Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಳ್ಳಾರಿ, ಧಾರವಾಡ, ದಾವಣಗೆರೆ ಸೇರಿ ಹಲವು ಜಿಲ್ಲೆಗಳಲ್ಲಿ ನಾಳೆಯೇ ನಡೆಯಲಿದೆ ಸಹಾಯಕ ಎಂಜಿನಿಯರಿಂಗ್ ನೇಮಕ ಪರೀಕ್ಷೆ..!

---Advertisement---

 

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಾಳೆ ಅಂದ್ರೆ ಭಾನುವಾರ ಪರೀಕ್ಷೆ ನಡೆಯಲಿದೆ. ಕರ್ನಾಟಕ ರಾಜ್ಯ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ 50 ಸಹಾಯಕ ಎಂಜಿನಿಯರಿಂಗ್ ಹುದ್ದೆಗಳಿಗೆ ಕೆಇಎ ಭಾನುವಾರ ಪರೀಕ್ಷೆ ನಡೆಸಲಿದೆ. ಹುದ್ದೆಗೆ ಅರ್ಜಿ ಹಾಕಿರುವ ವಿದ್ಯಾರ್ಥಿಗಳು ನಾಳೆಯ ಪರೀಕ್ಷೆಗೆ ಸಿದ್ಧತೆಯನ್ನು ಈಗಾಗಲೇ ನಡೆಸಿದ್ದು, ಪರೀಕ್ಷೆ ಬರೆಯಲು ರೆಡಿಯಾಗಿದ್ದಾರೆ.

ಇನ್ನು ಈ ಪರೀಕ್ಷೆಯನ್ನು ಒಟ್ಟು 28 ಕೇಂದ್ರಗಳಲ್ಲಿ ನಡೆಸಲಾಗುತ್ತಿದೆ. ಬೆಂಗಳೂರು ಉತ್ತರ, ಬಳ್ಳಾರಿ, ಧಾರವಾಡ, ದಾವಣಗೆರೆ, ಕಲ್ಬುರ್ಗಿ ಮತ್ತು ಮೈಸೂರು ನಗರಗಳ ಒಟ್ಟು 28 ಕೇಂದ್ರಗಳಲ್ಲಿ ನಡೆಸಲಾಗುತ್ತಿದೆ. ಈ ಆರು ಜಿಲ್ಲೆಗಳಲ್ಲಿಯೇ ಪರೀಕ್ಷಾ ಕೇಂದ್ರಗಳನ್ನು ಮಾಡಲಾಗಿದೆ. ಪರೀಕ್ಷೆ ನಡೆಯುವ ರೀತಿ, ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಎಲ್ಲಾ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಅವರು ಮಾಹಿತಿ ನೀಡಿದ್ದಾರೆ.

ಇನ್ನು ಸಹಾಯಕ ಇಂಜಿನಿಯರಿಂಗ್ ಹುದ್ದೆಗಳು ಅರ್ಜಿ ಕರೆದಿರುವುದು ಕೇವಲ 50. ಆದರೆ ಈ ಹುದ್ದೆಗಳಿಗೆ ಅರ್ಜಿ ಹಾಕಿರುವುದು 14,131 ಅಭ್ಯರ್ಥಿಗಳು. ಎಲ್ಲರೂ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಈ ಎಲ್ಲರಿಗೂ ಪರೀಕ್ಷೆಗೆ ಅವಕಾಶ ಮಾಡಲಾಗಿದೆ. ಇನ್ನು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮ ನಡೆಯುವುದು ಅಲ್ಲಲ್ಲಿ ಸುದ್ದಿಯಾಗುತ್ತಿರುತ್ತದೆ. ಎಷ್ಟೋ ಪರೀಕ್ಷೆಗಳಲ್ಲಿ ಸುಲಭವಾಗಿ ಅಕ್ರಮ ನಡೆಯುವುದಕ್ಕೆ ಬಿಟ್ಟು, ಪರೀಕ್ಷೆಗಳನ್ನು ಮುಂದೂಡಿಯೋ, ಮರು ಪರೀಕ್ಷೆ ಮಾಡುವ ಮೂಲಕವೋ ಮಕ್ಕಳ ಭವಿಷ್ಯದ ಜೊತೆಗೆ ಆಟವಾಡಿದಂತೆ ಆಗುತ್ತದೆ. ಹೀಗಾಗಿ ಈ ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ವೆಬ್ ಕಾಸ್ಟಿಂಗ್ ಮೂಲಕ ನಿಗಾ ಇಡಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment