ಸಿಡಿಲು ಬಡಿದು ಬಾಗಲಕೋಟೆ ಯೋಧ ಮೃತ..!

suddionenews
1 Min Read

 

 

ಅಸ್ಸಾಂ: ಎಲ್ಲೆಡೆ ಮಳೆ ಆರಂಭವಾಗಿದೆ. ಮಳೆಯ ಜೊತೆಗೆ ಸಿಡಿಲಿನಿಂದಲೂ ಜನ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಬಾಗಲಕೋಟೆ ಯೋಧರೊಬ್ಬರು ಸಿಡಿಲಿಗೆ ಪ್ರಾಣ ಬಿಟ್ಟಿದ್ದಾರೆ. 41 ವರ್ಷದ ಅಶೋಕ್ ಮುಂಡಾಸ್ ಸಿಡಿಲಿನಿಂದ ಪ್ರಾಣ ಕಳೆದುಕೊಂಡಿದ್ದಾರೆ.

ಅಶೋಕ್ ಮುಂಡಾಸ್ ಸುಮಾರು 16 ವರ್ಷದಿಂದಲೂ ಸೇವೆ ಸಲ್ಲಿಸುತ್ತಿದ್ದು, ಹೆಂಡತಿ, ಮಕ್ಕಳನ್ನು ಅಗಲಿದ್ದಾರೆ. ನಾಳೆ ಬೆಳಗ್ಗೆ ಹುಟ್ಟೂರಿಗೆ ಪಾರ್ಥಿವ ಶರೀರ ಬರುವ ಸಾಧ್ಯತೆ ಇದೆ. ಅಸ್ಸಾಂನಲ್ಲಿ ಶನಿವಾರ ರಾತ್ರಿ ಸಿಡಿಲು ಬಡಿದ ರಭಸಕ್ಕೆ ಅಶೋಕ್ ಮುಂಡಾಸ್ ಮೃತಪಟ್ಟಿದ್ದಾರೆ.

ಬಾಗಲಕೋಟೆ ತಾಲೂಕಿನ ಶಿರೂರು ಗ್ರಾಮದ ಅಶೋಕ್, ಬಿಎಸ್ ಎಫ್ 31ರ ಬೆಟಾಲಿಯನ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅಸ್ಸಾಂ ನ ಬಾಂಗ್ಲಾ ಗಡಿಯಲ್ಲಿ ಸೇವೆಯಲ್ಲಿದ್ದಾಗ ಸಿಡಿಲು ಬಡಿದು ಪ್ರಾಣ ತೆತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *