Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ರೈತರ ವಿರೋಧದ ನಡುವೆಯೂ ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಪ್ರಾಧಿಕಾರ ಸೂಚನೆ

---Advertisement---

 

 

ನವದೆಹಲಿ: ಕೆಆರ್ಎಸ್ ನಲ್ಲಿ ದಿನೇ ದಿನೇ ನೀರಿನ ಮಟ್ಟ ಕುಸಿಯುತ್ತಿದೆ. ಈಗಲೂ ಮಳೆ ಬಾರದೆ ಹೋದಲ್ಲಿ ಕುಡಿಯುವ ನೀರಿಗೂ ಬರದ ಛಾಯೆ ಕವಿಯಲಿದೆ ಎಂಬ ಆತಂಕ ರೈತರದ್ದು. ಇದೆಲ್ಲವನ್ನು ಅರ್ಥ ಮಾಡಿಕೊಂಡು ಕಾವೇರಿ ನೀರು ನಿಯಂತ್ರಣ ಸಮಿತಿ ಇಂದು ಕರ್ನಾಟಕದ ಪರವಾಗಿಯೆ ತೀರ್ಪು ನೀಡಲಿದೆ ಎಂದೇ ರೈತರು ಭಾವಿಸಿದ್ದರು. ಆದರೆ ಆ ನಿರೀಕ್ಷೆ ಸುಳ್ಳಾಗಿದೆ. ತಮಿಳುನಾಡಿಗೆ ನೀರು ಹರಿಸುವಂತೆ ಮತ್ತೆ ಸೂಚನೆ ನೀಡಿದೆ.

ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆದಿದೆ. ಈ ಸಭೆಯಲ್ಲು ತಮಿಳುನಾಡು ಹಾಗೂ ಕರ್ನಾಟಕದ ಅಧಿಕಾರಿಗಳು ಭಾಗಿಯಾಗಿದ್ದರು. ಸಭೆ ಮುಗಿದ ಬಳಿಕ ತಮಿಳುನಾಡಿಗೆ ನೀರು ಹರಿಸುವಂತೆ ಮತ್ತೆ ಸೂಚನೆ ನೀಡಿದ್ದಾರೆ. ಇದು ಕರ್ನಾಟಕದ ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಯಾವುದೇ ಕಾರಣಕ್ಕೂ ನೀರು ಹರಿಸಬಾರದು ಎಂದೇ ಆಕ್ರೋಶ ಹೊರ ಹಾಕುತ್ತಿದ್ದಾರೆ.

ಮಂಡ್ಯದಲ್ಲಿ ಕಾವೇರಿಗಾಗಿ ರೈತರು ಪ್ರತಿಭಟನೆ ಮುಂದುವರೆಸಿದ್ದಾರೆ. ಆದರೆ ತೀರ್ಪು ಯಾವಾಗ ತಮಿಳುನಾಡಿನ ಪರವಾಗಿ ನೀಡಿದರೋ ರೈತರ ಪ್ರತಿಭಟನೆ ಮತ್ತಷ್ಟು ಹೆಚ್ಚಾಗಿದೆ. ಆಕ್ರೋಶ ಜಾಸ್ತಿಯಾಗಿದೆ. ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಕಾವೇರಿ ನೀರು ನಿಯಂತ್ರಣ ಸಮಿತಿಯ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ, ಪ್ರತಿಭಟಿಸುತ್ತಿದ್ದಾರೆ.

ತಮಿಳುನಾಡಿಗೆ, ಪ್ರತಿದಿನ 5000 ಕ್ಯೂಸೆಕ್ ನಂತೆ ಮುಂದಿನ 15 ದಿನಗಳ ಕಾಲ ನೀರು ಹರಿಸಬೇಕಿದೆ. ಈಗಾಗಲೇ ಕೆಆರ್ಎಸ್ ಡ್ಯಾಂ ನಲ್ಲಿ ನೀರು ಕುಸಿತಕಂಡಿದೆ. ಮಳೆ ಇಲ್ಲದೆ ದಿನೇ ದಿನೇ ಕಾವೇರಿ ಬರಿದಾಗುತ್ತಿದ್ದಾಳೆ‌. ಹೀಗಿರುವಾಗ ತಮಿಳುನಾಡಿಗೂ ನೀರು ಹರಿಸಿದರೆ ನೋಡ ನೋಡುತ್ತಿದ್ದಂತೆ ನಮ್ಮವರಿಗೂ ನೀರಿಲ್ಲದಂತೆ ಆಗಲಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...