Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅತ್ತಿಬೆಲೆ ಪಟಾಕಿ ದುರಂತ : ಕಾಲೇಜು ಫೀಸ್ ಗಾಗಿ ಕೆಲಸಕ್ಕೆ ಬಂದಿದ್ದ 8 ಯುವಕರು..!

---Advertisement---

 

ಬೆಂಗಳೂರು: ದೀಪಾವಳಿ ಹಬ್ಬಕ್ಕೆಂದು ಪಟಾಕಿ ಸಂಗ್ರಹಿಸುವ ತಯಾರಿ ನಡೆಯುತ್ತಿತ್ತು. ಆದರೆ ದುರಂತ ಅಂದ್ರೆ ಪಟಾಕಿ ತಂದಿದ್ದ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡು ಹದಿನಾಲ್ಕು ಜನ ಸಾವನ್ನಪ್ಪಿದ್ದಾರೆ. ಇದು ಅತ್ತಿಬೆಲೆ ಬಳಿ ನಡೆದಿದೆ. ದುರ್ಘಟನೆಯಲ್ಲಿ ಹದಿನಾಲ್ಕು ಜನ ಸಾವನ್ನಪ್ಪಿದ್ದಾರೆ. ಅದರ ಎಂಟು ಜನ ಯುವಕರೆ ಇದ್ದು, ಕಾಲೇಜು ಶುಲ್ಕಕ್ಕಾಗಿ ಕೆಲಸಕ್ಕೆ ಬಂದಿದ್ದರು.

ಮೃತಪಟ್ಟ ಆದಿಕೇಶವ್, ಗಿರಿ, ಆಕಾಶ್, ವಿಜಯ್ ರಾಘವನ್, ವೆಳಂಬರದಿ, ವಿನೋದ್, ಮುನಿವೆಲ್ ದುರಂತದಲ್ಲಿ ಮೃತ ಪಟ್ಟಿದ್ದಾರೆ. ಈ ಎಂಟು ಜನ ಒಂದೇ ಊರಿನವರು ಎನ್ನಲಾಗಿದೆ. ಮನೆಯಲ್ಲಿ ಆರ್ಥಿಕ ಪರಿಸ್ಥಿತಿ ಸರಿಯಿಲ್ಲದ ಕಾರಣ, ಓದುವುದಕ್ಕಾಗಿ ಕೆಲಸಕ್ಕೆ ಬಂದಿದ್ದರು ಎನ್ನಲಾಗಿದೆ.

ಕಾಲೇಜು ಶುಲ್ಕ ಕಟ್ಟುವುದಕ್ಕೋಸ್ಕರ ತಮಿಳುನಾಡಿನಿಂದ ಬೆಂಗಳೂರಿಗೆ ಕೆಲಸಕ್ಕೆ ಬಂದಿದ್ದರಂತೆ. ತಮ್ಮ ಓದಿನ ದುಡಿಮೆಯನ್ನು ತಾವೇ ಮಾಡಬೇಕು ಎಂಬ ಉದ್ದೇಶದಿಂದ. ಆದರೆ ವಿಧಿ ಅವರ ಬದುಕಲ್ಲಿ ಕೆಟ್ಟದಾಗಿನೇ ಆಟವಾಡಿದೆ. ಎಂಟು ಜನರು ಪಟಾಕಿ ಬ್ಲಾಸ್ಟ್ ನಿಂದಾಗಿ ಮೃತಪಟ್ಟಿದ್ದಾರೆ. ಅತ್ತ ಟಿ ಅಮ್ಮಪೇಟೈನಲ್ಲಿ ಪೋಷಕರು ನೋವು ಮುಗಿಲು ಮುಟ್ಟಿದೆ. ಮಕ್ಕಳನ್ನು ಯಾಕಾದರು ಕೆಲಸಕ್ಕೆ ಕಳುಹಿಸಿದ್ದೆವೋ ಎಂಬ ನೋವಲ್ಲಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment