ಬೆಂಗಳೂರು: ರಾಜ್ಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯು ತನ್ನ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಯ ದೈನಂದಿನ ಹಾಜರಾತಿ ಪ್ರಕ್ರಿಯೆಯಲ್ಲಿ ಮಹತ್ವದ ಡಿಜಿಟಲ್ ಕ್ರಾಂತಿಗೆ ಮುನ್ನುಡಿ ಬರೆದಿದೆ. ಇಲಾಖೆಯ ಸಿಬ್ಬಂದಿಯ ಹಾಜರಾತಿಯನ್ನು ಅತ್ಯಂತ ಸುಲಭವಾಗಿ ಮತ್ತು ಪಾರದರ್ಶಕವಾಗಿ ದಾಖಲಿಸಲು ‘ಕರ್ನಾಟಕ ಅಡ್ವಾನ್ಸ್ಡ್ ಅಟೆಂಡೆನ್ಸ್ ಮ್ಯಾನೇಜ್ಮೆಂಟ್ ಸಿಸ್ಟಮ್ – ಕರ್ತವ್ಯ’ (KAAMS-Kartavya) ಎಂಬ ನೂತನ ಮೊಬೈಲ್ ಅಪ್ಲಿಕೇಷನ್ ಅನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಗಿದೆ.
ಈ ಹೊಸ ತಂತ್ರಜ್ಞಾನದ ಅಳವಡಿಕೆಯಿಂದಾಗಿ ಇಲಾಖೆಯಲ್ಲಿ ಇನ್ನುಮುಂದೆ ನಕಲಿ ಹಾಜರಾತಿಗೆ ಬ್ರೇಕ್ ಬೀಳಲಿದ್ದು, ಪ್ರತಿಯೊಬ್ಬ ಸಿಬ್ಬಂದಿಯ ಕರ್ತವ್ಯ ನಿಷ್ಠೆ ಡಿಜಿಟಲ್ ರೂಪದಲ್ಲಿ ದಾಖಲಾಗಲಿದೆ.
‘ಕರ್ತವ್ಯ’ ಆ್ಯಪ್ನ ಪ್ರಮುಖ ವೈಶಿಷ್ಟ್ಯಗಳು:
ಸರಳ ಮತ್ತು ಸುಲಭ: ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿ ತಮ್ಮ ಮೊಬೈಲ್ ಮೂಲಕವೇ ಕೆಲವೇ ಸೆಕೆಂಡುಗಳಲ್ಲಿ ದೈನಂದಿನ ಹಾಜರಾತಿ ದಾಖಲಿಸಬಹುದು.

ಪಾರದರ್ಶಕತೆ: ಹಾಜರಾತಿ ವ್ಯವಸ್ಥೆಯಲ್ಲಿ ಯಾವುದೇ ಲೋಪದೋಷಗಳಿಗೆ ಆಸ್ಪದವಿಲ್ಲದಂತೆ ಅತ್ಯಂತ ಪಾರದರ್ಶಕವಾಗಿ ಇದನ್ನು ವಿನ್ಯಾಸಗೊಳಿಸಲಾಗಿದೆ.
ಎಲ್ಲಾ ಮೊಬೈಲ್ಗಳಿಗೂ ಲಭ್ಯ: ಆಂಡ್ರಾಯ್ಡ್ ಹಾಗೂ ಐಫೋನ್ (iOS) ಎರಡೂ ಮಾದರಿಯ ಫೋನ್ಗಳಿಗೂ ಈ ಆ್ಯಪ್ ಲಭ್ಯವಿದೆ.
ಉಚಿತವಾಗಿ ಡೌನ್ಲೋಡ್ ಮಾಡಿಕೊಳ್ಳಿ:
ಆಂಡ್ರಾಯ್ಡ್ ಬಳಕೆದಾರರು: ಗೂಗಲ್ ಪ್ಲೇ ಸ್ಟೋರ್ (Google Play Store) ಮೂಲಕ ಡೌನ್ಲೋಡ್ ಮಾಡಬಹುದು.
ಐಫೋನ್ ಬಳಕೆದಾರರು: ಆ್ಯಪಲ್ ಆ್ಯಪ್ ಸ್ಟೋರ್ (Apple App Store) ಮೂಲಕ ಡೌನ್ಲೋಡ್ ಮಾಡಬಹುದು.
ಶಿಕ್ಷಣ ಇಲಾಖೆಯ ಈ ಡಿಜಿಟಲ್ ವ್ಯವಸ್ಥೆಯ ಲಾಭವನ್ನು ಪಡೆದುಕೊಳ್ಳಲು ಮತ್ತು ನಿಯಮಾನುಸಾರ ಹಾಜರಾತಿ ದಾಖಲಿಸಲು ಇಲಾಖೆಯ ಎಲ್ಲಾ ಸಿಬ್ಬಂದಿಗಳು ತಡ ಮಾಡದೆ ಇಂದೇ ತಮ್ಮ ಮೊಬೈಲ್ಗಳಲ್ಲಿ ‘ಕರ್ತವ್ಯ’ (KAAMS) ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಲು ಕೋರಲಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















