Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಂಭಾಪುರಿ ಶ್ರೀಗಳಿಂದ ರೇಣುಕಾಸ್ವಾಮಿ ಮನೆಯಲ್ಲಿ ಆತ್ಮಶಾಂತಿ ಪೂಜೆ..!

---Advertisement---

ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆಯಾಗಿ ಆರೇಳು ತಿಂಗಳು ಕಳೆದುದ್ದು, ಇದೀಗ ಮನೆಯಲ್ಲಿ ಶಾಂತಿ ಪೂಜೆಯನ್ನು ನೆರವೇರಿಸಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಮನೆಯಲ್ಲಿ ರಂಭಾಪುರಿ ಶ್ರೀಗಳಿಂದ ಆತ್ಮಶಾಂತಿ ಹಾಗೂ ವಾಸ್ತು ಪೂಜೆ ನೆರವೇರಿದೆ. ರೇಣುಕಾಸ್ವಾಮಿ ಮನೆಯಲ್ಲಿಯೇ ವಾಸ್ತವ್ಯ ಹೂಡೊದ್ದ ರಂಭಾಪುರಿ ಶ್ರೀಗಳು ಪೂಜೆಯನ್ನು ಸುಸೂತ್ರವಾಗಿ ಮುಗಿಸಿದ್ದಾರೆ. ಕುಟುಂಬಸ್ಥರಿಗೆ ಆಶೀರ್ವಾದ ಮಾಡಿ ಮಗನ ಸಾವಿಗೆ ನ್ಯಾಯ ಸಿಗುವುದಾಗಿಯೂ ಭರವಸೆ ನೀಡಿದ್ದಾರೆ.

ಪೂಜೆ ಬಳಿಕ ಮಾತನಾಡಿರುವ ರೇಣುಕಾಸ್ವಾಮಿ ತಂದೆ ಕಾಶೀನಾಥಯ್ಯ, ನಮ್ಮ ಮೊಮ್ಮಗ ಹಾಗೂ ಸೊಸೆ ಕೂಡ ಈ ಪೂಜೆಯಲ್ಲಿ ಭಾಗಿಯಾಗಿದ್ದರೆ ಚೆನ್ನಾಗಿರುತ್ತಾ ಇತ್ತು. ಆದರೆ ಇಉಗ ಅವರು ತವರು ಮನೆಯಲ್ಲಿದ್ದಾರೆ. ಹೀಗಾಗಿ ಅವರು ಪೂಜೆಯಲ್ಲಿ ಭಾಗಿಯಾಗಲು ಆಗಿಲ್ಲ. ಅವರಿಗೂ ಗುರುಗಳು ಆಶಿಉರ್ವಾದ ಮಾಡಿದ್ದಾರೆ ಎಂದಿದ್ದಾರೆ.

ಗುರುಗಳು ಈ ಕಡೆ ಬಂದಾಗ ಪೂಜೆ ಮಾಡಿಸುವ ಭರವಸೆ ನೀಡಿದ್ದರು. ಅದರಂತೆ ಮನೆಗೆ ಬಂದು ಪೂಜೆ ಮಾಡಿಸಿ ಕೊಟ್ಟಿದ್ದಾರೆ. ವಾಸ್ತು ಶಾಂತಿ, ಮಗನಿಗೆ ಆತ್ಮಶಾಂತಿಯ ಪೂಜೆಯನ್ನು ಮಾಡಲಾಗಿದೆ‌. ಗುರುಗಳ ದಯೆಯಿಂದ ನಮಗೆ ಎಲ್ಲಾ ಒಳ್ಳೆಯದೆ ಆಗುತ್ತದೆ. ಮಗನ ಸಾವಿನ ವಿಚಾರದಲ್ಲಿ ನ್ಯಾಯ ಸಿಗುತ್ತದೆ ಎಂದು ಹೇಳಿದ್ದಾರೆ. ನಾವೂ ಆಗಾಗ ಗುರುಗಳನ್ನು ಭೇಟಿಯಾಗಿ, ಅವರ ಬಳಿ ನಮ್ಮ ಕಷ್ಟ ಸುಖಗಳನ್ನೆಲ್ಲಾ ಹಂಚಿಕೊಳ್ಳಯತ್ತೇವೆ. ಆ ಒಂದು ಶಕ್ತಿಯೇ ನಮ್ಮನ್ನು ಕಾಪಾಡುತ್ತಿರುವುದು. ಗುರುಗಳು ನಮ್ಮ ಮಗನ ಆತ್ಮ ಶಾಂತಿ ಪೂಜೆ ಮಾಡಿ, ನಮಗೆ ಆಶೀರ್ವಾದ ಮಾಡಿ ಹೋಗಿದ್ದಾರೆ. ಅವರು ನಮಗೆ ಧೈರ್ಯ ಕೊಟ್ಟು ಹೋಗಿದ್ದಾರೆ. ಮಗನ ಸಾವಿನಲ್ಲಿ ಕಾನೂನು ಏನೇ ಆಗಲಿ ಭಗವಂತ ನಮ್ಮ ಜೊತೆಗಿದ್ದಾನೆ ಎಂದು ಹೇಳಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment