Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿದ್ಯಾವಿಕಾಸ ವಿದ್ಯಾಸಂಸ್ಥೆಯಲ್ಲಿ ಗಮನ ಸೆಳೆದ ವಿದ್ಯಾರ್ಥಿಗಳ ಬೆಂಕಿ ಇಲ್ಲದೆ ಅಡುಗೆ ತಯಾರಿಸುವ ಕಾರ್ಯಕ್ರಮ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಜೂನ್.29 :  ನಗರದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯಲ್ಲಿ “ಬೆಂಕಿ ಇಲ್ಲದೆ ಅಡುಗೆ ತಯಾರಿಸುವ ಕಾರ್ಯಕ್ರಮವನ್ನು ಅಯೋಜಿಸಲಾಗಿತ್ತು. 


ಮಕ್ಕಳು ಕೇವಲ ಓದಿಗಷ್ಟೇ ಸೀಮಿತರಾಗದೇ ಸಹಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಬೇಕು ಹಾಗೂ ಮಕ್ಕಳಲ್ಲಿರುವ  ಪ್ರತಿಭೆಯನ್ನು  ಹೊರತರುವಲ್ಲಿ  ಇಂತಹ ಸ್ಪರ್ಧೆಗಳು ಪ್ರಮುಖ ಪಾತ್ರ ವಹಿಸುತ್ತವೆ.  ಪ್ರತಿ ದಿನ ಅಮ್ಮನ ಕೈ ರುಚಿ ತಿಂದು, ಇಂದು ಸ್ವತಃ ತಾವೇ  ತಯಾರಿಸಿ  ಉಪ್ಪು, ಹುಳಿ, ಖಾರ, ಪರೀಕ್ಷಿಸಿ ತಯಾರಿಸುವ ಖಾದ್ಯ  ಮಕ್ಕಳಲ್ಲಿರುವ ಕೌಶಲ್ಯವನ್ನು  ಹೊರತರುವಲ್ಲಿ ಸೂಕ್ತ ವೇದಿಕೆ ಕಲ್ಪಿಸಿದಂತಾಗುತ್ತದೆ. ಆದ್ದರಿಂದ  ನಮ್ಮ ಶಾಲೆಯಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ 6 ರಿಂದ 9ನೇ ತರಗತಿಯ  ವಿದ್ಯಾರ್ಥಿಗಳು  ತಾವೇ ತಿಂಡಿ ತಿನಿಸುಗಳನ್ನು ತಯಾರಿಸುವುದರ ಮೂಲಕ ಗಮನ ಸೆಳೆದರು.

ಮಕ್ಕಳು  ತಾವು ತಾಯಾರಿಸುವ ಆಹಾರ ಪದಾರ್ಥಗಳನ್ನು  ಅವುಗಳ ಪೌಷ್ಟಿಕಾಂಶ, ಕಡಿಮೆ ಖರ್ಚು ಮತ್ತು ಅವುಗಳಿಂದ ನಮ್ಮ ಆರೋಗ್ಯಕ್ಕೆ ಆಗುವ ಅನುಕೂಲಗಳನ್ನು ಗಮನದಲ್ಲಿಟ್ಟುಕೊಂಡು ತಮ್ಮ ರುಚಿಕರವಾದ  ತಿನಿಸುಗಳನ್ನು ತಯಾರಿಸಿ, ಪ್ರದರ್ಶಿಸಿ ತಾವು ಮಾಡಿದ ವಿಧಾನವನ್ನು ವಿವರಿಸುವ ಮೂಲಕ ಎಲ್ಲರ ಗಮನ ಸೆಳೆದರು.

ಈ ಕಾರ್ಯಕ್ರಮದಲ್ಲಿ ತೀರ್ಪುಗಾರರಾಗಿ ರೇಖಾ ಪಿ ವಿ, ಚಿನ್ನಾಂಬೆ, ಅರ್ಚನಾ.ಎನ್.ಜಿ, ಅನುರಾಧ.ಎಸ್.ಇ ಭಾಗವಹಿಸಿದ್ದರು .
ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ ಬಿ ವಿಜಯ ಕುಮಾರ್ ಸರ್ ಅವರು ಮಕ್ಕಳು ತಯಾರಿಸಿದ ಖಾದ್ಯಗಳನ್ನು ಸವಿದು  ಮಕ್ಕಳನ್ನು ಪ್ರೋತ್ಸಾಹಿಸಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿಗಳಾದ ಸಂಸ್ಥೆಯ ನಿರ್ದೇಶಕರಾದ ಶ್ರೀ ಪೃಥ್ವೀಶ್ ಎಸ್.ಎಂ, ಶಾಲಾ ಮುಖ್ಯೋಪಾಧ್ಯಾಯರಾದ ತಿಪ್ಪೆಸ್ವಾಮಿ ಎನ್ ಜಿ, ಐಸಿಎಸ್‍ಸಿ ಪ್ರಾಂಶುಪಾಲರಾದ ಬಸವರಾಜಯ್ಯ.ಪಿ ಹಾಗೂ ಸಂಸ್ಥೆಯ ಬೋಧಕ / ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜುಲೈ 15ರಿಂದ ಆರಂಭವಾಗಲಿದೆ ಮುಂಗಾರು ಅಧಿವೇಶನ : ವಿಪಕ್ಷಗಳ ಫ್ಲ್ಯಾನ್ ಏನು..?

ಬೆಂಗಳೂರು: ಹತ್ತು ದಿನಗಳ ಕಾಲ ಮುಂಗಾರು ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದೆ. ಜುಲೈ 15 ರಿಂದ ಜುಲೈ 26ರ ತನಕ ಮುಂಗಾರು ಅಧಿವೇಶನ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಅವರು ಅಧಿವೇಶನದ ದಿನಾಂಕವನ್ನು ಫೈನಲ್ ಮಾಡಿದ್ದಾರೆ. ಈ

ಭದ್ರಾ ಮೇಲ್ದಂಡೆ, ನೇರ ರೈಲ್ವೆ ಯೋಜನೆ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ : ಸಚಿವ ಡಿ.ಸುಧಾಕರ್ ಸೂಚನೆ

  ಚಿತ್ರದುರ್ಗ. ಜುಲೈ.01:   ಭದ್ರಾ ಮೇಲ್ದಂಡೆ ಯೋಜನೆ ಹಾಗೂ ದಾವಣಗೆರೆ-ತುಮಕೂರು ನೇರ ರೈಲ್ವೆ ಯೋಜನೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ

ವೈದ್ಯರು ನಿಷ್ಠೆ, ಪ್ರಾಮಾಣಿಕತೆ ಹಾಗೂ ದಕ್ಷತೆಯಿಂದ ಕಾರ್ಯನಿರ್ವಹಿಸಿ : ಡಾ. ಬಸವಕುಮಾರ ಸ್ವಾಮೀಜಿ

ಸುದ್ದಿಒನ್, ಚಿತ್ರದುರ್ಗ, ಜು.01 : ವೈದ್ಯಕೀಯ ಪದವಿಯನ್ನು ಪೂರೈಸಲು ಜೀವನದ ಅರ್ಧ ಹಾದಿಯನ್ನು ಸವೆಸಬೇಕಾಗುತ್ತದೆ. ಹಾಗಾಗಿ ವೈದ್ಯರು ನಿಷ್ಠೆ, ಪ್ರಾಮಾಣಿಕತೆ ಹಾಗೂ ದಕ್ಷತೆಯಿಂದ ಕಾರ್ಯನಿರ್ವಹಿಸಬೇಕಿದೆ ಎಂದು ಡಾ. ಬಸವಕುಮಾರ ಸ್ವಾಮಿಗಳು ಹೇಳಿದರು. ನಗರದ ಬಸವೇಶ್ವರ

error: Content is protected !!