ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಉಡುಪಿ: ಎಲ್ಲರ ಚಿತ್ತ ಸದ್ಯ ಚಂದ್ರಯಾನ 3 ಕಡೆ ನೆಟ್ಟಿದೆ. ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಲ್ಯಾಂಡ್ ಆಗುವುದಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಇದೆ. ನಿಗದಿತ ಸಮಯದಂತೆ ವಿಕ್ರಂ ಲ್ಯಾಂಡರ್ ಇಳಿದರೆ ನಾಳೆ ಸಂಜೆ 6 ಗಂಟೆಯ ನಂತರ ಚಂದ್ರ ಮೇಲೆ ಸೇಫ್ ಲ್ಯಾಂಡಿಂಗ್ ಆಗಲಿದೆ. ಈ ಕುತೂಹಲದ ಘಟ್ಟದಲ್ಲಿಯೇ ಎಲ್ಲರೂ ಇರುವಾಗಲೇ ಉಡುಪಿ ಮೂಲದ ಜ್ಯೋತಿಷಿ ಪ್ರಕಾಶ್ ಅಮ್ಮಣ್ಣಾಯ ಇದೀಗ ಚಂದ್ರಯಾನ 3 ಭವಿಷ್ಯ ನುಡಿದಿದ್ದಾರೆ.
ಜ್ಯೋತಿಷ್ಯ ಹಾಗೂ ವಿಜ್ಞಾನ ಎರಡೂ ಲೆಕ್ಕಚಾರಗಳು ಒಂದೇ. ಚಂದ್ರಯಾನ 3 ನೌಕೆಯನ್ನು ತುಲಾ ಲಗ್ನದಲ್ಲಿ ಕಳುಹಿಸಲಾಗಿದೆ. ಅದು ಕುಂಭ ಲಗ್ನದಲ್ಲಿಯೇ ಇಳಿಯಬೇಕು. ಅಂದ್ರೆ ಆಗಸ್ಟ್ 23ರ ಸಂಜೆ 6.30ರ ನಂತರ ಇಳಿಯಬೇಕಾಗುತ್ತದೆ. ಅಲ್ಲದೆ ಭಾರತೀಯ ವಿಜ್ಞಾನಿಗಳು ತಿರುಪತಿ ತಿಮ್ಮಪ್ಪನ ದರ್ಶನ ಮಾಡಿ, ಆಶೀರ್ವಾದ ಪಡೆದು ಉಡಾವಣೆ ಮಾಡಿದ್ದಾರೆ. ಹೀಗಾಗಿ ಅದಹ ಯಶಸ್ವಿಯಾಗಲೇಬೇಕು. ಸಂಜೆ 6.30ರ ನಂತರ ಚಂದ್ರನ ಮೇಲೆ ಇಳಿಯಬೇಕು ಎಂದಿದ್ದಾರೆ.
ಇನ್ನು ಇದೇ ವೇಳೆ ರಷ್ಯಾದ ಲೂನಾ 25 ವಿಫಲವಾಗುವುದಕ್ಕೂ ಕಾರಣ ತಿಳಿಸಿದ್ದಾರೆ. ರಷ್ಯಾ ಮಿಥುನ ಲಗ್ನದಲ್ಲಿ ಉಡಾವಣೆ ಮಾಡಿದೆ. ಕುಜದ ಪರಿಣಾಮ ಯಾಂತ್ರೀಕೃತ ದೋಷದಿಂದ ರಷ್ಯಾ ಉಪಗ್ರಹ ವಿಫಲವಾಗಿದೆ ಎಂದು ರಷ್ಯಾದ ಉಪಗ್ರಹ ವಿಫಲತೆಗೆ ಕಾರಣ ತಿಳಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್