ಕೊಪ್ಪಳ: ಸಚಿವ ಶಿವರಾಜ್ ತಂಗಡಗಿ ಆಪ್ತನ ಮೇಲೆ ಕಿರುಕುಳದ ಆರೋಪ ಕೇಳಿ ಬಂದಿದೆ. ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಅಮರೇಶ್ ಗೋನಾಳ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ, ಸಿದ್ದು ಮಾಲಿ ಪಾಟೀಲ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ಘಟನೆ ಗಂಗಾವತಿ ತಾಲೂಕಿನಲ್ಲಿ ನಡೆದಿದೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವಕ ಈ ಸಂಬಂಧ ಮಾತನಾಡಿದ್ದು, ನಾನು ಗಾಡಿಗೆ ಹೋಗುತ್ತಿದ್ದೆ. ಗಾಡಿಯಿಂದ ಬಂದ ಮೇಲೆ ಮಾಲೀಕರಿಗೆ ಹಣ ಕೊಡುವುದು ಬಾಕಿ ಇತ್ತು. ಹಣ ಕೊಡುವುದಕ್ಕೆಂದು ಹೋದಾಗ, ಅಲ್ಲೆ ಇದ್ದ ಅಮರೇಶ್ ಗೋನಾಳ ನನ್ನನ್ನು ಕರೆದು ಬೈದರು. ಪೊಲೀಸರಿಂದ ಟಾರ್ಚರ್ ಕೊಡಿಸಿದರು. ಆ ಟಾರ್ಚರ್ ತಡೆಯುವುದಕ್ಕೆ ಆಗದೆ ಆತ್ಮಹತ್ಯೆಗೆ ಯತ್ನಿಸಿದೆ ಎಂದಿದ್ದಾರೆ.
ಇನ್ನು ಅಮರೇಶ್ ಗೋನಾಳರನ್ನು ಸಚಿವ ಶಿವರಾಜ್ ತಂಗಡಗಿ ಆಪ್ತ ಎನ್ನಲಾಗಿದೆ. ಆತ್ಮಹತ್ಯೆಗೆ ಯತ್ನಿಸಿದ ಯುವಕ ವಿಷ ತೆಗೆದುಕೊಂಡ ತಕ್ಷಣ ಪೊಲೀಸ್ ಠಾಣೆಗೆ ಹೋಗಿದ್ದಾನೆ. ಹೀಗಾಗಿ ಪೊಲೀಸರು ತಕ್ಷಣ ಆ ಯುವಕನನ್ನು ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















