Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇಂದು ಚಿತ್ರದುರ್ಗಕ್ಕೆ ಬಿ.ವೈ. ವಿಜಯೇಂದ್ರ ಜಿಲ್ಲಾ ಪ್ರವಾಸ : ಎಲ್ಲೆಲ್ಲಿಗೆ ಭೇಟಿ ನೀಡಲಿದ್ದಾರೆ ? ಇಲ್ಲಿದೆ ಮಾಹಿತಿ…!

---Advertisement---

ಸುದ್ದಿಒನ್. ಚಿತ್ರದುರ್ಗ. ನ.16 : ನೂತನ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಯಡಿಯೂರಪ್ಪ ಅವರು  ಬುಧವಾರ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ನವೆಂಬರ್ 16 ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ  ಹಮ್ಮಿಕೊಂಡಿದ್ದಾರೆ.

ನವೆಂಬರ್ 16 ರಂದು ಬೆಳಿಗ್ಗೆ 8:30 ಕ್ಕೆ  ಬೆಂಗಳೂರುನಿಂದ ಹೊರಟು ಚಿತ್ರದುರ್ಗಕ್ಕೆ ಆಗಮಿಸುವರು.

ಜಿಲ್ಲೆಯಾದ್ಯಂತ ಅವರ ಪ್ರವಾಸದ ವಿವರ ಈ ಕೆಳಗಿನಂತಿದೆ.

ಬೆಳಿಗ್ಗೆ 11 ಗಂಟೆಗೆ : ಮಾಜಿ ಶಾಸಕ ಜಿ ಹೆಚ್ ತಿಪ್ಪಾರೆಡ್ಡಿಯವರ ಮನೆಗೆ ಭೇಟಿ.

ಬೆಳಿಗ್ಗೆ 11 : 30 ಕ್ಕೆ ಶ್ರೀ ಮುರುಘ ರಾಜೇಂದ್ರ ಮಠಕ್ಕೆ ಭೇಟಿ,

ಬೆಳಿಗ್ಗೆ 11:45 ಕ್ಕೆ  ಶ್ರೀ ಕೃಷ್ಣ ಯಾದವನಂದ ಮಹಾ ಸಂಸ್ಥಾನ ಮಠಕ್ಕೆ ಭೇಟಿ,

ಮಧ್ಯಾನ್ಹ 12 ಕ್ಕೆ ಶ್ರೀ ಜಗದ್ಗುರು ಮಾದಾರ ಚನ್ನಯ್ಯ ಮಠಕ್ಕೆ ಬೇಟಿ.

ಮಧ್ಯಾನ್ಹ 12 : 30 ಕ್ಕೆ  ಶ್ರೀ ಜಗದ್ಗುರು ಸಿದ್ದರಾಮೇಶ್ವರ ಸಂಸ್ಥಾನ ಭೋವಿ ಗುರುಪೀಠಕ್ಕೆ ಭೇಟಿ

ಮಧ್ಯಾನ್ಹ 1 ಗಂಟೆಗೆ ಶ್ರೀ ಸಿರಿಗೆರೆ ಬಹನ್ಮಠಕ್ಕೆ ಭೇಟಿ.

ಮಧ್ಯಾನ್ಹ 3:30 ಕ್ಕೆ ಶ್ರೀ ಚಿನ್ಮೂಲಾದ್ರಿ ಭಗೀರಥ ಗುರುಪೀಠ, ಹೊಸದುರ್ಗ,

ಮಧ್ಯಾನ್ಹ 4:00 ಕ್ಕೆ ಶ್ರೀ ತರಳಬಾಳು ಬೃಹನ್ಮಠ ಶಾಖ ಮಠ, ಸಾಣೆಹಳ್ಳಿ ಹೊಸದುರ್ಗ,

ಮಧ್ಯಾನ್ಹ 4:30 ಕ್ಕೆ ಶ್ರೀ ಜಗದ್ಗುರು ಕುಂಚಿಟಿಗ ಮಹಾಸಂಸ್ಥಾನ, ಹೊಸದುರ್ಗ,

ಮಧ್ಯಾನ್ಹ 5 : 15 ಕ್ಕೆ ಶ್ರೀ ಕನಕ ಗುರು ಪೀಠ ಶಾಖಾಮಠ, ಹೊಸದುರ್ಗ

ಈ ಎಲ್ಲಾ ಕಾರ್ಯಕ್ರಮಗಳು ಮುಗಿದ ನಂತರ
ಹೊಸದುರ್ಗ – ಹುಳಿಯಾರು – ಶಿರಾ ಮಾರ್ಗವಾಗಿ ಕೇಂದ್ರ ಸ್ಥಾನ ಬೆಂಗಳೂರಿಗೆ 8:30 ಕ್ಕೆ ತೆರಳುವರು ಎಂದು ರಾಜ್ಯಾಧ್ಯಕ್ಷರ ಆಪ್ತ ಕಾರ್ಯದರ್ಶಿ ಸಿದ್ದು ಪುಂಡಿಕಾಳ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment