Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕ್ಯಾನ್ಸರ್ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸುವುದು ಪ್ರತಿಯೊಬ್ಬರ ಹೊಣೆ : ಡಾ. ಅಶ್ವಿನಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಫೆ. 05 : ಕ್ಯಾನ್ಸರ್ ಇರುವುದನ್ನು ಬೇಗ ಪತ್ತೆ ಮಾಡಿದರೆ ಅದನ್ನು ತಡೆಯುವುದು ಸುಲಭ ಆದರೆ ಸಮಯ ಮೀರಿ ಹೋದಾಗ ವೈದ್ಯರ ಚಿಕಿತ್ಸೆ ನಾಟುವುದು ಕಷ್ಟವಾಗುತ್ತದೆ. ಮಹಿಳೆಗೆ ಸ್ತನದ ಕ್ಯಾನ್ಸರ್ ಮತ್ತು ಸರ್ವೈಕಲ್ ಕ್ಯಾನ್ಸರ್ ತೀವ್ರವಾಗಿ ಕಾಡುತ್ತಿವೆ ಇದರ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸುವುದು ನಮ್ಮೆಲ್ಲರ ಹೊಣೆ ಎಂದು ಬಸವೇಶ್ವರ ಮೆಡಿಕಲ್ ಕಾಲೇಜಿನ ಡಾ. ಅಶ್ವಿನಿ ಜಿ.ಎಸ್. ತಿಳಿಸಿದರು.

 

ನಗರದ ಎಸ್‍ಜೆಎಂಫಾರ್ಮಸಿ ಕಾಲೇಜಿನಲ್ಲಿ ವಿಶ್ವ ಕ್ಯಾನ್ಸರ್‌ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ವರ್ಷ ವಿಶ್ವ ಆರೋಗ್ಯ ಸಂಸ್ಥೆ ಮೂರು ವರ್ಷದ ಮಟ್ಟಿಗೆ ಕ್ಯಾನ್ಸರ್ ಅನ್ನು ತಡೆಯಲು ಮತ್ತು ನಿರ್ವಹಣೆಗಾಗಿ ವೇದವಾಕ್ಯವನ್ನು ಸೂಚಿಸಿದೆ “ಯುನೈಟೆಡ್ ಬೈ ಯೂನಿಕ್”  ಅಂದರೆ ಒಬ್ಬ ರೋಗಿಗಿಂತ ಇನ್ನೊಬ್ಬ ರೋಗಿಯು ವಿಭಿನ್ನವಾಗಿ ರೋಗ ಚಿಕಿತ್ಸಾ ನಿರ್ವಹಣೆ ಮಾಡಬೇಕಾಗುತ್ತದೆ ಮತ್ತ ರೋಗ ತಡೆಯಲು ಕ್ಯಾನ್ಸರ್ ಬಗ್ಗೆ ಅರಿವು ಮತ್ತು ಜಾಗೃತಿಯನ್ನು ಎಲ್ಲರೂ  ಹೊಂದುವುದು ಮತ್ತು ಇತರರಿಗೆ ತಿಳಿಸುವುದು ಪ್ರತಿಯೊಬ್ಬರ ಹೊಣೆ ಎಂದು ಹೇಳಿದರು.

 

ಕ್ಯಾನ್ಸರ್ ರೋಗ ಎರಡನೇ ಮಹಾಮಾರಿ ರೋಗವಾಗಿ ಹೊರಹೊಮ್ಮುತ್ತಿರುವುದಕ್ಕೆ ವಿಷಾದ ವ್ಯಕ್ತಪಡಿಸಿದರು. ಭಾರತದಲ್ಲಿ ಸರಿಸುಮಾರು ಗರ್ಭಕಂಠದ ಕ್ಯಾನ್ಸರ್‍ಗೆ (ಸರ್ವೈಕಲ್ ಕ್ಯಾನ್ಸರ್) ವರ್ಷಕ್ಕೆ 67,000 ಮಹಿಳೆಯರು ಸಾವನ್ನಪ್ಪುತ್ತಿದ್ದಾರೆ, ಸರಾಸರಿ ಪ್ರತಿ ಎಂಟು ನಿಮಿಷಕ್ಕೆ ಒಬ್ಬ ಮಹಿಳೆ ಈ ಕ್ಯಾನ್ಸರ್ ಗೆ ತುತ್ತಾಗುತ್ತಿದ್ದಾಳೆ. ಇದಕ್ಕೆ ಕಾರಣ ಊPಗಿ ವೈರಾಣು. ರೋಗಲಕ್ಷಣಗಳು ಇದ್ದರೂ ವೈದ್ಯರ ಸಲಹೆ ಮತ್ತು ಸೂಚನೆಗೆ ಬರದೇ ಇರುವುದು. ಕ್ಯಾನ್ಸರ್ ಬಾರದಂತೆ ತಡೆಯಲು ಲಸಿಕೆಗಳು ಇದ್ದರು ತೆಗೆದುಕೊಳ್ಳದೆ ಇರುವುದು ಹಾಗೂ ಚಿಕಿತ್ಸೆಗೆ ತಗಲುವ ವೆಚ್ಚವನ್ನು ಭರಿಸಲು ಆಗದೆ ಹೋಗುವುದು ಸರ್ವೇಸಾಮಾನ್ಯವಾಗಿದೆ. ಗರ್ಭಕಂಠದಲ್ಲಿ ಮತ್ತು ಸ್ತನಗಳಲ್ಲಿ ಯಾರಿಗಾದರೂ ತೊಂದರೆಗಳು ಕಂಡುಬಂದಲ್ಲಿ ಹೇಳಿಕೊಳ್ಳಲು ಮುಜುಗರ ಪಡಬೇಡಿ ಎಂದು ಕಿವಿಮಾತು ಹೇಳಿದರು.  ಹಾಗೂ ಕ್ಯಾನ್ಸರ್ ರೋಗಿಗಳಿಗೆ ನೋವಿನ ಔಷಧಿಯನ್ನು ನಿರ್ವಹಣೆಗಾಗಿ ಬಳಸುವ ಚಿಕಿತ್ಸಾ ಪದ್ಧತಿಗಳ ಅರಿವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.

 

ಎಸ್ ಜೆ ಎಂ  ಔಷಧ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಟಿಎಸ್ ನಾಗರಾಜ್, ಫಾರ್ಮ ಡಿ ವಿದ್ಯಾರ್ಥಿಗಳು ಔಷಧ ವಿಭಾಗದ ಮುಖ್ಯಸ್ಥರಾದ ಡಾ ಯೋಗಾನಂದ, ಡಾ ಸ್ನೇಹಲತಾ, ಡಾ ಬಸವರಾಜ ಹರ್ತಿ, ಡಾ ನಟರಾಜ್ ಹಾಗೂ ಡಾ ಅಬೂಬಕರ್ ಸಿದಿಕ್, ಡಾ ಅರ್ಪಿತ, ಡಾ ಸೌಮ್ಯ, ಅಕ್ಕಮ್ಮ, ಶರತ್ ಹಾಗೂ ವಿವಿಧ ವಿಭಾಗದ ಮುಖ್ಯಸ್ಥರು ಪಾಲ್ಗೊಂಡಿದ್ದರು.

 

ಕ್ಯಾನ್ಸರ್ ದಿನದ ಅಂಗವಾಗಿ ಕ್ಯಾನ್ಸರ್‍ನ ಅರಿವು ಮೂಡಿಸಲು ಪೋಸ್ಟರ್ ಸ್ಪರ್ಧೆಯನ್ನು ಹಾಗೂ ಕ್ವಿಜ್ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment