ಸುದ್ದಿಒನ್ : ಹಿಂದೂಗಳ ಬಹುದಿನಗಳ ಕನಸಾದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ತೆರೆ ಬೀಳಲಿದೆ. ಇದೇ ತಿಂಗಳ 22ರಂದು ಅಯೋಧ್ಯೆ ರಾಮಮಂದಿರದಲ್ಲಿ ಬಾಲರಾಮನ ಮೂರ್ತಿ ಪ್ರತಿಷ್ಠಾಪನೆಗೆ ಸಕಲ ಸಿದ್ಧತೆ ನಡೆದಿದೆ. ವಿಗ್ರಹ ಪ್ರಾಣ ಪ್ರತಿಷ್ಠಾ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ಘೋಷಣೆ ಮಾಡಿದೆ.
ಜನವರಿ 22 ರಂದು ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಿಸಲಾಗಿದೆ. ವಿಗ್ರಹ ಪ್ರಾಣ ಪ್ರತಿಷ್ಠೆ ಆಗುವವರೆಗೆ ಕಚೇರಿಗಳು ಕಾರ್ಯನಿರ್ವಹಿಸುವುದಿಲ್ಲ. ಮಧ್ಯಾಹ್ನ 2.30ರವರೆಗೆ ಕಚೇರಿಗಳಿಗೆ ರಜೆ ಘೋಷಿಸಲು ತೀರ್ಮಾನಿಸಲಾಗಿದೆ. ಇದನ್ನು ಕೇಂದ್ರ ಸರ್ಕಾರ ಅಧಿಕೃತವಾಗಿ ಪ್ರಕಟಿಸಿದೆ. ಅಂಚೆ ಕಚೇರಿಗಳು, ಬ್ಯಾಂಕ್ಗಳು ಸೇರಿದಂತೆ ಅನೇಕ ಕೇಂದ್ರೀಯ ಸಂಸ್ಥೆಗಳಲ್ಲಿ ಈ ರಜೆಯನ್ನು ಜಾರಿಗೊಳಿಸಲಾಗುವುದು.
ಏತನ್ಮಧ್ಯೆ, ಸರ್ಕಾರಗಳು ಈಗಾಗಲೇ ಹಲವು ರಾಜ್ಯಗಳಲ್ಲಿ ಶಾಲೆಗಳಿಗೆ ಪೂರ್ಣ ದಿನ ರಜೆ ಘೋಷಿಸಿವೆ. ಉತ್ತರ ಪ್ರದೇಶ, ಮಧ್ಯಪ್ರದೇಶ, ಗೋವಾ, ಛತ್ತೀಸ್ಗಢ ಮತ್ತು ಹರಿಯಾಣದಲ್ಲಿ ಶಾಲೆಗಳಿಗೆ ಇದೇ ತಿಂಗಳ 22 ರಂದು ರಜೆ ಘೋಷಿಸಲಾಗಿದೆ. ರಾಮನ ಪ್ರಾಣ ಪ್ರತಿಷ್ಠೆಯ ದಿನದಂದು ಮದ್ಯದಂಗಡಿಗಳನ್ನೂ ಮುಚ್ಚಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಘೋಷಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











