ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಚಿತ್ರದುರ್ಗದಲ್ಲಿ ಆಟೋ ಚಾಲಕರ ಪ್ರತಿಭಟನೆ

1 Min Read

 

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, (ಆ.10) : ಹೊಸದಾಗಿ ಆಟೋಗಳಿಗೆ ಪರ್ಮಿಟ್ ನೀಡಬಾರದೆಂದು ನಗರ ಆಟೋ ಸಂಘಟನೆಗಳ ಒಕ್ಕೂಟದವರು ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.

ಪರ್ಮಿಟ್ ಇಲ್ಲದೆ ನಗರದಲ್ಲಿ ಸಂಚರಿಸುತ್ತಿರುವ ಔಟ್ ಪರ್ಮಿಟ್ ಆಟೋಗಳನ್ನು ಹಿಡಿದು ಹಾಕಬೇಕು.
ಆಟೋ ಚಾಲಕರ ಸಂಘಟನೆಗಳು ನಿಗಧಿಪಡಿಸಿರುವ ಸ್ಥಳಗಳಿಗೆ ಆಟೋ ನಿಲ್ದಾಣಗಳನ್ನು ಕೂಡಲೆ ನಿರ್ಮಿಸಬೇಕು.
ಆಟೋ ಚಾಲಕರುಗಳಿಗಾಗಿಯೇ ನಿಗಮ ಮಂಡಳಿ ರಚನೆಯಾಗಬೇಕು.
ನಗರದಿಂದ ಸೀಟು ಹಾಕಿಕೊಂಡು ಹಳ್ಳಿಗಳಿಗೆ ಹೋಗುವುದು ನಿಲ್ಲಬೇಕು.
ಆಶ್ರಯ ಯೋಜನೆಯಡಿ ನಿರ್ಗತಿಕ ಆಟೋ ಚಾಲಕರುಗಳಿಗೆ ಕಡ್ಡಾಯವಾಗಿ ಮನೆಗಳನ್ನು ನಿರ್ಮಿಸಿಕೊಡಬೇಕು.
ನಗರ ಸಾರಿಗೆ ಬಸ್‍ಗಳಿಗೆ ಸಮಯ, ಸ್ಥಳವನ್ನು ನಿಗಧಿಪಡಿಸಬೇಕು ಎಂದು ಪ್ರತಿಭಟನಾನಿರತ ಆಟೋ ಚಾಲಕರುಗಳು ಜಿಲ್ಲಾಡಳಿತಕ್ಕೆ ಮನವಿ ಮಾಡಿದರು.

ಕಳೆದ ಇಪ್ಪತ್ತು ವರ್ಷಗಳಿಂದಲೂ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದರೂ ಪ್ರಯೋಜನವಾಗಿಲ್ಲ. ಇನ್ನು ಹದಿನೈದು ದಿನಗಳೊಳಗಾಗಿ ನಮ್ಮ ಎಲ್ಲಾ ಬೇಡಿಕೆಗಳು ಈಡೇರದಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಆಟೋ ಚಾಲಕರುಗಳು ಗಡುವು ನೀಡಿದರು.
ವೀರೇಶ್, ರಾಜು, ಕೆ.ಎಂ.ಮಲ್ಲಿಕಾರ್ಜುನ, ಮಂಜುನಾಥ್ ಸೇರಿದಂತೆ ನೂರಾರು ಆಟೋ ಚಾಲಕರುಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *