Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ಆರೋಪಿಗಳ ಜೊತೆ ಪೊಲೀಸರಿಂದ ಸ್ಥಳ ಮಹಜರು

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಜೂ.14  : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಈಗಾಗಲೇ ಈ ಕೇಸಿಗೆ ಸಂಬಂಧಿಸಿದಂತೆ ಹದಿನಾಲ್ಕು ಜನ ಜೈಲಿನಲ್ಲಿದ್ದಾರೆ. ಇದೀಗ ಪೊಲೀಸರು ಚಿತ್ರದುರ್ಗಕ್ಕೆ ಆರೋಪಿಗಳನ್ನು ಕರೆತಂದು ರಾತ್ರಿ ಸ್ಥಳ ಮಹಜರು ನಡೆಸಿದ್ದಾರೆ.

ಆರೋಪಿ ರಘು ಜೊತೆಗೆ ಹೋಗಿ ಪೊಲೀಸರು ಸ್ಥಳ ಮಹಜರು ಮಾಡಿದ್ದಾರೆ. ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಹೇಗೆ, ಎಲ್ಲಿಂದ ಕರೆದುಕೊಂಡು ಹೋದರು ಎಂಬ ಮಾಹಿತಿ ಕಲೆ ಹಾಕಿರುವ ಪೊಲೀಸರು, ಅಲ್ಲಿಂದ ಸ್ಥಳ ಮಹಜರು ಮಾಡಿದ್ದಾರೆ. ಮೊದಲಿಗೆ ಕುಂಚಿಕಲ್ ಬಳಿ ಇರುವ ಜಗಳೂರು ಮಹಾಲಿಂಗಪ್ಪ ಪೆಟ್ರೋಲ್ ಬಂಕ್ ಬಳಿಯ ಟೀ ಸ್ಟಾಲ್ ಹತ್ತಿರ ಸ್ಥಳ ಮಹಜರು ನಡೆಸಿ ಆರೋಪಿಯನ್ನು ಬೆಂಗಳೂರಿಗೆ ಕರೆದೊಯ್ದರು.

ಆರೋಪಿ ರಘು ಮೃತ ರೇಣುಕಾ ಸ್ವಾಮಿಯನ್ನು ದರ್ಶನ್ ಬಳಿ ಕರೆದೊಯ್ದಲು ಚಿತ್ರದುರ್ಗ ನಗರದಿಂದ ಆಟೋ ಮೂಲಕ ಜಗಳೂರು ಮಹಾಲಿಂಗಪ್ಪ ಪೆಟ್ರೋಲ್ ಬಂಕ್ ಬಳಿಗೆ ಕರೆದುಕೊಂಡು ಹೋಗಿ ನಂತರ ಅಲ್ಲಿಂದ ಟ್ಯಾಕ್ಸಿ ಮೂಲಕ ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದರು ಈ ಹಿನ್ನೆಲೆಯಲ್ಲಿ ಆರೋಪಿಯ ಹೇಳಿಕೆ ಪೊಲೀಸರು ಸ್ಥಳ ಮಹಜರು ನಡೆಸಿದರು.

 

ಕೊಲೆ ಕೇಸಿನಲ್ಲಿ ಹದಿನೇಳು ಮಂದಿ ಭಾಗಿಯಾಗಿದ್ದರು. ಈಗ ಹದಿನಾಲ್ಕು ಮಂದಿ ಪೊಲೀಸರ ವಶದಲ್ಲಿದ್ದಾರೆ. ಆದರೆ ಇನ್ನಿಬ್ಬರು ನಾಪತ್ತೆಯಾಗಿದ್ದು, ಪೊಲೀಸರು ಹುಡುಕಾಟದಲ್ಲಿದ್ದಾರೆ. ರವಿ ಎಂಬಾತ ನಿನ್ನೆ ತಾನೇ ಬಂದು ಪೊಲೀಸರಿಗೆ ಸರೆಂಡರ್ ಆಗಿದ್ದಾನೆ. ಇನ್ನು ಪೊಲೀಸರಿಂದ ತೀವ್ರ ತನಿಖೆಯಾಗುತ್ತಿದ್ದು, ಎಲ್ಲಾ ಕಡೆಯೂ ಮಾಹಿತಿ ಕಲೆ ಹಾಕುತ್ತಿದ್ದಾರೆ. ಈಗಾಗಲೇ ಪವಿತ್ರಾ ಗೌಡ ಎ1 ಆರೋಪಿಯಾಗಿದ್ದು, ದರ್ಶನ್ ಎ2 ಆರೋಪಿಯಾಗಿದ್ದಾರೆ. ಉಳಿದವರು ಆರೋಪಿ ಸ್ಥಾನದಲ್ಲಿ ನಿಂತಿದ್ದು, ಇನ್ನಿಬ್ಬರ ಹುಡುಕಾಟ ನಡೆಯುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕವಾಡಿಗರ ಹಟ್ಟಿ ಅಭಿವೃದ್ದಿಗೆ ಕ್ರಮ :  ನಗರಸಭೆ ಆಯುಕ್ತೆ ರೇಣುಕಾ ಸ್ಪಷ್ಟನೆ

ಚಿತ್ರದುರ್ಗ ಜೂ. 18 : ನಗರದ ಹೊರ ವಲಯದಲ್ಲಿರುವ ಕವಾಡಿಗರ ಹಟ್ಟಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳು ಚಾಲನೆಯಲ್ಲಿದ್ದು, ತ್ವರಿತ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ನಗರಸಭೆ ಪೌರಾಯುಕ್ತೆ ರೇಣುಕಾ ಅವರು ತಿಳಿಸಿದ್ದಾರೆ.   ಕಳೆದ

ಹೃದಯ ಸಂಬಂಧಿ ಕಾಯಿಲೆಗಳನ್ನು ಗ್ಯಾಸ್ಟ್ರಿಕ್ ಎಂದು ಉದಾಸೀನ ಮಾಡಬೇಡಿ : ಡಾ.ಬಿ.ಗುರುರಾಜ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಜೂ.18 : ಹೃದಯ ಸಂಬಂಧಿ ಕಾಯಿಲೆಗಳನ್ನು ಗ್ಯಾಸ್ಟ್ರಿಕ್ ಸಮಸ್ಯೆಯೆಂದು ಉದಾಸೀನ ಮಾಡಬೇಡಿ. ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ

ಚಿತ್ರದುರ್ಗ | ಹೂವಿನ ಮಾರುಕಟ್ಟೆಯಲ್ಲಿ ಅಳತೆಯಲ್ಲಿ ಮೋಸ : ಕರ್ನಾಟಕ ರಾಜ್ಯ ರೈತ ಸಂಘ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಜೂನ್ 18 : ಎ.ಪಿ.ಎಂ.ಸಿ. ಆವರಣದಲ್ಲಿರುವ ಹೂವಿನ ಮಾರುಕಟ್ಟೆಯಲ್ಲಿ ಅಳತೆಯಲ್ಲಿ ಮೋಸವಾಗುತ್ತಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ

error: Content is protected !!