ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ಗುಬ್ಬಿ , ಸೆಪ್ಟೆಂಬರ್. 01 : ಸಮುದಾಯದ ಬಂಧುಗಳು ಆರ್ಥಿಕ ಮತ್ತು ಶೈಕ್ಷಣಿಕವಾಗಿ ಸದೃಢರಾಗಬೇಕೆಂದು ಆದಿ ಜಾಂಬವ ಯುವ ಬ್ರಿಗೇಡ್ ತಾಲೂಕು ಅಧ್ಯಕ್ಷ ಬಸವರಾಜು ತಿಳಿಸಿದರು.
ಪಟ್ಟಣದ ಡಾ. ಬಾಬು ಜಗಜೀವನ ರಾಮ್ ಭವನದಲ್ಲಿ ತಾಲೂಕು ಆದಿ ಜಾಂಬವ ಯುವ ಬ್ರಿಗೇಡ್ ವತಿಯಿಂದ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಾಗಾರವನ್ನು ಕುರಿತು ಮಾತನಾಡಿದ ಅವರು, ನಮ್ಮ ಸಮುದಾಯವು ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಅಭಿವೃದ್ಧಿ ಹೊಂದಬೇಕಿದೆ. ಈ ನಿಟ್ಟಿನಲ್ಲಿ ಒಂದು ವರ್ಷದಿಂದ ಪ್ರತಿ ತಿಂಗಳ 1ನೇ ತಾರೀಕಿನಂದು ಸಮುದಾಯದ ಜನರಿಗೆ ಸಂಘಟನೆಯ ಮೂಲಕ ಅರಿವು ಮೂಡಿಸುವ ಕಾರ್ಯಕ್ರಮವನ್ನು ಮಾಡುತ್ತಾ ಬರುತ್ತಿದ್ದು. ಇಂತಹ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಮುದಾಯದ ಬಂಧುಗಳು ಪಾಲ್ಗೊಂಡು ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.
ಪ್ರಧಾನ ಕಾರ್ಯದರ್ಶಿ ಶಿವರಾಜು ಮಾತನಾಡಿ ಸಂಘಟನಾತ್ಮಕವಾಗಿ ನಾವೆಲ್ಲರೂ ಒಗ್ಗಟ್ಟಾಗಿ ಎಲ್ಲಾ ರಂಗದಲ್ಲಿಯೂ ಮುಂದುವರೆಯಬೇಕೆಂಬ ಚಿಂತನೆಯನ್ನು ಸಮುದಾಯದ ಜನರಿಗೆ ಅರಿವು ಮೂಡಿಸಲಾಗಿದ್ದು. ತಮ್ಮ ತಮ್ಮ ಗ್ರಾಮಗಳಲ್ಲಿ ಸ್ಥಳೀಯವಾಗಿ ಜಾಗೃತಿ ಮೂಡಿಸುವ ಮೂಲಕ ಸಂಘಟನಾತ್ಮಕವಾಗಿ ಸಜ್ಜುಗೊಳಿಸಬೇಕು. ಮುಂದಿನ ದಿನಗಳಲ್ಲಿ ಸಮುದಾಯದ ಅಭಿವೃದ್ಧಿಗೆ ಪೂರಕವಾದ ಅನೇಕ ಕಾರ್ಯಕ್ರಮಗಳನ್ನು ಸಂಘಟನೆ ವತಿಯಿಂದ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಕಸಬಾ ಹೋಬಳಿ ಹೋಬಳಿ ಘಟಕದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಕಾರ್ಯದರ್ಶಿಯಾದ ನವೀನ್ ಕುಮಾರ್, ಗೌರವಾಧ್ಯಕ್ಷ ಮುದ್ದಯ್ಯ, ಖಜಾಂಚಿ ನರಸಿಂಹಮೂರ್ತಿ, ಮಹಿಳಾ ಘಟಕದ ಅಧ್ಯಕ್ಷೆ ರೇಖಾ, ಕಡಬ ಹೋಬಳಿ ಸಂಘಟನಾ ಕಾರ್ಯದರ್ಶಿ ರೇಣುಕಮ್ಮ , ನಾಗರಾಜು ಸೇರಿದಂತೆ ಇತರರು ಇದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್