Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಾಬು ಜಗಜೀವನ ರಾಂ ದೇಶದ ದಕ್ಷ ಆಡಳಿತಗಾರ ; ಎಚ್.ಆಂಜನೇಯ

---Advertisement---

ಸುದ್ದಿಒನ್, ಚಿತ್ರದುರ್ಗ, ಮಾ.5: ಅಂಬೇಡ್ಕರ್ ನಿಧನದ ಬಳಿಕ ಶೋಷಿತರು, ಅಸ್ಪøಶ್ಯರು, ದುರ್ಬಲರಲ್ಲಿ ಮನೆ ಮಾಡಿದ್ದ ಅನಾಥ ಪ್ರಜ್ಞೆ ದೂರಗೊಳಿಸಿ, ಅವರನ್ನು ಪ್ರಗತಿಯತ್ತ ಕೊಂಡೊಯ್ಯಲು ಶ್ರಮಿಸಿದ ಮಹಾನ್ ನಾಯಕ ಬಾಬು ಜಗಜೀವನ ರಾಂ ಎಂದು ಮಾಜಿ ಸಚಿವ ಎಚ್.ಆಂಜನೇಯ ಸ್ಮರಿಸಿದರು.

ತಾಲೂಕಿನ ಸೀಬಾರದ ತಮ್ಮ ಕಚೇರಿಯಲ್ಲಿ ಭಾನುವಾರ ಆಯೋಜಿಸಿದ್ದ ಬಾಬು ಜಗಜೀವನ ರಾಂ ಜನ್ಮದಿನಾಚರಣೆಯಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

1956ರಲ್ಲಿ ಅಂಬೇಡ್ಕರ್ ಅಗಲಿಕೆ ದೇಶದ ಪರಿಶಿಷ್ಟ ಸಮುದಾಯದ ಜನರಲ್ಲಿ ಕತ್ತಲು ಆವರಿಸಿಕೊಂಡಿತ್ತು. ಈ ವೇಳೆ ಸಂವಿಧಾನದ ಆಶಯಗಳನ್ನು ಸರ್ಕಾರದಲ್ಲಿ ಮಂತ್ರಿಯಾಗಿದ್ದುಕೊಂಡು ಸಮರ್ಥವಾಗಿ ಅನುಷ್ಠಾನಗೊಳಿಸಿ ಜನರ ಮನಗೆದ್ದ ನಿಜನಾಯಕ ಬಾಬು ಜಗಜೀವನ ರಾಂ ಎಂದು ಬಣ್ಣಿಸಿದರು.

ಮೀಸಲಾತಿ ಅನುಷ್ಠಾನದ ಜೊತೆಗೆ ರೈಲ್ವೆ ಸೇರಿ ವಿವಿಧ ಇಲಾಖೆಯಲ್ಲಿ ಬಡ್ತಿ ಮೀಸಲಾತಿ ಸೌಲಭ್ಯ ಕಲ್ಪಿಸಿ ಶೋಷಿತರ ಬದುಕಿನಲ್ಲಿ ಆಶಾಕಿರಣರಾಗಿ ವಿಜೃಂಭಿಸಿದರು. ನೆಹರೂ, ಇಂದಿರಾಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಅವಧಿಯಲ್ಲಿ ಅನೇಕ ಖಾತೆಗಳ ಜೊತೆಗೆ ಒಮ್ಮೆ ಉಪ ಪ್ರಧಾನಿಯಾಗಿ ಆಡಳಿತ ನಡೆಸಿ ದೇಶದ ಗಮನವನ್ನೇ ತನ್ನಡೆಗೆ ಸೆಳೆದ ದಕ್ಷ ಆಡಳಿತಗಾರ ಎಂದು ಸ್ಮರಿಸಿದರು.

ಸುಧೀರ್ಘ 45 ವರ್ಷಗಳ ಸಂಸದೀಯ ಪಟು, ದಕ್ಷ ಆಡಳಿತಗಾರನಾಗಿ ಚುನಾವಣೆಯಲ್ಲಿ ಸೋಲಿಲ್ಲದ ಸರದಾರನಾಗಿ ಮೆರೆದ ಬಾಬು ಜಗಜೀವನ ರಾಂ ದೇಶದಲ್ಲಿ ಆಹಾರದ ಕೊರತೆ ಎದುರಾದ ವೇಳೆ ಹಸಿರು ಕ್ರಾಂತಿಯ ಮೂಲಕ ಹಸಿವು ನೀಗಿದ ಮಹಾತ್ಮ ಎಂದು ಹೇಳಿದರು.

ದಕ್ಷ ಆಡಳಿತಗಾರ, ಗೆಲುವಿನ ಸರದಾರ, ಉತ್ತಮ ಸಂಸದೀಯ ಪಟು ಆಗಿದ್ದ ಬಾಬು ಜಗಜೀವನ ರಾಂ ಪ್ರಧಾನಿ ಆಗಲು ಅಂದಿನ ಜಾತಿ ವ್ಯವಸ್ಥೆ ಅಡ್ಡಿಯಾಗಿದ್ದು ನೋವಿನ ವಿಷಯ. ಆದರೆ, ಅಂತಹ ಕಾಲಘಟ್ಟದಲ್ಲಿ ದಲಿತ ನಾಯಕನಿಗೆ ಎಐಸಿಸಿ ಅಧ್ಯಕ್ಷ ಸ್ಥಾನ, ಉಪ ಪ್ರಧಾನಿ, ರಕ್ಷಣಾ ಖಾತೆ, ಹೀಗೆ ವಿವಿಧ ಉನ್ನತ ಹುದ್ದೆಗಳನ್ನು ಕಾಂಗ್ರೆಸ್ ಪಕ್ಷ ನೀಡುವ ಮೂಲಕ ದಕ್ಷ ವ್ಯಕ್ತಿಗೆ ಗೌರವ ನೀಡಿತು ಎಂದರು.

ದಲಿತರ ಉದ್ಧಾರದ ಕನಸು ಕಂಡಿದ್ದ ಅವರು ಅನೇಕ ಜನಪರ ಕಾರ್ಯಕ್ರಮಗಳ ಮೂಲಕ ಸಮುದಾಯವನ್ನು ಪ್ರಗತಿಯತ್ತ ಕೊಂಡೊಯ್ಯಲು ಶ್ರಮಿಸಿದರು. ಅವರ ಆಶಯಗಳು, ಚಿಂತನೆಗಳನ್ನು ನಾವೆಲ್ಲರೂ ಮೈಗೂಡಿಸಿಕೊಂಡು ಸಾಗಿದರೆ ಅಭಿವೃದ್ಧಿಯ ಹಾದಿಯಲ್ಲಿ ಸಾಗಬೇಕು. ಈ ನಿಟ್ಟಿನಲ್ಲಿ ಯುವ ಪೀಳಿಗೆ ದಿಟ್ಟ ನಿರ್ಧಾರ ಕೈಗೊಳ್ಳಬೇಕೆಂದು ತಿಳಿಸಿದರು.

ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಮಾತನಾಡಿ, ಅಂಬೇಡ್ಕರ್ ಮತ್ತು ಬಾಬು ಜಗಜೀವನ ರಾಂ ದೇಶದ ಎರಡು ಕಣ್ಣಿದ್ದಂತೆ. ಅವರನ್ನು ನಾವು ಪ್ರತ್ಯೇಕಿಸಿ ನೋಡಲು ಸಾಧ್ಯವೇ ಇಲ್ಲ. ಇಬ್ಬರ ಚಿಂತನೆಯೂ ದೇಶ ಮತ್ತು ದಲಿತೋದ್ಧಾರ ಆಗಿತ್ತು ಎಂದರು.

ದೇಶಕ್ಕೆ ಈ ಇಬ್ಬರು ನಾಯಕರು ಅಪಾರ ಕೊಡುಗೆ ನೀಡಿದ್ದಾರೆ. ಇವರ ಸಾಧನೆಗೆ ಬೆನ್ನೆಲುಬು ಆಗಿ ನಿಂತು ತನ್ನ ಕರ್ತವ್ಯ ನಿರ್ವಹಿಸಿದ ಕಾಂಗ್ರೆಸ್ ಪಕ್ಷ ಮಾತ್ರ ದಲಿತರು, ಸಮರ್ಥರನ್ನು ಗುರುತಿಸಿ ಉನ್ನತ ಸ್ಥಾನ ಕಲ್ಪಿಸಲಿದೆ ಎಂಬುದಕ್ಕೆ ಸಾಕ್ಷಿ ಎಂದು ಹೇಳಿದರು. ಮುಖಂಡರಾದ ಅನಿಲ್ ಕೋಟಿ, ಚೇತನ್ ಬೋರೇನಹಳ್ಳಿ ಇತರರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...