ಸರ್ಕಾರಿ ನೌಕರರ ಹಲ್ಲೆ ಖಂಡನೀಯ : ನಿಕಟ ಪೂರ್ವ ಅಧ್ಯಕ್ಷ ಕೆ.ಮಂಜುನಾಥ್ ಆಕ್ರೋಶ

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಚಿತ್ರದುರ್ಗ,(ಜು.13) :  ಪಿ.ಎಂ.ಜಿ.ಎಸ್.ವೈ ಯೋಜನಾ ಉಪ ವಿಭಾಗ ಚಿತ್ರದುರ್ಗದ ಸಹಾಯಕ ಇಂಜಿನಿಯರ್ ನಾಗರಾಜ್.ಜಿ.ಎಂ ಇವರ ಮೇಲೆ ನಡೆದಿರುವ ಹಲ್ಲೆಯ ಅತ್ಯಂತ ಖಂಡನೀಯ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಚಿತ್ರದುರ್ಗ ನಿಕಟ ಪೂರ್ವ ಅಧ್ಯಕ್ಷ ಮಂಜುನಾಥ್. ಕೆ. ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ನೌಕರರ ಸಮುದಾಯದಲ್ಲಿ ಗೊಂದಲಗಳು ಉಂಟಾಗಿ ಸರ್ಕಾರಿ ಸೇವೆಯಲ್ಲಿ ಸಾರ್ವಜನಿಕರ ಸೇವೆ ಮಾಡುವ ನಮ್ಮಂತಹ ನೌಕರರ ಮೇಲೆ ದೌರ್ಜನ್ಯಗಳು ನಡೆಯುತ್ತಿರುವುದು ಇದೇ ಮೊದಲಲ್ಲ ಈ ಹಿಂದೆಯೂ ಇಂತಹ ದುಷ್ಕೃತ್ಯಗಳು ಅನೇಕ ನಡೆದಿದೆ ಈ ಬಗ್ಗೆ ಸಾಕಷ್ಟು ಮುಷ್ಕರಗಳು ಹೋರಾಟಗಳು ಮೌನ ಮೆರವಣಿಗೆಗಳು ನಡೆದಿದ್ದರೂ ಸಹ ಇಂತಹ ಹಲ್ಲೆಗಳು, ಹವ್ಯಾಚ ಪದಗಳಿಂದ ನಿಂದಿಸುವುದು, ಮಾರಣಾಂತಿಕ ಹಲ್ಲೆ ಮಾಡುವುದು, ಕೊಲೆ ಮಾಡಿರುವುದು ನಿಂತಿಲ್ಲ ಇದನ್ನು ಇಡೀ ನೌಕರರ ಸಮುದಾಯ ಖಂಡಿಸುತ್ತದೆ ಎಂದು ಅವರು ಹೇಳಿದ್ದಾರೆ.

ಸರ್ಕಾರಿ ನೌಕರರು ತಪ್ಪು ಮಾಡಿದಾಗ ಮೇಲಾಧಿಕಾರಿಗಳಿಗೆ ದೂರು ನೀಡುವುದು ಅಥವಾ ಲೋಕಾಯುಕ್ತರಿಗೆ ದೂರು ನೀಡುವುದು ಮಾಡಲಿ ಅದನ್ನು ಹೊರತುಪಡಿಸಿ ದೈಹಿಕವಾಗಿ ದಂಡನೆ ಮಾಡುವುದು ಅಪರಾಧವಾಗಿರುತ್ತದೆ ನಾವು ಕೂಡ ಮನುಷ್ಯರು ನಮ್ಮನ್ನು ನಂಬಿಕೊಂಡಿರುವ ಕುಟುಂಬಗಳು ಇರುವುದನ್ನು ಮರೆಯಬಾರದು. ಸಾರ್ವಜನಿಕ ಸೇವೆಯಲ್ಲಿ, ಸಾರ್ವಜನಿಕ ಬದುಕಿನಲ್ಲಿ ವ್ಯತ್ಯಾಸಗಳಾಗುವುದು ಸರ್ವೇಸಾಮಾನ್ಯ ಅದಕ್ಕೆ ಹಲ್ಲೆ ಮಾಡುವುದು, ಕೊಲೆ ಮಾಡುವುದೇ ಪರಿಹಾರವಲ್ಲ. ಸರ್ಕಾರಿ ಸೇವೆಗೆ ಅಡ್ಡಿಪಡಿಸಿದಂತಹ ಕಿಡಿಗೇಡಿಗಳಿಗೆ ತಕ್ಕ ಶಾಸ್ತಿ ಆಗಬೇಕು ಈ ಬಗ್ಗೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಕಠಿಣ ಕಾನೂನುಗಳನ್ನು ರೂಪಿಸಿ ನೌಕರರ ರಕ್ಷಣೆ ಮಾಡಬೇಕು ಎಂದು ಮಂಜುನಾಥ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

39 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

1 hour ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago