Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಿರಿಕ್ ಪಾರ್ಟಿ ಬಳಿಕ ಬ್ಯಾಚುಲರ್ ಪಾರ್ಟಿ ಕಿರಿಕ್ : ರಕ್ಷಿತ್ ಶೆಟ್ಟಿ ಮೇಲೆ ದೂರು ದಾಖಲಾಗಿದ್ದೇಕೆ..?

Facebook
Twitter
Telegram
WhatsApp

ಬೆಂಗಳೂರು: ಸ್ಯಾಂಡಲ್ ವುಡ್ ನ ಮೋಸ್ಟ್ ಬ್ಯಾಚುಲರ್ ರಕ್ಷಿತ್ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ನವೀನ್ ಕುಮಾರ್ ಎಂಬುವವರು ನಟ ರಕ್ಷಿತ್ ಶೆಟ್ಟಿ ವಿರುದ್ಧ ಯಶವಂತಪುರ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಅವರ ನಿರ್ಮಾಣದ ಸಿನಿಮಾದಲ್ಲಿ ಕಾಪಿರೈಟ್ಸ್ ಉಲ್ಲಂಘಟನೆ ಮಾಡಿದ್ದಾರೆಂದು ದೂರು ದಾಖಲಿಸಿದ್ದಾರೆ.

ಕಳೆದ ಮಾರ್ಚ್ ನಲ್ಲಿ ರಕ್ಷಿತ್ ಶೆಟ್ಟಿ‌ ನಿರ್ಮಾಣದ ಲೂಸ್ ಮಾದ ಯೋಗಿ, ದಿಗಂತ್, ಅಚ್ಯುತ್ ಕುಮಾರ್ ನಟನೆಯ, ಸಖತ್ ಕಾಮಿಡಿ ಇರುವ ಬ್ಯಾಚುಲರ್ ಪಾರ್ಟಿ ಸಿನಿಮಾ ರಿಲೀಸ್ ಆಗಿತ್ತು. ಆ ಸಿನಿಮಾದಲ್ಲಿ ಎರಡು ಹಾಡುಗಳ ಬಗ್ಗೆ ಉಲ್ಲೇಖ ಮಾಡಲಾಗಿದೆ. ಅದರಲ್ಲಿ ಬಳಕೆಯಾಗಿರುವ ಎರಡು ಹಾಡನ್ನು ಅನುಮತಿ ಇಲ್ಲದೆ ಬಳಕೆ ಮಾಡಲಾಗುತ್ತಿದೆ ಎಂದು ದೂರು ನೀಡಿದ್ದಾರೆ.

ಎಂಆರ್ಟಿ ಮ್ಯೂಸಿಕ್ ಪಾಲುದಾರ ನವೀನ್ ಈ ದೂರು ನೀಡಿದ್ದಾರೆ. ಈ ಮೊದಲೇ ಬ್ಯಾಚುಲರ್ ಪಾರ್ಟಿ ಟೀಂ ನವೀನ್ ಜೊತೆಗೆ ಈ ಹಾಡುಗಳ ಕುರಿತು ಚರ್ಚೆ ನಡೆಸಿತ್ತಂತೆ. ಆದರೆ ಮಾತುಕತೆ ವಿಫಲವಾಗುತ್ತಂತೆ. ಆದರೂ ರಕ್ಷಿತ್ ಶೆಟ್ಟಿಯವರು ಸಿನಿಮಾದಲ್ಲಿ ತಮ್ಮ ಹಾಡುಗಳನ್ನು ಬಳಕೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಸಿನಿಮಾದಲ್ಲಿ ಬಳಕೆಯಾದ ಎರಡು ಹಾಡುಗಳೆಂದರೆ ನ್ಯಾಯ ಎಲ್ಲಿದೆ ಸಿನಿಮಾದ ನ್ಯಾಯ ಎಲ್ಲಿದೆ ಎಂಬ ಹಾಡು ಹಾಗೂ ಗಾಳಿಮಾತು ಸಿನಿಮಾದ ಒಮ್ಮೆ ನಿನ್ನನ್ನು ಎಂಬ ಎರಡು ಹಾಡನ್ನು ಬಳಕೆ ಮಾಡಿಕೊಳ್ಳಲಾಗಿದೆ.

ಹೀಗೆ ಅನುಮತಿಯೇ ಇಲ್ಲದೆ ಬಳಕೆ ಮಾಡಿಕೊಂಡ ಹಾಡಿನಿಂದಾಗಿ ಎಂಆರ್ಟಿ ಮ್ಯೂಸಿಕ್ ಪಾಲುದಾರ ನವೀನ್ ಅವರು ಕೋಪಗೊಂಡು ಠಾಣೆಗೆ ದೂರು ನೀಡಿದ್ದಾರೆ. ಈ ಹಿಂದೆ ಕಿರಿಕ್ ಪಾರ್ಟಿ ಸಿನಿಮಾದಲ್ಲೂ ಶಾಂತಿಕ್ರಾಂತಿ ಹಾಡನ್ನು ಬಳಕೆ ಮಾಡಿದ್ದರು ಎಂದು ಲಹರಿ ಮ್ಯೂಸಿಕ್ ಸಂಸ್ಥೆ ದೂರು ನೀಡಿತ್ತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದರ್ಶನ್ ರಾಜಾತಿಥ್ಯ ಫೋಟೋ ರಿವಿಲ್ ಮಾಡಿದ್ದೇ ರಾಜ್ಯ ಸರ್ಕಾರ : ಜೋಶಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು..?

  ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಗಳ ಜೊತೆಗೆ ಕೂತು ಟೀ ಕುಡೊಯುತ್ತಾ, ಸಿಗರೇಟು ಸೇದುತ್ತಾ, ನಗುಮುಖದಲ್ಲಿದ್ದ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿತ್ತು. ಆ ಬಳಿಕವೇ ದರ್ಶನ್ ಅವರನ್ನು ಬಳ್ಳಾರಿ

ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಎಂಬಿ ಪಾಟೀಲ್ : ಬೆಳೆಯುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ..!

  ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರ್ತಾನೆ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯುತ್ತಾರೆ ಎಂಬ ಚರ್ಚೆಯ ಜೊತೆಗೆ ನಾನು ಕೂಡ ಸಿಎಂ ಆಗಬಹುದು ಎಂಬ ಆಸೆ

Mobile phone : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇಲ್ಲಿದೆ ಸ್ಪಷ್ಟತೆ..!

  ಸುದ್ದಿಒನ್ : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇದೀಗ ಈ ಪ್ರಶ್ನೆಗೆ WHO ಉತ್ತರ ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ ಇತ್ತೀಚಿನ ಅಧ್ಯಯನದಲ್ಲಿ, ಮೊಬೈಲ್ ಫೋನ್ ಬಳಕೆಯಿಂದ

error: Content is protected !!