ಸುದ್ದಿಒನ್, ಚಿತ್ರದುರ್ಗ, (ಜೂ.22): ಕಾಂಗ್ರೆಸ್ ಸರ್ಕಾರ ಉಚಿತ ಭಾಗ್ಯಾ ಕೊಟ್ಟಾಗಿನಿಂದ ಅಲ್ಲಲ್ಲಿ ಸೀಟಿಗಾಗಿ ಕಿತ್ತಾಟ, ಮಹಿಳೆಯರ ಹೆಚ್ಚಿನ ಓಡಾಟದ ಸುದ್ದಿ ವೈರಲ್ ಆಗ್ತಾನೆ ಇದೆ. ಇದೆ ಬೆನ್ನಲ್ಲೇ ಕೆಎಸ್ಆರ್ಟಿಸಿ ಚಾಲಕ ಮತ್ತು ನಿರ್ವಾಹಕನ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಮಹಿಳೆ ಸೇರಿದಂತೆ ನಾಲ್ವರನ್ನು ಬಂಧಿಸಿದ ಘಟನೆ ಚಳ್ಳಕೆರೆಯಲ್ಲಿ ನಡೆದಿದೆ.
ಚಳ್ಳಕೆರೆಯಲ್ಲಿ KSTRC ಬಸ್ ಡ್ರೈವರ್ ಮತ್ತು ಕಂಡಕ್ಟರ್ ಮೇಲೆ ಹಲ್ಲೆ : ನಾಲ್ವರ ಬಂಧನ pic.twitter.com/y7WTUrKAiC
— suddione-kannada News (@suddione) June 22, 2023
ಚಳ್ಳಕೆರೆಯಲ್ಲಿ KSRTC ಬಸ್ ಡ್ರೈವರ್ ಮತ್ತು ಕಂಡಕ್ಟರ್ ಮೇಲೆ ಹಲ್ಲೆ pic.twitter.com/0E5mIsfflh
— suddione-kannada News (@suddione) June 22, 2023
ಚಳ್ಳಕೆರೆ ಡಿಪೋಗೆ ಸೇರಿದ ಕೆಎಸ್ಆರ್ಟಿಸಿ ಬಸ್ ರಾಯದುರ್ಗ – ಬೆಂಗಳೂರು ಮಾರ್ಗದಲ್ಲಿ ಸಂಚಾರ ನಡೆಸಿತ್ತು. ಬೆಂಗಳೂರಿಗೆ ಹೋಗಲು ಮಹಿಳೆ ಬಸ್ ಹತ್ತಿದ್ದರು. ಆದರೆ ಈ ಬಸ್ ವೇಗದೂತ ಬಸ್ ಆಗಿತ್ತು. ಹೀಗಾಗಿ ಮಹಿಳೆ ಕೇಳಿದಾಗ ದಾಬಸ್ ಪೇಟೆಯಲ್ಲಿ ಬಸ್ ನಿಲ್ಲಿಸಲು ಸಾಧ್ಯವಾಗಲಿಲ್ಲ.
ಹೀಗಾಗಿ ಮೆಜೆಸ್ಟಿಕ್ ಗೆ ಬಂದಾಗ ಮಹಿಳೆ ಹಾಗೂ ಕಂಡಕ್ಟರ್ ನಡುವೆ ಮಾತುಕತೆ ನಡೆದಿದೆ. ಇದು ಇಷ್ಟಕ್ಕೆ ನಿಂತಿದೆ ಎಂದುಕೊಂಡರೆ ಮಹಿಳೆಯ ಸಂಬಂಧಿಕರಿಂದ ಬೆಂಗಳೂರಿನಿಂದ ರಾಯದುರ್ಗದ ಕಡೆ ಬಸ್ ವಾಪಾಸು ಬಂದಾಗ ಮಹಿಳೆಯ ಸಂಬಂಧಿಕರು ಚಳ್ಳಕೆರೆಯ ನೆಹರು ವೃತ್ತದಲ್ಲಿ ಬಸ್ಸನ್ನು ಅಡ್ಡಗಟ್ಟಿ ಗಲಾಟೆ ಮಾಡಿ, ಸಾರ್ವಜನಿಕವಾಗಿ ಥಳಿಸಿದ್ದಾರೆ. ಹಲ್ಲೆಗೊಳಗಾದ ಬಸ್ ಚಾಲಕ, ನಿರ್ವಾಹಕ ಚಂದ್ರೇಗೌಡ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸದ್ಯ ಹಲ್ಲೆ ಮಾಡಿದ ಆರೋಪದ ಮೇಲೆ ಮಹಿಳೆ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಚಂದ್ರಿಕಾ, ಮಲ್ಲಿಕಾರ್ಜುನ, ಶಿವರಾಜ, ನವೀನ್ ಬಂಧಿತ ಆರೋಪಿಗಳು.
ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.






















