Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಕಚೇರಿಯಲ್ಲಿ ಕಾಂಗ್ರೆಸ್‍ನ 138 ನೇ ಸಂಸ್ಥಾಪನಾ ದಿನಾಚರಣೆ

---Advertisement---

 

 

ವರದಿ ಮತ್ತು ಫೋಟೋ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ,ಡಿಸೆಂಬರ್.28 : ಕಾಂಗ್ರೆಸ್‍ನ 138 ನೇ ಸಂಸ್ಥಾಪನಾ ದಿನವನ್ನು ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಆಚರಿಸಲಾಯಿತು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ರಾಷ್ಟ್ರಪಿತ ಮಹಾತ್ಮಗಾಂಧಿಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತ್ತ 1885 ರಲ್ಲಿ ಕಾಂಗ್ರೆಸ್ ಸಂಸ್ಥಾಪನೆಯಾಯಿತು. ಅಲ್ಲಿಂದ ಇಲ್ಲಿಯವರೆಗೂ ಅನೇಕ ವರ್ಗದವರು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರುಗಳಾಗಿದ್ದಾರೆ. ಅದರಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ, ಮಲ್ಲಿಕಾರ್ಜುನ ಖರ್ಗೆ ಇವರುಗಳು ಪ್ರಮುಖರು ಎನ್ನುವುದನ್ನು ಸ್ಮರಿಸಿದರು.

ದೇಶವನ್ನು ಬ್ರಿಟೀಷರ ಗುಲಾಮಗಿರಿಯಿಂದ ಹೊರತರಬೇಕೆನ್ನುವ ಉದ್ದೇಶದಿಂದ ಕಾಂಗ್ರೆಸ್ ಸಂಸ್ಥಾಪನೆಯಾಯಿತು. ಆಗ ಅನೇಕರು ಪ್ರಾಣ ತ್ಯಾಗ ಮಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ. ಪಂಚವಾರ್ಷಿಕ ಯೋಜನೆಯನ್ನು ಜಾರಿಗೆ ತಂದಿದ ಕಾಂಗ್ರೆಸ್ ಕೃಷಿ, ನೀರಾವರಿಗೆ ಉತ್ತೇಜನ ನೀಡಿತು. ಅನೇಕ ಡ್ಯಾಂಗಳು, ವಿಶ್ವವಿದ್ಯಾನಿಲಯಗಳು, ಕೈಗಾರಿಕೆ, ಸ್ಟೀಲ್ ಪ್ಲಾಂಟ್, ರೈಲ್ವೆ ಇನ್ನು ಪ್ರಮುಖ ಯೋಜನೆಗಳು ಸೇರಿವೆ ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ, ಉಪಾಧ್ಯಕ್ಷ ಎಸ್.ಎನ್.ರವಿಕುಮಾರ್, ಪದವೀಧರ ವಿಭಾಗದ ಅಧ್ಯಕ್ಷ ಮುದಸಿರ್ ನವಾಜ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಿಕಾಂತ್, ಸೇವಾದಳದ ಅಧ್ಯಕ್ಷ ಬೂತೇಶ್ ಇನ್ನು ಅನೇಕರು ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment