Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ತಹಶೀಲ್ದಾರ್ ಸಮ್ಮುಖದಲ್ಲೇ ಕಂದಾಯ ನಿರೀಕ್ಷಕರ ಮೇಲೆ ಹಲ್ಲೆ : ಇಬ್ಬರು ಪೊಲೀಸ್ ವಶಕ್ಕೆ

---Advertisement---

ಸುದ್ದಿಒನ್, ಚಿತ್ರದುರ್ಗ, ಜುಲೈ. 30 : ರೈತರ ಜಮೀನಿಗೆ ಅಡ್ಡಲಾಗಿ ಗೋಡೆ ಕಟ್ಟಿಕೊಂಡಿದ್ದ ದೂರಿನ ಮೇರೆಗೆ ಪರಿಶೀಲನೆ ಮಾಡಲು ಬಂದಿದ್ದ ಕಂದಾಯ ನಿರೀಕ್ಷಕರ ಮೇಲೆ ಹಲ್ಲೆ ಮಾಡಿರುವ ಘಟನೆ  ತಾಲೂಕಿನ‌ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ.‌ ಅದರಲ್ಲೂ ಚಿತ್ರದುರ್ಗ ತಹಸೀಲ್ದಾರ್ ನಾಗವೇಣಿ ಅವರ ಸಮ್ಮುಖದಲ್ಲಿಯೇ ಹಲ್ಲೆ ನಡೆದಿದೆ.

ರೈತ ಹೇಮಣ್ಣ ಅವರ ಜಮೀನಿಗೆ ಅಡ್ಡಲಾಗಿ ಶಿವ ಶಂಕರ್ ರೆಡ್ಡಿ ಮತ್ತು ವಿದ್ಯಾಶಂಕರ್ ರೆಡ್ಡಿ ಕುಟುಂಬದವರು ಕಟ್ಟಡ ನಿರ್ಮಾಣ ಮಾಡಿದ್ದಾರೆ ಎಂದು ಹೇಮಣ್ಣ ಅರೋಪಿಸಿದ್ದರು. ಜಮೀನಿಗೆ ಹೋಗುವುದಕ್ಕೆ ದಾರಿಯೇ ಇರಲಿಲ್ಲ. ಜಮೀನಿಗೆ ದಾರಿಬೇಕೆಂದು ಹಲವು ಬಾರಿ ಮನವಿ ಮಾಡಿದ್ದರು. ಆದರೂ  ಈ ಪ್ರಕರಣವನ್ನು ರೈತ ಹೇಮಣ್ಣ ತಹಶೀಲ್ದಾರ್ ಹಾಗೂ ಕಂದಾಯ ನಿರೀಕ್ಷಕರ ಗಮನಕ್ಕೆ ತಂದಿದ್ದರು.

ಜಮೀನು ದಾರಿ ವಿವಾದ ಹಿನ್ನೆಲೆ ಅಧಿಕಾರಿಗಳು ಪರಿಶೀಲನೆಗೆ ತೆರಳಿದ್ದರು. ಈ ವೇಳೆ ಶಿವಶಂಕರ್ ರೆಡ್ಡಿ, ವಿದ್ಯಾಶಂಕರ್‌ರೆಡ್ಡಿ ಎಂಬುವರು ಕಂದಾಯ ನಿರೀಕ್ಷಕ ಪ್ರಾಣೇಶ್ ಮೇಲೆ ಹಲ್ಲೆ ಮಾಡಿದ್ದಾರೆ. ಆರೋಪಿಗಳು ಜಮೀನಿನ ರಸ್ತೆಗೆ ಅಡ್ಡಲಾಗಿ ಕಟ್ಟಡ ಕಟ್ಟಿಕೊಂಡಿದ್ದಾರೆ. ಅಧಿಕಾರಿಗಳು ಬಂದು ರೈತರ ಜಮೀನಿಗೆ ದಾರಿ ಬಿಟ್ಟುಕೊಡುವಂತೆ ಸೂಚಿಸಿದ್ದಕ್ಕೆ ಹಲ್ಲೆ ಮಾಡಿದ್ದಾರೆ.

ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಆರೋಪಿ ಶಿವಶಂಕರರೆಡ್ಡಿ, ವಿದ್ಯಾಶಂಕರರೆಡ್ಡಿ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...