ಬೆಂಗಳೂರು: ಸ್ಯಾಂಡಲ್ ವುಡ್ ನ ಮೋಸ್ಟ್ ಬ್ಯಾಚುಲರ್ ರಕ್ಷಿತ್ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ನವೀನ್ ಕುಮಾರ್ ಎಂಬುವವರು ನಟ ರಕ್ಷಿತ್ ಶೆಟ್ಟಿ ವಿರುದ್ಧ ಯಶವಂತಪುರ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಅವರ ನಿರ್ಮಾಣದ ಸಿನಿಮಾದಲ್ಲಿ ಕಾಪಿರೈಟ್ಸ್ ಉಲ್ಲಂಘಟನೆ ಮಾಡಿದ್ದಾರೆಂದು ದೂರು ದಾಖಲಿಸಿದ್ದಾರೆ.
ಕಳೆದ ಮಾರ್ಚ್ ನಲ್ಲಿ ರಕ್ಷಿತ್ ಶೆಟ್ಟಿ ನಿರ್ಮಾಣದ ಲೂಸ್ ಮಾದ ಯೋಗಿ, ದಿಗಂತ್, ಅಚ್ಯುತ್ ಕುಮಾರ್ ನಟನೆಯ, ಸಖತ್ ಕಾಮಿಡಿ ಇರುವ ಬ್ಯಾಚುಲರ್ ಪಾರ್ಟಿ ಸಿನಿಮಾ ರಿಲೀಸ್ ಆಗಿತ್ತು. ಆ ಸಿನಿಮಾದಲ್ಲಿ ಎರಡು ಹಾಡುಗಳ ಬಗ್ಗೆ ಉಲ್ಲೇಖ ಮಾಡಲಾಗಿದೆ. ಅದರಲ್ಲಿ ಬಳಕೆಯಾಗಿರುವ ಎರಡು ಹಾಡನ್ನು ಅನುಮತಿ ಇಲ್ಲದೆ ಬಳಕೆ ಮಾಡಲಾಗುತ್ತಿದೆ ಎಂದು ದೂರು ನೀಡಿದ್ದಾರೆ.
ಎಂಆರ್ಟಿ ಮ್ಯೂಸಿಕ್ ಪಾಲುದಾರ ನವೀನ್ ಈ ದೂರು ನೀಡಿದ್ದಾರೆ. ಈ ಮೊದಲೇ ಬ್ಯಾಚುಲರ್ ಪಾರ್ಟಿ ಟೀಂ ನವೀನ್ ಜೊತೆಗೆ ಈ ಹಾಡುಗಳ ಕುರಿತು ಚರ್ಚೆ ನಡೆಸಿತ್ತಂತೆ. ಆದರೆ ಮಾತುಕತೆ ವಿಫಲವಾಗುತ್ತಂತೆ. ಆದರೂ ರಕ್ಷಿತ್ ಶೆಟ್ಟಿಯವರು ಸಿನಿಮಾದಲ್ಲಿ ತಮ್ಮ ಹಾಡುಗಳನ್ನು ಬಳಕೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಸಿನಿಮಾದಲ್ಲಿ ಬಳಕೆಯಾದ ಎರಡು ಹಾಡುಗಳೆಂದರೆ ನ್ಯಾಯ ಎಲ್ಲಿದೆ ಸಿನಿಮಾದ ನ್ಯಾಯ ಎಲ್ಲಿದೆ ಎಂಬ ಹಾಡು ಹಾಗೂ ಗಾಳಿಮಾತು ಸಿನಿಮಾದ ಒಮ್ಮೆ ನಿನ್ನನ್ನು ಎಂಬ ಎರಡು ಹಾಡನ್ನು ಬಳಕೆ ಮಾಡಿಕೊಳ್ಳಲಾಗಿದೆ.
ಹೀಗೆ ಅನುಮತಿಯೇ ಇಲ್ಲದೆ ಬಳಕೆ ಮಾಡಿಕೊಂಡ ಹಾಡಿನಿಂದಾಗಿ ಎಂಆರ್ಟಿ ಮ್ಯೂಸಿಕ್ ಪಾಲುದಾರ ನವೀನ್ ಅವರು ಕೋಪಗೊಂಡು ಠಾಣೆಗೆ ದೂರು ನೀಡಿದ್ದಾರೆ. ಈ ಹಿಂದೆ ಕಿರಿಕ್ ಪಾರ್ಟಿ ಸಿನಿಮಾದಲ್ಲೂ ಶಾಂತಿಕ್ರಾಂತಿ ಹಾಡನ್ನು ಬಳಕೆ ಮಾಡಿದ್ದರು ಎಂದು ಲಹರಿ ಮ್ಯೂಸಿಕ್ ಸಂಸ್ಥೆ ದೂರು ನೀಡಿತ್ತು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











