Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಯುವ ಪೀಳಿಗೆಯವರಲ್ಲಿ ಭಾಷೆ ಉಳಿವಿಗಾಗಿ ಜಾಗೃತಿ ಮೂಡಿಸಬೇಕಿದೆ : ಪ್ರೊ.ಬಸವರಾಜ ಟಿ.ಬೆಳಗಟ್ಟ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ನವೆಂಬರ್.30 : ಕನ್ನಡ ನಾಡು, ನುಡಿ, ನೆಲ, ಜಲದ ಉಳಿವಿಗಾಗಿ ಹುಯಿಲಗೋಳ ನಾರಾಯಣ, ಆಲೂರು ವೆಂಕಟರಾಯರ ಪಾತ್ರ ಬಹಳವಿದೆ ಎಂದು ಹಿರಿಯೂರಿನ ವಾಣಿ ಸಕ್ಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಪ್ರೊ.ಬಸವರಾಜ ಟಿ.ಬೆಳಗಟ್ಟ ಹೇಳಿದರು.

ಚಿನ್ಮೂಲಾದ್ರಿ ಸಾಹಿತ್ಯ ವೇದಿಕೆಯಿಂದ ಪತ್ರಕರ್ತರ ಭವನದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಕನ್ನಡ ರಾಜ್ಯೋತ್ಸವ, ಭಕ್ತ ಕನಕದಾಸರ ಜಯಂತಿ ಹಾಗೂ ತಿಂಗಳ ವಿಶೇಷ ವ್ಯಕ್ತಿ ಪರಿಚಯ, ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಭಕ್ತ ಕನಕದಾಸರು ಹಾಗೂ ಕನ್ನಡಾಂಭೆ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಉದ್ಗಾಟಿಸಿ ಮಾತನಾಡಿದರು.

ಕನ್ನಡ ನಾಡು, ನುಡಿ, ಭಾಷೆಯ ಬಗ್ಗೆ ವೇದಿಕೆ ಕಾರ್ಯಕ್ರಗಳಲ್ಲಿ ಭಾಷಣ ಮಾಡುವ ಬದಲು ಯುವ ಪೀಳಿಗೆಯವರಲ್ಲಿ ಭಾಷೆ ಉಳಿವಿಗಾಗಿ ಜಾಗೃತಿ ಮೂಡಿಸಬೇಕಿದೆ. ರಾಜ್ಯದಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸಿದಾಗ ಮಾತ್ರ ಕನ್ನಡ ಭಾಷೆಯನ್ನು ರಕ್ಷಿಸಿದಂತಾಗುತ್ತದೆ. ಆಂಗ್ಲ ಭಾಷೆ ಶಾಲೆಗಳಿಗೆ ಸರ್ಕಾರ ಹೆಚ್ಚು ಆದ್ಯತೆ ಕೊಡುವುದು ನಿಲ್ಲಬೇಕು. ಸಾಹಿತ್ಯ ಪರಂಪರೆಯಲ್ಲಿ ಕನಕದಾಸರ ಕೊಡುಗೆ ಅಪಾರ. ಕನಕದಾಸರು ದಂಡ ನಾಯಕರಾಗಿದ್ದರು ಜಾತಿಯಿಂದ ಹೊರ ಬಂದು ಸಮಾನತೆಯ ಸಂದೇಶವನ್ನು ಮನುಕುಲಕ್ಕೆ ಸಾರಿದ ಕೀರ್ತನಕಾರ ಎಂದು ಬಣ್ಣಿಸಿದರು.
ವಿಶ್ವಮಾನವರಾಗಿ ಬೆಳೆದ ಕನಕದಾಸರ ಜಯಂತಿಯನ್ನು ಆಚರಿಸಿ ಕುಣಿದು ಕುಪ್ಪಳಿಸುವ ಬದಲು ಅವರ ಆದರ್ಶ ತತ್ವ ಸಿದ್ದಾಂತಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳುವುದೇ ನಿಜವಾಗಿಯೂ ಅವರಿಗೆ ಸಲ್ಲಿಸುವ ಗೌರವ ಎಂದು ತಿಳಿಸಿದರು.
ಚಿನ್ಮೂಲಾದ್ರಿ ಸಾಹಿತ್ಯ ವೇದಿಕೆ ಗೌರವಾಧ್ಯಕ್ಷ, ಹಿರಿಯ ನ್ಯಾಯವಾದಿ ಬಿ.ಕೆ.ರಹಮತ್‍ವುಲ್ಲಾ ಮಾತನಾಡಿ ಕನ್ನಡ ತುಂಬಾ ಪುರಾತನವಾದ ಭಾಷೆ. ಕನ್ನಡಕ್ಕೆ ಎಂಟು ಜ್ಞಾನಪೀಠ ಪ್ರಶಸ್ತಿಗಳು ಸಿಕ್ಕಿದೆ. 1953 ರಲ್ಲಿ ಕರ್ನಾಟಕ ಏಕೀಕರಣವಾಯಿತು. ಹಿಂದೆ ವಿಶಾಲ ಮೈಸೂರು ಎಂದು ಕರೆಯಲಾಗುತ್ತಿತ್ತು. ಡಿ.ದೇವರಾಜ ಅರಸುರವರು ಮುಖ್ಯಮಂತ್ರಿಯಾಗಿದ್ದಾಗ 1973 ರಲ್ಲಿ ಕರ್ನಾಟಕ ಎಂದು ನಾಮಕರಣ ಮಾಡಿದರು. ಹರಿದು ಹಂಚಿ ಹೋಗಿದ್ದ ಕನ್ನಡ ನಾಡನ್ನು ಒಂದುಗೂಡಿಸುವಲ್ಲಿ ಅನೇಕ ಹಿರಿಯರು ಹೋರಾಡಿದ್ದಾರೆ ಎಂದು ನೆನಪಿಸಿದರು.
ಪರ್ಶಿಯನ್ ಭಾಷೆ, ತೆಲುಗಿನ ಕೆಲವು ಭಾಷೆಗಳು ಕನ್ನಡದಲ್ಲಿ ಸಮ್ಮಿಲನಗೊಂಡಿದೆ. ಕನ್ನಡ ಮಾಧ್ಯಮದಲ್ಲಿ ಮಕ್ಕಳಿಗೆ ಶಿಕ್ಷಣ ಕೊಡಿಸುವ ಮೂಲಕ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಬೇಕಿದೆ. ಕನ್ನಡದಲ್ಲಿ ಶಿಕ್ಷಣ ಪಡೆದರೆ ಶೇ.5 ರಷ್ಟು ಮೀಸಲಾತಿ ಉದ್ಯೋಗದಲ್ಲಿ ಸಿಗುತ್ತದೆ. ಪ್ರವಾದಿ ಮಹಮದ್ ಪೈಗಂಬರ್, ಹನ್ನೆರಡನೆ ಶತಮಾನದ  ಬಸವಣ್ಣ ಇವರುಗಳೆಲ್ಲಾ ಮಾನವೀಯತೆಯ ಸಂದೇಶವನ್ನು ಸಾರಿದ್ದಾರೆಂದು ಹೇಳಿದರು.
ಚಿನ್ಮೂಲಾದ್ರಿ ಸಾಹಿತ್ಯ ವೇದಿಕೆ ಅಧ್ಯಕ್ಷ ಡಾ.ಎಸ್.ಹೆಚ್.ಶಫಿವುಲ್ಲಾ(ಕುಟೀಶ) ಅಧ್ಯಕ್ಷತೆ ವಹಿಸಿದ್ದರು.
ತಿಂಗಳ ವಿಶೇಷ ವ್ಯಕ್ತಿಯಾಗಿ ಲೋಕೋಪಯೋಗಿ ಇಲಾಖೆಯ ಇ.ಅಶೋಕ್‍ಕುಮಾರ್ ಇವರನ್ನು ಕಾರ್ಯಕ್ರಮದಲ್ಲಿ ಪರಿಚಯಿಸಿ ಸನ್ಮಾನಿಸಲಾಯಿತು.
ಗಾಂಧಿವಾದಿ ಡಾ.ಹೆಚ್.ಎಸ್.ಕೆ.ಸ್ವಾಮಿ, ಚಿನ್ಮೂಲಾದ್ರಿ ಸಾಹಿತ್ಯ ವೇದಿಕೆ ಉಪಾಧ್ಯಕ್ಷರುಗಳಾದ ಶೋಭ ಮಲ್ಲಿಕಾರ್ಜುನ್, ಶಿವರುದ್ರಪ್ಪ ಪಂಡರಹಳ್ಳಿ ಇವರುಗಳು ವೇದಿಕೆಯಲ್ಲಿದ್ದರು.
ಹದಿನೈದಕ್ಕು ಹೆಚ್ಚು ಕವಿಗಳು ತಮ್ಮ ಕವನಗಳನ್ನು ವಾಚಿಸಿದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...