Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಸರ್ಕಾರಿ ನೌಕರರ ಹಲ್ಲೆ ಖಂಡನೀಯ : ನಿಕಟ ಪೂರ್ವ ಅಧ್ಯಕ್ಷ ಕೆ.ಮಂಜುನಾಥ್ ಆಕ್ರೋಶ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಚಿತ್ರದುರ್ಗ,(ಜು.13) :  ಪಿ.ಎಂ.ಜಿ.ಎಸ್.ವೈ ಯೋಜನಾ ಉಪ ವಿಭಾಗ ಚಿತ್ರದುರ್ಗದ ಸಹಾಯಕ ಇಂಜಿನಿಯರ್ ನಾಗರಾಜ್.ಜಿ.ಎಂ ಇವರ ಮೇಲೆ ನಡೆದಿರುವ ಹಲ್ಲೆಯ ಅತ್ಯಂತ ಖಂಡನೀಯ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಚಿತ್ರದುರ್ಗ ನಿಕಟ ಪೂರ್ವ ಅಧ್ಯಕ್ಷ ಮಂಜುನಾಥ್. ಕೆ. ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ನೌಕರರ ಸಮುದಾಯದಲ್ಲಿ ಗೊಂದಲಗಳು ಉಂಟಾಗಿ ಸರ್ಕಾರಿ ಸೇವೆಯಲ್ಲಿ ಸಾರ್ವಜನಿಕರ ಸೇವೆ ಮಾಡುವ ನಮ್ಮಂತಹ ನೌಕರರ ಮೇಲೆ ದೌರ್ಜನ್ಯಗಳು ನಡೆಯುತ್ತಿರುವುದು ಇದೇ ಮೊದಲಲ್ಲ ಈ ಹಿಂದೆಯೂ ಇಂತಹ ದುಷ್ಕೃತ್ಯಗಳು ಅನೇಕ ನಡೆದಿದೆ ಈ ಬಗ್ಗೆ ಸಾಕಷ್ಟು ಮುಷ್ಕರಗಳು ಹೋರಾಟಗಳು ಮೌನ ಮೆರವಣಿಗೆಗಳು ನಡೆದಿದ್ದರೂ ಸಹ ಇಂತಹ ಹಲ್ಲೆಗಳು, ಹವ್ಯಾಚ ಪದಗಳಿಂದ ನಿಂದಿಸುವುದು, ಮಾರಣಾಂತಿಕ ಹಲ್ಲೆ ಮಾಡುವುದು, ಕೊಲೆ ಮಾಡಿರುವುದು ನಿಂತಿಲ್ಲ ಇದನ್ನು ಇಡೀ ನೌಕರರ ಸಮುದಾಯ ಖಂಡಿಸುತ್ತದೆ ಎಂದು ಅವರು ಹೇಳಿದ್ದಾರೆ.

ಸರ್ಕಾರಿ ನೌಕರರು ತಪ್ಪು ಮಾಡಿದಾಗ ಮೇಲಾಧಿಕಾರಿಗಳಿಗೆ ದೂರು ನೀಡುವುದು ಅಥವಾ ಲೋಕಾಯುಕ್ತರಿಗೆ ದೂರು ನೀಡುವುದು ಮಾಡಲಿ ಅದನ್ನು ಹೊರತುಪಡಿಸಿ ದೈಹಿಕವಾಗಿ ದಂಡನೆ ಮಾಡುವುದು ಅಪರಾಧವಾಗಿರುತ್ತದೆ ನಾವು ಕೂಡ ಮನುಷ್ಯರು ನಮ್ಮನ್ನು ನಂಬಿಕೊಂಡಿರುವ ಕುಟುಂಬಗಳು ಇರುವುದನ್ನು ಮರೆಯಬಾರದು. ಸಾರ್ವಜನಿಕ ಸೇವೆಯಲ್ಲಿ, ಸಾರ್ವಜನಿಕ ಬದುಕಿನಲ್ಲಿ ವ್ಯತ್ಯಾಸಗಳಾಗುವುದು ಸರ್ವೇಸಾಮಾನ್ಯ ಅದಕ್ಕೆ ಹಲ್ಲೆ ಮಾಡುವುದು, ಕೊಲೆ ಮಾಡುವುದೇ ಪರಿಹಾರವಲ್ಲ. ಸರ್ಕಾರಿ ಸೇವೆಗೆ ಅಡ್ಡಿಪಡಿಸಿದಂತಹ ಕಿಡಿಗೇಡಿಗಳಿಗೆ ತಕ್ಕ ಶಾಸ್ತಿ ಆಗಬೇಕು ಈ ಬಗ್ಗೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಕಠಿಣ ಕಾನೂನುಗಳನ್ನು ರೂಪಿಸಿ ನೌಕರರ ರಕ್ಷಣೆ ಮಾಡಬೇಕು ಎಂದು ಮಂಜುನಾಥ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...