Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಆಟೋರಿಕ್ಷಾ ದರಪರಿಷ್ಕರಣೆ : ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಹೇಳಿದ್ದೇನು ?

---Advertisement---

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಜುಲೈ10) : 2023ರ ಜನವರಿ 23ರಂದು ಜರುಗಿದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಆಟೋರಿಕ್ಷಾ ದರಪರಿಷ್ಕರಣೆ ನಿಗಧಿಪಡಿಸಿರುವ ಕುರಿತು ಆಟೋರಿಕ್ಷಾಗಳಿಗೆ ಮೀಟರ್‌ಗಳ ಮಾಪಾನಾಂಕ ನಿರ್ಣಯ ಮಾಡಿಸಿಕೊಂಡು 2023ರ ಸೆಪ್ಟೆಂಬರ್ 15ರ ಒಳಗಾಗಿ ವಾಹನಗಳಿಗೆ ಅಳವಡಿಸಿಕೊಳ್ಳಬೇಕು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಹಾಗೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರಿ ಕಾರ್ಯದರ್ಶಿ ಪ್ರಮುತೇಶ್ ತಿಳಿಸಿದ್ದಾರೆ.

2023ರ ಜನವರಿ 23ರಂದು ಜರುಗಿದ ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಆಟೋರಿಕ್ಷಾ ಪ್ರಯಾಣ ದರವನ್ನು ಮೊದಲ 1.5 ಕಿಮೀಗೆ ರೂ.30/- ನಿಗಧಿಪಡಿಸಿ ನಂತರದ ಪ್ರತಿ 1 ಕಿ.ಮೀ ಮತ್ತು ಭಾಗಶಃಕ್ಕೆ ರೂ.15/- ದರ ನಿಗಧಿಪಡಿಸಿ ಪರಿಷ್ಕರಿಸಲಾಗಿರುತ್ತದೆ. ಪರಿಷ್ಕøತ ದರಕ್ಕೆ ಅನುಗುಣವಾಗಿ ಚಿತ್ರದುರ್ಗ ಜಿಲ್ಲೆಯ ತಾಲ್ಲೂಕು ವ್ಯಾಪ್ತಿಯಲ್ಲಿ ಕಾನೂನು ಮಾಪನ ಶಾಸ್ತ್ರ ಇಲಾಖೆ ಅವರು 2023ರ ಜುಲೈ 15 ರಿಂದ ಸೆಪ್ಟೆಂಬರ್ 15 ರವರೆಗೆ ಚಾಲ್ತಿ ಆಟೋರಿಕ್ಷಾಗಳಿಗೆ ಮೀಟರ್ ಸತ್ಯಾಪನೆ ಮತ್ತು ಮುದ್ರೆ ಮಾಡಿಕೊಡುವ ಕಾರ್ಯವನ್ನು ಆಯಾಯಾ ತಾಲ್ಲೂಕು ಕೇಂದ್ರಗಳಲ್ಲಿ ನಿಗಧಿಪಡಿಸಿಕೊಳ್ಳುವ ದಿನಾಂಕಕ್ಕೆ ಅನುಗುಣವಾಗುವಂತೆ ಆಟೋರಿಕ್ಷಾ ಚಾಲಕರು ತಮ್ಮ ವಾಹನಗಳಿಗೆ ನೂತನ ದರಕ್ಕೆ ಅನುಗುಣವಾಗಿ ಕಡ್ಡಾಯವಾಗಿ ಆಟೋರಿಕ್ಷಾ ಮೀಟರ್‍ಗಳ ಸತ್ಯಾಪನೆ ಮತ್ತು ಮುದ್ರೆ ಮಾಡಿಸಿಕೊಳ್ಳಬೇಕು. ಆಟೋರಿಕ್ಷಾ ಚಾಲಕರು ಮತ್ತು ಮಾಲೀಕರು ನಿಗಧಿಪಡಿಸಿದ ಅವಧಿಯೊಳಗೆ ತಮ್ಮ ತಮ್ಮ ಆಟೋರಿಕ್ಷಾಗಳಿಗೆ ಮೀಟರ್‍ಗಳ  ಮಾಪಾನಾಂಕ ಮಾಡಿಕೊಳ್ಳಬೇಕು.

ನಿಗದಿಪಡಿಸಿದ ಆಟೋರಿಕ್ಷಾ ಪ್ರಯಾಣದರ: ಕನಿಷ್ಟ ಮೊದಲ 1.5 ಕಿ.ಮೀಗೆ ರೂ.30/- ನಂತರದ ಪ್ರತಿ ಒಂದು ಕಿಮೀಗೆ ಹಾಗೂ ಭಾಗಶಃ ರೂ.15/-, ಕಾಯುವ ದರ ಪ್ರಥಮ 15 ನಿಮಿಷ ಕಾಯುವಿಕೆಗೆ ಉಚಿತ. ನಂತರ 15 ನಿಮಿಷ ಅಥವಾ ಭಾಗಶಃ ರೂ.5/- ಪ್ರಯಾಣಿಕರ ಸರಕಿಗೆ ಮೊದಲ 20 ಕೆಜಿಗೆ ಉಚಿತ ನಂತರದ ಪ್ರತಿ 20 ಕೆಜಿ ಅಥವಾ ಭಾಗಶಃ ರೂ.5/-, ರಾತ್ರಿ 10 ರಿಂದ ಬೆಳಗಿನ ಜಾವ 5 ಗಂಟೆಯವರೆಗೆ ಮೀಟರ್‍ನ ಒಂದೂವರೆ ಪಟ್ಟು ಆಟೋರಿಕ್ಷಾ ಪ್ರಯಾಣದರ ನಿಗಧಿಪಡಿಸಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಹಾಗೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರಿ ಕಾರ್ಯದರ್ಶಿ ಪ್ರಮುತೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...