Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಣು ಬೋಧನೆ ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು ವಿಧಾನ :  ಉಪನ್ಯಾಸಕಿ ಅರ್ಚನ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮೇ. 07 : ಅಣು ಬೋಧನೆ ಎನ್ನುವುದು ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು ವಿಧಾನ ಎಂದು ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕಿ ಅರ್ಚನ ತಿಳಿಸಿದರು.

ದಾವಣಗೆರೆ ವಿಶ್ವವಿದ್ಯಾನಿಲಯ ರಾಷ್ಟ್ರೀಯ ಹೆದ್ದಾರಿ-13 ಪಿಳ್ಳೆಕೆರನಹಳ್ಳಿಯಲ್ಲಿರುವ ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ಅಣು ಬೋಧನಾ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಬಿ.ಇ.ಡಿ. ವಿದ್ಯಾರ್ಥಿಗಳ ಬೋಧನೆಗೆ ಅವಶ್ಯವಿರುವ ಕೌಶಲ್ಯಗಳ ತರಬೇತಿ ನೀಡಲು ಇದೊಂದು ಪ್ರಾಯೋಗಿಕ ಕಾರ್ಯಾಗಾರವಾಗಿದ್ದು, ಬೋಧನೆಯ ಹಲವಾರು ಕೌಶಲ್ಯಗಳನ್ನು ಅಭ್ಯಾಸ ಮಾಡಿ ಕರಗತ ಮಾಡಿಕೊಳ್ಳುವುದು ಅಣು ಬೋಧನೆಯ ವಿಧಾನ ಎಂದು ಹೇಳಿದರು.

ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಶ್ರೀಮತಿ ಜಯಲಕ್ಷ್ಮಿ ಮಾತನಾಡಿ ಯೋಜನೆ, ಬೋಧನೆ, ಪುಷ್ಠೀಕರಣ, ಪುನರ್ ಯೋಜನೆ, ಪುನರ್ ಬೋಧನೆ, ಪುನರ್ ಪುಷ್ಠೀಕರಣ ಅಣು ಬೋಧನೆಯ ವಿಧಾನಗಳು ಎಂದು ತಿಳಿಸಿದರು.
ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ಕಾರ್ಯದರ್ಶಿ ಕೆ.ಎಂ.ವೀರೇಶ್, ಉಪ ಪ್ರಾಂಶುಪಾಲರಾದ ಹೆಚ್.ಎನ್.ಶಿವಕುಮಾರ್, ಉಪನ್ಯಾಸಕರುಗಳಾದ ಡಾ.ಹನುಮಂತರೆಡ್ಡಿ, ಪದ್ಮಶ್ರಿ, ಮಂಜಪ್ಪ ಎಸ್. ಇವರುಗಳು ವೇದಿಕೆಯಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment