Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿಧಾನಸಭಾ ಚುನಾವಣೆ: ಚಿತ್ರದುರ್ಗ ಜಿಲ್ಲೆಯಲ್ಲಿ ಮುಗಿದ ಮತದಾನ : ಯಾವ ಕ್ಷೇತ್ರದಲ್ಲಿ ಎಷ್ಟು ಶೇಕಡಾವಾರು ಮತದಾನವಾಗಿದೆ ? ಇಲ್ಲಿದೆ ಸಂಪೂರ್ಣ ಮಾಹಿತಿ..!

Facebook
Twitter
Telegram
WhatsApp

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಮೇ.10) : ರಾಜ್ಯ ವಿಧಾನಸಭೆಗೆ ಬುಧವಾರ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಯು ಶಾಂತಿಯುತವಾಗಿ ಮುಕ್ತಾಯವಾಗಿದ್ದು, ಚಿತ್ರದುರ್ಗ ಜಿಲ್ಲೆಯಲ್ಲಿ ಅಂದಾಜು ಶೇ.80.37 ರಷ್ಟು ಮತದಾನವಾಗಿದೆ.

ಬೆಳಿಗ್ಗೆ 7 ಗಂಟೆಗೆ ಮತದಾನ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ, ಮಹಿಳೆಯರು, ಹಿರಿಯ ನಾಗರಿಕರು, ಅಂಗವಿಕಲರು ಹಾಗೂ ಇದೇ ಮೊದಲ ಬಾರಿಗೆ ಮತದಾನ ಮಾಡುವ ಯುವ ಮತದಾರರು ಉತ್ಸಾಹದಿಂದ ಮತಗಟ್ಟೆಗೆ ಬಂದು ಮತ ಚಲಾಯಿಸಿದರು. ಬೆಳಿಗ್ಗೆ ಮಂದಗತಿಯಿಂದ ಆರಂಭವಾದ ಮತದಾನವು ಮಧ್ಯಾಹ್ನದ ಬಿರುಸು ಪಡೆದುಕೊಂಡಿತು.

ಮತಗಟ್ಟೆಯಲ್ಲಿ ಬಿಸಿಲಿನಿಂದ ರಕ್ಷಣೆಗಾಗಿ ಶಾಮಿಯಾನ ವ್ಯವಸ್ಥೆ, ವಿಶ್ರಾಂತಿ ಕೊಠಡಿ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿತ್ತು. ಹಿರಿಯ ನಾಗರಿಕರಿಗೆ ಹಾಗೂ ವಿಕಲಚೇತನರಿಗೆ ಆಸನ ಹಾಗೂ ವ್ಹೀಲ್ ಚೇರ್ ವ್ಯವಸ್ಥೆ ಮಾಡಲಾಗಿತ್ತು.  ಮತಗಟ್ಟೆ ಕೇಂದ್ರಗಳಲ್ಲಿ ಮೊಬೈಲ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿತ್ತು.

ಬೆಳಿಗ್ಗೆ 9ಕ್ಕೆ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಿಂದ ಜಿಲ್ಲೆಯ ಸರಾಸರಿ ಮತದಾನ ಶೇ.6.08 ಮತದಾನವಾಯಿತು. ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ  ಶೇ.8.37 ರಷ್ಟು ಮತದಾನ ನಡೆಯಿತು. ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದಲ್ಲಿ ಶೇ.8.6, ಚಳ್ಳಕೆರೆ ಶೇ.3.6, ಹಿರಿಯೂರು ಶೇ.5.1, ಹೊಸದುರ್ಗ ಶೇ.4.67, ಹೊಳಲ್ಕೆರೆ ಶೇ.5.44 ಮತದಾನ ನಡೆಯಿತು.

ಬೆಳಿಗ್ಗೆ 11ಕ್ಕೆ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಿಂದ ಜಿಲ್ಲೆಯ ಸರಾಸರಿ ಮತದಾನ ಶೇ.18.56 ಮತದಾನವಾಯಿತು. ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ  ಶೇ.20.47 ರಷ್ಟು ಮತದಾನ ನಡೆಯಿತು. ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದಲ್ಲಿ ಶೇ.24.64, ಚಳ್ಳಕೆರೆ ಶೇ.16.35, ಹಿರಿಯೂರು ಶೇ.13.40, ಹೊಸದುರ್ಗ ಶೇ.16.91, ಹೊಳಲ್ಕೆರೆ ಶೇ.18.93 ಮತದಾನ ನಡೆಯಿತು.

ಮಧ್ಯಾಹ್ನ 1ಕ್ಕೆ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಿಂದ ಜಿಲ್ಲೆಯ ಸರಾಸರಿ ಮತದಾನ ಶೇ.36.41 ಮತದಾನವಾಯಿತು. ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ  ಶೇ.38.1 ರಷ್ಟು ಮತದಾನ ನಡೆಯಿತು. ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದಲ್ಲಿ ಶೇ.43.19, ಚಳ್ಳಕೆರೆ ಶೇ.30.16, ಹಿರಿಯೂರು ಶೇ.30.9, ಹೊಸದುರ್ಗ ಶೇ.36, ಹೊಳಲ್ಕೆರೆ ಶೇ.39.39 ಮತದಾನ ನಡೆಯಿತು.

ಮಧ್ಯಾಹ್ನ 3ಕ್ಕೆ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಿಂದ ಜಿಲ್ಲೆಯ ಸರಾಸರಿ ಮತದಾನ ಶೇ.53.05.41 ಮತದಾನವಾಯಿತು. ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ  ಶೇ.53.49 ರಷ್ಟು ಮತದಾನ ನಡೆಯಿತು. ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದಲ್ಲಿ ಶೇ.60.16, ಚಳ್ಳಕೆರೆ ಶೇ.52.19, ಹಿರಿಯೂರು ಶೇ.40, ಹೊಸದುರ್ಗ ಶೇ.55.17, ಹೊಳಲ್ಕೆರೆ ಶೇ.57.71 ಮತದಾನ ನಡೆಯಿತು.

ಸಂಜೆ 5ಕ್ಕೆ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಿಂದ ಜಿಲ್ಲೆಯ ಸರಾಸರಿ ಮತದಾನ ಶೇ.70.74 ಮತದಾನವಾಯಿತು. ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ  ಶೇ.70.47 ರಷ್ಟು ಮತದಾನ ನಡೆಯಿತು. ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದಲ್ಲಿ ಶೇ.76, ಚಳ್ಳಕೆರೆ ಶೇ.69.32, ಹಿರಿಯೂರು ಶೇ.62.05, ಹೊಸದುರ್ಗ ಶೇ.71.87, ಹೊಳಲ್ಕೆರೆ ಶೇ.74.97ರಷ್ಟು ಮತದಾನವಾಯಿತು.

ಅಂತಿಮವಾಗಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಿಂದ ಜಿಲ್ಲೆಯ ಸರಾಸರಿ ಮತದಾನ ಶೇ.80.37 ಮತದಾನವಾಯಿತು. ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ  ಶೇ.76.42 ರಷ್ಟು ಮತದಾನ ನಡೆಯಿತು. ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದಲ್ಲಿ ಶೇ.82.73, ಚಳ್ಳಕೆರೆ ಶೇ.79.8, ಹಿರಿಯೂರು ಶೇ.78.25, ಹೊಸದುರ್ಗ ಶೇ.84, ಹೊಳಲ್ಕೆರೆ ಶೇ.82 ರಷ್ಟು ಮತದಾನವಾಯಿತು.

*ಡಿಸಿ, ಸಿಇಒ, ಎಸ್‍ಪಿ ಮತದಾನ:* ಚಿತ್ರದುರ್ಗ ನಗರದ ಸಂತ ಜೋಸೆಫೆರ ಕಾನ್ವೆಂಟ್ ಶಾಲೆಯಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಅಧಿಕಾರಿ ಎಂ.ಎಸ್.ದಿವಾಕರ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ಮತದಾನ ಮಾಡಿದರು.

ಇದೇ ಮೇ.13ರಂದು ಚಿತ್ರದುರ್ಗ ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ಹೊಸ ಕಟ್ಟಡದಲ್ಲಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ನಡೆಯಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೆಳಗಾವಿ ಅಧಿವೇಶನದಲ್ಲಿ ವಕೀಲ ರಕ್ಷಣಾ ಕಾಯ್ದೆ ಜಾರಿಗೆ ತರಲು ಚಳ್ಳಕೆರೆ ತಾಲೂಕು ವಕೀಲರ ಸಂಘದ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729   ಸುದ್ದಿಒನ್, ಚಳ್ಳಕೆರೆ, ಡಿಸೆಂಬರ್.08 : ಗುಲ್ಬರ್ಗ ಜಿಲ್ಲೆಯ ಉದ್ದೂರು ತಾಲೂಕಿನ ವಕೀಲರಾದ ಈರಣ್ಣಗೌಡಮಾಳಿ ಪಾಟೀಲ್ ರವರ ಮೇಲೆ ಯಾವುದೇ

ಮಕ್ಕಳಲ್ಲಿ ಪ್ರಶ್ನೆ ಮಾಡುವ ಮನೋಭಾವ ಬೆಳಸಬೇಕು : ಜಿಲ್ಲಾಧಿಕಾರಿ ದಿವ್ಯಪ್ರಭು

ಚಿತ್ರದುರ್ಗ.ಡಿ.08: ಶಿಕ್ಷಕರು ಮಕ್ಕಳಿಗೆ ಶಿಕ್ಷಣ ನೀಡುವುದರ ಜೊತೆಗೆ ಪ್ರಶ್ನೆ ಮಾಡುವ ಮನೋಭಾವವನ್ನು ಬೆಳಸಬೇಕು, ಆಗ ಮಾತ್ರ ವಿದ್ಯಾರ್ಥಿಗಳು ಮುಂದೆ ಬರಲು ಸಾಧ್ಯ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್‍ಜೆ ಹೇಳಿದರು. ನಗರದ ತರಾಸು ರಂಗಮಂದಿರದಲ್ಲಿ ಶುಕ್ರವಾರ

ಚಳ್ಳಕೆರೆಯಲ್ಲಿ ಹೃದಯ ವಿದ್ರಾವಕ ಘಟನೆ | ಇಬ್ಬರು ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ನೇಣಿಗೆ ಶರಣಾದ ತಾಯಿ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಡಿಸೆಂಬರ್.08 : ಇಬ್ಬರು ಮಕ್ಕಳನ್ನು ಪಾತ್ರ ನೀರಿನಲ್ಲಿ ಮುಳುಗಿಸಿ ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ

error: Content is protected !!