ಹಿಂದುಳಿದ ದಲಿತ ಮಠಾಧೀಶರ ಒಕ್ಕೂಟದಿಂದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಕೃತಜ್ಞತೆ

suddionenews
1 Min Read

ಬೆಂಗಳೂರು, (ಮೇ.01) :  ಸಮಸಮಾಜ ನಿರ್ಮಾಣಕ್ಕೆ ಮಠಗಳ ಸೇವೆಯನ್ನು ಗುರುತಿಸಿ ತ್ರಿವಿಧ ದಾಸೋಹಕ್ಕೆ ಸಹಕಾರಿಯಾದ ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ

ಹಿಂದುಳಿದ ದಲಿತ ಮಠಾಧೀಶರ ಒಕ್ಕೂಟ ಕೃತಜ್ಞತೆಯನ್ನು ಸಲ್ಲಿಸಿದರು.

ಬೆಂಗಳೂರಿನ ರಾಮಾನುಜಂ ಮಠದಲ್ಲಿ ನಡೆದ ಸಮಾರಂಭದಲ್ಲಿ ಕಾಗಿನೆಲೆ ಕನಕಗುರುಪೀಠದ ಜಗದ್ಗುರು ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು.

ಕುಂಚಿಟಿಗ ಗುರುಪೀಠದ ಜಗದ್ಗುರು ಡಾ.ಶಾಂತವೀರ ಸ್ವಾಮೀಜಿ ಹಾಗೂ ಮಾದಾರ ಚೆನ್ನಯ್ಯ ಗುರುಪೀಠದ ಪರಮಪೂಜ್ಯ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಕೃತ.್ಞತಾ ನುಡಿಗಳು ನುಡಿದರು. ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಕಾರ್ಯಕ್ರಮ ನಿರ್ವಹಣೆ ಮಾಡಿದರು. ಭಗೀರಥ ಗುರುಪೀಠದ ಜಗದ್ಗುರು ಡಾ ಪುರುಷೋತ್ತಮಾನಂದ ಸ್ವಾಮೀಜಿ ಹಾಗೂ ಸರ್ವ ಸಮುದಾಯದ ಪೂಜ್ಯರು ಪಾವನ ಸಾನಿಧ್ಯ ವಹಿಸಿದ್ದರು.

ಸಚಿವರಾದ ಬೈರತಿ ಬಸವರಾಜ್ ಹಾಗೂ ಮುನಿರತ್ನ ಉಪಸ್ಥಿತಿಯಿದ್ದರು.

Share This Article
Leave a Comment

Leave a Reply

Your email address will not be published. Required fields are marked *