Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

Ayodhya Ram Mandir : ನಾಳೆ ಬಾಲರಾಮನಿಗೆ ಪ್ರಾಣಪ್ರತಿಷ್ಠೆ : ಅಯೋಧ್ಯೆಯಲ್ಲಿ ಬಿಗಿ ಬಂದೋಬಸ್ತ್

---Advertisement---

 

 

ಸುದ್ದಿಒನ್ : ಅಯೋಧ್ಯೆ ಆ ಹೆಸರು ಕೇಳುತ್ತಲೇ ಒಂದು ಆಧ್ಯಾತ್ಮಿಕ ಆನಂದ. ದಿವ್ಯವಾದ ಭವ್ಯ ರಾಮ ಮಂದಿರಕ್ಕೆ ಕೋಟ್ಯಂತರ ಭಕ್ತಾದಿಗಳ ಮನದಾಳದ ಆಮಂತ್ರಣ ನೀಡುತ್ತಿರುವ ಶ್ರೀರಾಮಚಂದ್ರ. ನಾಳೆ ಬಾಲರಾಮನಾಗಿ ಮೊದಲ ದರ್ಶನ ನೀಡುವ ಮೂಲಕ ಕೋಟ್ಯಂತರ ಭಕ್ತಾದಿಗಳ ಕನಸು ಈಡೇರಿಸಲಿದ್ದಾನೆ. ಆ ಪರಮಾತ್ಮನ ದರ್ಶನಕ್ಕಾಗಿ ಪ್ರಪಂಚದಾದ್ಯಂತ ಇರುವ ಹಿಂದೂಗಳು ಹಾತೊರೆಯುತ್ತಿದ್ದಾರೆ. 

ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರ ಸಂಪೂರ್ಣ ಸಿದ್ಧಗೊಂಡಿದೆ. ಇನ್ನು ಕೆಲವೇ ಗಂಟೆಗಳಲ್ಲಿ ಶ್ರೀರಾಮ ಭಕ್ತರಿಗೆ ದರ್ಶನ ನೀಡಲಿದ್ದಾನೆ. 1300 ಕೋಟಿ ರೂಪಾಯಿ ವೆಚ್ಚದಲ್ಲಿ ಮೂರನೇ ಅತಿ ದೊಡ್ಡ ಹಿಂದೂ ದೇವಾಲಯವಾಗಿ ನಿರ್ಮಾಣವಾಗಿದೆ. ಇಂದು 125 ಕಲಶಗಳಿಂದ ಶ್ರೀರಾಮನ ವಿಗ್ರಹಕ್ಕೆ ಅಭಿಷೇಕ ಮಾಡಲಾಗುವುದು. ನಾಳೆ ಮಧ್ಯಾನ್ಹ 12: 29 ಕ್ಕೆ ಸಲ್ಲುವ ಅಭಿಜಿನ್ ಮುಹೂರ್ತದಲ್ಲಿ ಬಾಲರಾಮನಿಗೆ ಪ್ರಾಣಪ್ರತಿಷ್ಠೆ ನೆರವೇರಲಿದೆ.

ಅಯೋಧ್ಯೆ ರಾಮ ಮಂದಿರದಲ್ಲಿ ಹದ್ದಿನ ಕಣ್ಣಿಟ್ಟು ಪೊಲೀಸರು ಗಸ್ತು ತಿರುಗುತ್ತಿದ್ದಾರೆ. ವಿವಿಐಪಿಗಳ ಭದ್ರತೆಗಾಗಿ 45 ವಿಶೇಷ ತಂಡಗಳನ್ನು ನಿಯೋಜಿಸಲಾಗಿದೆ. ಮತ್ತೊಂದೆಡೆ, ಎನ್ಐಎ ಮತ್ತು ಯುಪಿ ಎಟಿಎಸ್ ಸೇರಿದಂತೆ ಸೈಬರ್ ತಂಡಗಳನ್ನು ಸಕ್ರಿಯಗೊಳಿಸಲಾಗಿದೆ. ಜಪಾನ್ ಮತ್ತು ಅಮೆರಿಕದ ತಂತ್ರಜ್ಞಾನಕ್ಕೆ ಪೈಪೋಟಿ ನೀಡಲು ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಕಮಾಂಡ್ ಸೆಂಟರ್ ಸ್ಥಾಪಿಸಲಾಗಿದೆ.
ಭದ್ರತೆಗಾಗಿ ಗರುಡ ಡ್ರೋನ್ ನಿಯೋಜಿಸಲಾಗಿದೆ.
ಭದ್ರತೆಯೊಂದಿಗೆ ಭಕ್ತರ ದಟ್ಟಣೆಯನ್ನು ನಿಯಂತ್ರಿಸಲು ಈ ಡ್ರೋನ್ ಅನ್ನು ಬಳಸಲಾಗುತ್ತದೆ.

ಅಯೋಧ್ಯೆ ರಾಮಮಂದಿರ ಮತ್ತು ಅಯೋಧ್ಯಾ ನಗರವನ್ನು ಹೂವಿನಿಂದ ಅಲಂಕರಿಸಲು ಸುಮಾರು ಎಂಟುನೂರು ಕಾರ್ಯಕರ್ತರು ಹಗಲಿರುಳು ಶ್ರಮಿಸುತ್ತಿದ್ದಾರೆ. ಸುಮಾರು 1100 ಟನ್ ಹೂವುಗಳನ್ನು ಅಲಂಕಾರಕ್ಕಾಗಿ ಬಳಸಲಾಗಿದೆ. ಜೈ ಶ್ರೀ ರಾಮ್ ಅಕ್ಷರಗಳು ಕಾಣಿಸಿಕೊಳ್ಳುವಂತೆ ಹೂವುಗಳನ್ನು ವಿಶೇಷವಾಗಿ ಅಲಂಕರಿಸಲಾಗಿದೆ. ಪ್ರಾಣ ಪ್ರತಿಷ್ಠೆಯ ನಿಮಿತ್ತ ಅಯೋಧ್ಯೆಯ ಯಾಗಶಾಲೆಯ ಬಳಿ ಭಕ್ತರು ನಿರಂತರವಾಗಿ ರಾಮನಾಮ ಜಪ ಮಾಡುತ್ತಿದ್ದಾರೆ. ಈ ಮಹಾನ್ ರಾಮನಾಮದ ಪಠಣವು 9 ದಿನಗಳವರೆಗೆ ಮುಂದುವರಿಯುತ್ತದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment