Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿಕ್ರಂ ಲ್ಯಾಂಡರ್ ಎಷ್ಟು ಗಂಟೆಗೆ ಚಂದ್ರನ ಮೇಲೆ ಇಳಿಯಬೇಕು..? ಉಡುಪಿ ಮೂಲದ ಜ್ಯೋತಿಷಿಗಳಿಂದ ಚಂದ್ರಯಾನ 3 ಭವಿಷ್ಯ..!

---Advertisement---

 

 

ಉಡುಪಿ: ಎಲ್ಲರ ಚಿತ್ತ ಸದ್ಯ ಚಂದ್ರಯಾನ 3 ಕಡೆ ನೆಟ್ಟಿದೆ. ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಲ್ಯಾಂಡ್ ಆಗುವುದಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಇದೆ. ನಿಗದಿತ ಸಮಯದಂತೆ ವಿಕ್ರಂ ಲ್ಯಾಂಡರ್ ಇಳಿದರೆ ನಾಳೆ ಸಂಜೆ 6 ಗಂಟೆಯ ನಂತರ ಚಂದ್ರ ಮೇಲೆ ಸೇಫ್ ಲ್ಯಾಂಡಿಂಗ್ ಆಗಲಿದೆ. ಈ ಕುತೂಹಲದ ಘಟ್ಟದಲ್ಲಿಯೇ ಎಲ್ಲರೂ ಇರುವಾಗಲೇ ಉಡುಪಿ ಮೂಲದ ಜ್ಯೋತಿಷಿ ಪ್ರಕಾಶ್ ಅಮ್ಮಣ್ಣಾಯ ಇದೀಗ ಚಂದ್ರಯಾನ 3 ಭವಿಷ್ಯ ನುಡಿದಿದ್ದಾರೆ.

ಜ್ಯೋತಿಷ್ಯ ಹಾಗೂ ವಿಜ್ಞಾನ ಎರಡೂ ಲೆಕ್ಕಚಾರಗಳು ಒಂದೇ. ಚಂದ್ರಯಾನ 3 ನೌಕೆಯನ್ನು ತುಲಾ ಲಗ್ನದಲ್ಲಿ ಕಳುಹಿಸಲಾಗಿದೆ. ಅದು ಕುಂಭ ಲಗ್ನದಲ್ಲಿಯೇ ಇಳಿಯಬೇಕು. ಅಂದ್ರೆ ಆಗಸ್ಟ್ 23ರ ಸಂಜೆ 6.30ರ ನಂತರ ಇಳಿಯಬೇಕಾಗುತ್ತದೆ. ಅಲ್ಲದೆ ಭಾರತೀಯ ವಿಜ್ಞಾನಿಗಳು ತಿರುಪತಿ ತಿಮ್ಮಪ್ಪನ ದರ್ಶನ ಮಾಡಿ, ಆಶೀರ್ವಾದ ಪಡೆದು ಉಡಾವಣೆ ಮಾಡಿದ್ದಾರೆ. ಹೀಗಾಗಿ ಅದಹ ಯಶಸ್ವಿಯಾಗಲೇಬೇಕು. ಸಂಜೆ 6.30ರ ನಂತರ ಚಂದ್ರನ ಮೇಲೆ ಇಳಿಯಬೇಕು ಎಂದಿದ್ದಾರೆ.

ಇನ್ನು ಇದೇ ವೇಳೆ ರಷ್ಯಾದ ಲೂನಾ 25 ವಿಫಲವಾಗುವುದಕ್ಕೂ ಕಾರಣ ತಿಳಿಸಿದ್ದಾರೆ. ರಷ್ಯಾ ಮಿಥುನ ಲಗ್ನದಲ್ಲಿ ಉಡಾವಣೆ ಮಾಡಿದೆ. ಕುಜದ ಪರಿಣಾಮ ಯಾಂತ್ರೀಕೃತ ದೋಷದಿಂದ ರಷ್ಯಾ ಉಪಗ್ರಹ ವಿಫಲವಾಗಿದೆ ಎಂದು ರಷ್ಯಾದ ಉಪಗ್ರಹ ವಿಫಲತೆಗೆ ಕಾರಣ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment