್ಲಿ ನಿಂತು ಪ್ರಜಾಪ್ರಭುತ್ವದ ಭಾಗವಾಗುತ್ತಿದ್ದೇನೆ ಎಂದು ಹೆಮ್ಮೆಯಿಂದ ಹೇಳುತ್ತಿದ್ದದು ವಿಶೇಷವಾಗಿತ್ತು. ಮಧ್ಯಾಹ್ನ 1 ಗಂಟೆಯ ವೇಳೆ 557261 ಜನರು ಮತದಾನ ಮಾಡಿ ಶೇ 38.64 ಕ್ಕೆ ತಲುಪಿತು.

ಚುನಾವಣಾ ಆಯೋಗದ ಕಿವಿ, ಕಣ್ಣು ಎಂದೇ ಹೇಳಲ್ಪಡುವ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮತದಾನ ವೀಕ್ಷಣೆಗೆ ತೆರಳಿದಾಗ ಎಲ್ಲಾ ಮತಗಟ್ಟೆಗಳಲ್ಲಿ ಮತದಾನ ಮಾಡಲು ಸಾಲುಗಟ್ಟಿ ಸರದಿಯಲ್ಲಿ ನಿಂತಿರುವುದು ಎದ್ದು ಕಾಣುತ್ತಿತ್ತು, ಈಗೆ ಅಣಜಿ, ಬಿಳಿಚೋಡು, ಹೆಬ್ಬಾಳು, ಮಾಯಕೊಂಡ ಸೇರಿದಂತೆ ಬಹುತೇಕ ಎಲ್ಲಾ ಮತಗಟ್ಟೆಗಳಲ್ಲಿ ಇದೇ ಉತ್ಸಾಹ ಎದ್ದು ಕಾಣುತ್ತಿತ್ತು. ಇದು ಸಂಜೆ 5 ಗಂಟೆಯ ವೇಳೆಗೆ 1018309 ಮತದಾರರು ಮತದಾನ ಮಾಡಿ ಶೇ 70.61 ಕ್ಕೆ ತಲುಪಿತು. ಮತದಾನ 6 ಗಂಟೆಗೆ ಮುಕ್ತಾಯವಾಗಲಿದ್ದು ಅಂತಿಮ ಅಂಕಿ ಅಂಶಗಳನ್ನು ನಿರೀಕ್ಷಿಸಲಾಗಿದೆ.

ದಾವಣಗೆರೆ ಜಿಲ್ಲೆಯಲ್ಲಿ 7 ಕ್ಷೇತ್ರಗಳಿಂದ 721964 ಪುರುಷ, 720004 ಮಹಿಳೆಯರು, 118 ಇತರೆ ಮತದಾರರು ಸೇರಿ ಒಟ್ಟು 1442086 ಮತದಾರರಿದ್ದರು. 1685 ಮತಗಟ್ಟೆಗಳಲ್ಲಿ ಮತದಾನವು ನಡೆಯಿತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

Watermelon vs Muskmelon : ಕಲ್ಲಂಗಡಿ vs ಕರ್ಬೂಜ |  ಬೇಸಿಗೆಯಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ?

  ಸುದ್ದಿಒನ್ : ಕಲ್ಲಂಗಡಿ ಮತ್ತು ಕರ್ಬೂಜ ಎರಡೂ ಬೇಸಿಗೆಯಲ್ಲಿ ಬಹಳ ಜನಪ್ರಿಯವಾದ ಹಣ್ಣುಗಳಾಗಿವೆ.  ಎರಡನ್ನೂ ಇಷ್ಟಪಡುವ ಅನೇಕ ಜನರಿದ್ದಾರೆ. ಆದರೆ ಈಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು. ಅದರ ಬಗ್ಗೆ ತಿಳಿದುಕೊಳ್ಳೋಣ. ಕಲ್ಲಂಗಡಿ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ,   ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ

error: Content is protected !!