Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮನರಂಜನೆಗಾಗಿ ದೈವಗಳ ಬಳಕೆ ಮಾಡಿದರೆ ಅಟ್ರಾಸಿಟಿ ಕೇಸ್ ಎಚ್ಚರಿಕೆ..!

---Advertisement---

ಮಂಗಳೂರು: ತುಳುನಾಡಿನ ದೈವಗಳ ಬಗ್ಗೆ ಈಗೀಗ ಎಲ್ಲರಿಗೂ ತಿಳಿಯುತ್ತಿದೆ. ಆದರೆ ಕೆಲವರು ಭಕ್ತಿಯಿಂದ ಕೈಮುಗಿಯುತ್ತಾರೆ. ಇನ್ನು ಕೆಲವು ಕಡೆ ಆ ದೈವಗಳ ವೇಷವನ್ನು ಧರಿಸುತ್ತಾರೆ. ಈ ಸಂಬಂಧ ದೈವ ಪಾತ್ರಿ ದಯಾನಂದ ಕತ್ತಲ್ಸಾರ ಅಟ್ರಾಸಿಟಿ ಕೇಸ್ ದಾಖಲಿಸುವ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ದಯಾನಂದ ಕತ್ತಲ್ಸಾರ, ಮನರಂಜನೆಗಾಗಿ ದೈವಗಳ ಬಳಕೆ ಮಾಡಲಾಗುತ್ತಿದೆ. ಇದರಿಂದ ದೈವಗಳಿಗೆ ಅವಮಾನವಾದಂತೆ ಆಗುತ್ತಿದೆ. ತುಳುನಾಡಿನ ದೈವಗಳಂತೆ ವೇಷತೊಟ್ಟು ಅವಮಾನ ಮಾಡಲಾಗುತ್ತಿದೆ. ಹಣ ಸಂಪಾದನೆಗಾಗಿ ತುಳುನಾಡಿನ ದೈವಗಳ ವೇಷ ತೊಡುತ್ತಿದ್ದಾರೆ. ಬೆಂಗಳೂರು ಸೇರಿದಂತೆ ಹಲವು ಕಡೆ ಈ ರೀತಿಯಾದಂತೆ ಬೆಳವಣಿಗೆ ನಡೆಯುತ್ತಿದೆ. ಕಾರ್ಯಕ್ರಮಗಳಲ್ಲಿ ತುಳುನಾಡಿನ ದೈವಗಳ ವೇಷ ಧರಿಸಿ, ಅಶ್ಲೀಲವಾಗಿ ನೃತ್ಯ ಮಾಡುತ್ತಾರೆ. ಭೂತ ಬಿಡಿಸಲು ತುಳುನಾಡಿನ ದೈವಗಳ ವೇಷ ತೊಟ್ಟು ನರ್ತನ ಮಾಡಲಾಗುತ್ತದೆ. ಕೆಲವು ಕಿಡಿಗೇಡಿಗಳು ಹಣಕ್ಕಾಗಿ ದೈವಗಳ ವೇಷ ತೊಡುತ್ತಿದ್ದಾರೆ.

ಈ ರೀತಿ ಮಾಡುತ್ತಿರುವುದರಿಂದ ಕೆಲವು ಸಮುದಾಯಗಳಿಗೆ ಅಪಮಾನವಾಗುತ್ತಿದೆ. ಪಂಬದ, ಪರವ, ನಲಿಕೆ ಸಮುದಾಯಗಳಿಗೆ ಅಪಮಾನವಾಗುತ್ತಿದೆ. ದೈವಗಳ ಅಪಪ್ರಚಾರದ ವಿರುದ್ಧ ರಿಷಭ್ ಶೆಟ್ಟಿ ಅವರು ಧ್ವನಿ ಎತ್ತಬೇಕು. ಕಿಡಿಗೇಡಿಗಳ ವಿರುದ್ಧ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದಿದ್ದಾರೆ. ದೈವಗಳಿಗೆ ಅಪಮಾನ ಮಾಡಿದರೆ ಅಂಥವರ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಕಾಂತಾರಾ ಸಿನಿಮಾದಲ್ಲಿ ದೈವಗಳ ಬಗ್ಗೆ ಹೆಚ್ಚಿನ ಮಾಹಿತಿ ನೀಡಿಲಾಗಿತ್ತು. ಆದರೆ ಸಿನಿಮಾದಲ್ಲಿ ಓ ಎಂದು ಕೂಗುವ ಧ್ವನಿಯ ದೇವರ ಭಕ್ತಿಯ ಸಂಕೇತ. ಅದನ್ನ ಹೇಗಂದರೆ ಹಾಗೇ, ಎಲ್ಲೆಂದರಲ್ಲಿ ಕೂಗಬಾರದು ಎಂಬ ನಿಯಮವಿದೆ. ಆದರೆ ಸಿನಿಮಾ ನೋಡಿದ ಪ್ರತಿಯೊಬ್ಬರು ಥಿಯೇಟರ್ ನಲ್ಲಿಯೇ ಕೂಗುವುದಕ್ಕೆ ಶುರು ಮಾಡಿದ್ದರು. ಆಗ ರಿಷಬ್ ಶೆಟ್ಟಿ ಅವರು ಮನವಿಯನ್ನು ಮಾಡಿದ್ದರು‌.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment