Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಚಿತ್ರದುರ್ಗದಲ್ಲಿ ಆಟೋ ಚಾಲಕರ ಪ್ರತಿಭಟನೆ

Facebook
Twitter
Telegram
WhatsApp

 

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, (ಆ.10) : ಹೊಸದಾಗಿ ಆಟೋಗಳಿಗೆ ಪರ್ಮಿಟ್ ನೀಡಬಾರದೆಂದು ನಗರ ಆಟೋ ಸಂಘಟನೆಗಳ ಒಕ್ಕೂಟದವರು ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.

ಪರ್ಮಿಟ್ ಇಲ್ಲದೆ ನಗರದಲ್ಲಿ ಸಂಚರಿಸುತ್ತಿರುವ ಔಟ್ ಪರ್ಮಿಟ್ ಆಟೋಗಳನ್ನು ಹಿಡಿದು ಹಾಕಬೇಕು.
ಆಟೋ ಚಾಲಕರ ಸಂಘಟನೆಗಳು ನಿಗಧಿಪಡಿಸಿರುವ ಸ್ಥಳಗಳಿಗೆ ಆಟೋ ನಿಲ್ದಾಣಗಳನ್ನು ಕೂಡಲೆ ನಿರ್ಮಿಸಬೇಕು.
ಆಟೋ ಚಾಲಕರುಗಳಿಗಾಗಿಯೇ ನಿಗಮ ಮಂಡಳಿ ರಚನೆಯಾಗಬೇಕು.
ನಗರದಿಂದ ಸೀಟು ಹಾಕಿಕೊಂಡು ಹಳ್ಳಿಗಳಿಗೆ ಹೋಗುವುದು ನಿಲ್ಲಬೇಕು.
ಆಶ್ರಯ ಯೋಜನೆಯಡಿ ನಿರ್ಗತಿಕ ಆಟೋ ಚಾಲಕರುಗಳಿಗೆ ಕಡ್ಡಾಯವಾಗಿ ಮನೆಗಳನ್ನು ನಿರ್ಮಿಸಿಕೊಡಬೇಕು.
ನಗರ ಸಾರಿಗೆ ಬಸ್‍ಗಳಿಗೆ ಸಮಯ, ಸ್ಥಳವನ್ನು ನಿಗಧಿಪಡಿಸಬೇಕು ಎಂದು ಪ್ರತಿಭಟನಾನಿರತ ಆಟೋ ಚಾಲಕರುಗಳು ಜಿಲ್ಲಾಡಳಿತಕ್ಕೆ ಮನವಿ ಮಾಡಿದರು.

ಕಳೆದ ಇಪ್ಪತ್ತು ವರ್ಷಗಳಿಂದಲೂ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದರೂ ಪ್ರಯೋಜನವಾಗಿಲ್ಲ. ಇನ್ನು ಹದಿನೈದು ದಿನಗಳೊಳಗಾಗಿ ನಮ್ಮ ಎಲ್ಲಾ ಬೇಡಿಕೆಗಳು ಈಡೇರದಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಆಟೋ ಚಾಲಕರುಗಳು ಗಡುವು ನೀಡಿದರು.
ವೀರೇಶ್, ರಾಜು, ಕೆ.ಎಂ.ಮಲ್ಲಿಕಾರ್ಜುನ, ಮಂಜುನಾಥ್ ಸೇರಿದಂತೆ ನೂರಾರು ಆಟೋ ಚಾಲಕರುಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೊಳಲ್ಕೆರೆ | ಸ್ನೇಹ ಪಬ್ಲಿಕ್ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಸುದ್ದಿಒನ್, ಹೊಳಲ್ಕೆರೆ, ಜುಲೈ. 26 : ನಮ್ಮ ರಾಷ್ಟ್ರಧ್ವಜವು ಗಾಳಿಯಿಂದ ಹಾರುತ್ತಿಲ್ಲ ಬದಲಾಗಿ ಅದು ಹಾರುತ್ತಿರುವುದು ಈ ದೇಶಕ್ಕಾಗಿ ಮಡಿದ ವೀರ ಯೋಧರ ಸೈನಿಕರ ಉಸಿರಿನಿಂದ ಎಂದು ಸಂಸ್ಥೆಯ ಕಾರ್ಯದರ್ಶಿ ಜಿ.ಎಸ್. ವಸಂತ್ ಹೇಳಿದರು.

ಖ್ಯಾತ ನಿರೂಪಕಿ ದಿವ್ಯಾ ಆಲೂರು ತಂದೆ‌ ನಿಧನ : ತಾವೇ ಅಂತ್ಯಸಂಸ್ಕಾರ ಮಾಡಿ ಹೇಳಿದ್ದೇನು..?

ಬೆಂಗಳೂರು : ಪೋಷಕರ ಅಂತ್ಯ ಸಂಸ್ಕಾರದ ವಿಚಾರದಲ್ಲಿ ಈಗಲೂ ಮನಸ್ಥಿತಿ ಎಲ್ಲಾ ಕಡೆಯಲ್ಲೂ ಬದಲಾಗಿಲ್ಲ. ತಮಗೆ ಗಂಡು ಮಕ್ಕಳು ಇಲ್ಲದೆ ಇದ್ದರು, ಅಣ್ಣತಮ್ಮಂದಿರಿಗೆ ಇರುವ ಗಂಡು ಮಕ್ಕಳಿಂದಾನೇ ಅಂತ್ಯ ಸಂಸ್ಕಾರ ನಡೆಸುತ್ತಾರೆ. ಸತ್ತವರಿಗೆ ಅಂತ್ಯ

ಖ್ಯಾತ ನಿರೂಪಕಿ ದಿವ್ಯಾ ಆಲೂರು ತಂದೆ‌ ನಿಧನ : ತಾವೇ ಅಂತ್ಯಸಂಸ್ಕಾರ ಮಾಡಿ ಹೇಳಿದ್ದೇನು..?

ಪೋಷಕರ ಅಂತ್ಯ ಸಂಸ್ಕಾರದ ವಿಚಾರದಲ್ಲಿ ಈಗಲೂ ಮನಸ್ಥಿತಿ ಎಲ್ಲಾ ಕಡೆಯಲ್ಲೂ ಬದಲಾಗಿಲ್ಲ. ತಮಗೆ ಗಂಡು ಮಕ್ಕಳು ಇಲ್ಲದೆ ಇದ್ದರು, ಅಣ್ಣತಮ್ಮಂದಿರಿಗೆ ಇರುವ ಗಂಡು ಮಕ್ಕಳಿಂದಾನೇ ಅಂತ್ಯ ಸಂಸ್ಕಾರ ನಡೆಸುತ್ತಾರೆ. ಸತ್ತವರಿಗೆ ಅಂತ್ಯ ಸಂಸ್ಕಾರ ಮಾಡಬೇಕಾದವರು

error: Content is protected !!