Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗಂಡಾಗಲಿ, ಹೆಣ್ಣಾಗಲಿ ಒಂದೇ ಸಾಕು: ಡಿಸಿ ಕವಿತಾ ಎಸ್ ಮನ್ನಿಕೇರಿ

Facebook
Twitter
Telegram
WhatsApp

ಸುದ್ದಿಒನ್, ಚಳ್ಳಕೆರೆ, (ಅ.16) : ಕುಟುಂಬಕ್ಕೆ ಗಂಡಾಗಲಿ, ಹೆಣ್ಣಾಗಲಿ ಒಂದೇ ಸಾಕು, ಮಕ್ಕಳಿಗೆ ಶಿಕ್ಷಣ ಕೊಡಿಸಿ, ಕೂಲಿ ಕಾರ್ಡ್ ಇದ್ದರೆ ಹೊಲಗಳಲ್ಲಿ ನರೇಗಾ ಯೋಜನೆ ಬದು ನಿರ್ಮಾಣ ಮಾಡಿಕೊಳ್ಳಿ, ನಿಮಗೂ  ಕೆಲಸ ಸಿಗುತ್ತದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಗ್ರಾಮಸ್ಥೆ ಜಯಲಕ್ಷ್ಮೀ ಅವರಿಗೆ ಕಿವಿ ಮಾತು ಹೇಳಿದರು.

ತಾಲ್ಲೂಕಿನ ರೇಣುಕಾಪುರ ಗ್ರಾಮದಲ್ಲಿ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಗ್ರಾಮ ವಾಸ್ತವ್ಯ ಕಾರ್ಯ ಕ್ರಮದಲ್ಲಿ ಮನೆ-ಮನೆಗೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆಗಳು ಆಲಿಸಿ ಮಾತನಾಡಿದರು.

ಮನೆ ಮಂಜೂರು ಆದಮೇಲೆ ಮನೆಯ ಜೊತೆ ಶೌಚಾಲಯ ನಿರ್ಮಿಸಿಕೊಳ್ಳಬೇಕು. ಆದರೆ ಶೌಚಾಲಯದ ಹಣವನ್ನು ಮನೆಗೆ ನಿರ್ಮಾಣ ಮಾಡಿಕೊಂಡರೆ ಹೇಗೆ..?  ಹೆಣ್ಣು ಮಕ್ಕಳು ಸುರಕ್ಷವಾಗಿರಬೇಕು ಎಂದರೆ ಶೌಚಾಲಯ ಇರಬೇಕು. ಎಲ್ಲರೂ ಶೌಚಾಲಯ ನಿರ್ಮಿಸಿಕೊಳ್ಳಬೇಕು ಎಂದರು.

ಹೆಣ್ಣು ಮಕ್ಕಳಿಗೆ 18 ವರ್ಷಕ್ಕಿಂತ ಒಳಗೆ ಮದುವೆ ಮಾಡಬೇಡಿ, ಅದು ಅಸಿಂದು ಆಗುತ್ತದೆ. ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡಿಸಿ ಅವರು ಸಹ ನನ್ನಂತೆ ಉನ್ನತ ಹುದ್ದೆ ಪಡೆಯಬಹದು ಎಂದು ಕಿವಿ ಮಾತು ಹೇಳಿದ ಅವರು ಹೆಣ್ಣನ್ನು ಸುರಕ್ಷಿತ ವಾಗಿ ಇಟ್ಟುಕೊಂಡರೆ ಸಾಲದು ಗಂಡು ಮಕ್ಕಳಿಗೆ ನೀತಿ ಪಾಠ ಮಾಡಬೇಕು ಎಂದು ಹೇಳಿದರು.

ಗ್ರಾಮದಲ್ಲಿ ಚರಂಡಿಗಳನ್ನು ಒತ್ತುವರಿ ಮಾಡಿಕೊಂಡರೆ ಚರಂಡಿ ನೀರು ಎಲ್ಲಿಗೆ ಹೋಗಬೇಕು ಒತ್ತುವರಿಯಾಗಿರುವ ಕಡೆ ತೆರವು ಮಾಡಿಸಿ ಚರಂಡಿ ಮಾಡಿಸಿ ಗ್ರಾಪಂ ಅಧಿಕಾರಿಗಳಿಗೆ ಸೂಚನೆ ನೀಡಿದರು.‌‌‌‌‌

ಈ ವೇಳೆ ಜಿಪಂ ಸಿಇಓ ಡಾ. ಕೆ.ನಂದಿನಿದೇವಿ, ತಹಶೀಲ್ದಾರ್ ಎನ್.ರಘುಮೂರ್ತಿ, ಜಿಲ್ಲಾ ಅಂಗವಿಕಲರ ಅಧಿಕಾರಿ ವೈಶಾಲಿ, ಗ್ರಾಪಂ ಅಧ್ಯಕ್ಷೆ ರಾಮಕ್ಕ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್. ಸುರೇಶ್,  ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಆರ್.ವಿರೂಪಾಕ್ಷಪ್ಪ, ತಾಲ್ಲೂಕು ಆರೋಗ್ಯಾಧಿಕಾರಿ ಪ್ರೇಮಸುಧಾ  ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದಿನ ಪಂದ್ಯದಲ್ಲಿ ಆರ್ ಸಿ ಬಿ ಟಚ್ ಮಾಡೋದು ಕಷ್ಟ ಕಷ್ಟ..!

ಪಂಜಾಬ್ ಕಿಂಗ್ಸ್ ಮಣಿಸಿದ ಆರ್ಸಿಬಿ ಇಂದು ಮತ್ತೊಂದು ಆಟಕ್ಕೆ ಸಜ್ಜಾಗಿದೆ. ಕೆಕೆಆರ್ ವಿರುದ್ದ ಜಯ ಗಳಿಸುವ ಆತ್ಮ ವಿಶ್ವಾಸದಲ್ಲಿ ಮೈದಾನಕ್ಕೆ ಇಳಿದಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ಜೊತೆಗೆ ಆರ್ಸಿಬಿ ಎರಡನೇ ಪಂದ್ಯವನ್ನಾಡಲಿದೆ. ಆದರೆ ಈ

ಚಳ್ಳಕೆರೆ | ರಸ್ತೆ ಅಪಘಾತದಲ್ಲಿ ಛಾಯಾಗ್ರಾಹಕ ಮೃತ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 29 :  ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ

ಚಿತ್ರದುರ್ಗ | ಕಣಿವೆಯಿಂದ ಠಾಣೆಗೆ ಬಂದ ಮಾರಮ್ಮನ ರೋಚಕ ಕಥೆ..!

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 29 :  ಚಿತ್ರದುರ್ಗ ನಗರ ಪೊಲೀಸ್ ಠಾಣೆ ಆವರಣದಲ್ಲಿ ಶ್ರೀ ಕಣಿವೆ ಮಾರಮ್ಮ ದೇವಿ ಆಸೀನಳಾಗಿ ಬಹು ವಿಜೃಂಭಣೆಯಿಂದ ರಾರಾಜಿಸುತ್ತಿದ್ದಾಳೆ, ತಾಯಿ. ಅಸಂಖ್ಯಾತ ಭಕ್ತಜನ ದಿನದಿನವೂ ಅರ್ಚನೆ, ಹರಕೆಗಳಿಂದ ಇದೀಗ

error: Content is protected !!