Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಸ್ರೇಲ್ ನಲ್ಲಿ ಬಾಗಲಕೋಟೆ ಮಹಿಳೆ : ಕುಟುಂಬಸ್ಥರಿಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

Facebook
Twitter
Telegram
WhatsApp

 

ಬೆಂಗಳೂರು: ಇಸ್ರೇಲ್ – ಪ್ಯಾಲೆಸ್ತಿನ್ ಯುದ್ಧದಲ್ಲಿ ಸಾವು ನೋವುಗಳು ಹೆಚ್ಚಾಗುತ್ತಿವೆ. ಕರುಣೆ ಇಲ್ಲದಂತೆ ಮಕ್ಕಳನ್ನು ಬಿಡದೆ ಉಗ್ರರು ಕೊಲ್ಲುತ್ತಿದ್ದಾರೆ. ಹಮಾಸ್ ಉಗ್ರರು ಕ್ರೂರಿಗಳಂತೆ ವರ್ತಿಸುತ್ತಿದ್ದಾರೆ. ಅಲ್ಲಿನ ವಿದೇಶಿಗರು ಜೀವ ಕೈಯಲ್ಲಿಡಿದುಕೊಂಡು ಬದುಕುತ್ತಿದ್ದಾರೆ. ಅಲ್ಲಿನ ಪರಿಸ್ಥಿತಿಯನ್ನ ಟಿವಿಯಲ್ಲಿ ನೋಡಿಯೇ ಜನ ಭಯಭೀತರಾಗಿದ್ದಾರೆ. ಅದರಲ್ಲೂ ಭಾರತದವರು ಕೂಡ ಸಿಲುಕಿದ್ದಾರೆ.

ಕರ್ನಾಟಕದ ಬಾಗಲಕೋಟೆಯ ಮಹಿಳೆಯೊಬ್ಬರು ಇಸ್ರೆಲ್ ನಲ್ಲಿ ಸಿಲುಕಿದ್ದಾರೆ. ಪೂಜಾ ಎಂಬುವವರು ಇಸ್ರೇಲ್ ನಲ್ಲಿ ಸಿಲುಕಿದ್ದು, ಕುಟುಂಬಸ್ಥರು ಆತಂಕಗೊಂಡಿದ್ದಾರೆ. ಪೂಜಾ ಕಳೆದ ಒಂದೂವರೆ ವರ್ಷದ ಹಿಂದೆ ಇಸ್ರೇಲ್ ಗೆ ಹೋಗಿದ್ದರು. ಅಲ್ಲಿಯೇ ಕೆಲಸ ಮಾಡುತ್ತಿದ್ದರು. ಆದರೆ ಅಲ್ಲಿ ಯುದ್ಧ ಶುರುವಾಗಿದ್ದು, ಕುಟುಂಬಸ್ಥರು ಆತಂಕಕ್ಕೆ ಒಳಗಾಗಿದ್ದಾರೆ.

ಪೂಜಾ ಮನೆಯವರನ್ನು ಸಚಿವ ಆರ್ ಬಿ ತಿಮ್ಮಾಪುರ ಭೇಟಿ ಮಾಡಿದ್ದಾರೆ. ಸಮಾಧಾನ ಹೇಳಿದ್ದು, ಅಲ್ಲಿಯೇ ಸಿಎಂ ಸಿದ್ದರಾಮಯ್ಯ ಅವರಿಗೂ ಕರೆ ಮಾಡಿಕೊಟ್ಟಿದ್ದಾರೆ. ಸಿದ್ದರಾಮಯ್ಯ ಅವರು, ಪೂಜಾ ಕುಟುಂಬಸ್ಥರಿಗೆ ಧೈರ್ಯ ಹೇಳಿದ್ದಾರೆ. ಪೂಜಾ ಅವರೊಂದಿಗೆ ನಾನು ಮಾತನಾಡಿದ್ದೇನೆ. ಇಸ್ರೇಲ್ ನಲ್ಲಿ ಅವರು ಸುರಕ್ಷಿತವಾಗಿದ್ದಾರೆ. ನೀವೂ ಯಾವುದೇ ಆತಂಕಕ್ಕೆ ಒಳಗಾಗಬೇಡಿ ಎಂದಿದ್ದಾರೆ.

ಇಸ್ರೇಲ್ ನಲ್ಲಿ ಪ್ರತಿಷ್ಠಿತ ಟಿಸಿಎಚ್ ಸಂಸ್ಥೆಯಲ್ಲಿ ಪೂಜಾ ಕೆಲಸ ಮಾಡುತ್ತಿದ್ದಾರೆ. ಇಸ್ರೇಲ್ ನಲ್ಲಿ ನಡೆಯುತ್ತಿರುವ ಯುದ್ಧ ಕಂಡು ಬಾಗಲಕೋಟೆಯ ಕುಟುಂಬಸ್ಥರಿಗೆ ಮನಸ್ಸಿಗೆ ನೆಮ್ಮದಿಯೇ ಇಲ್ಲ. ಮಗಳಿಗೆ ಅಲ್ಲಿ ಏನಾಯ್ತೋ..? ಹೇಗಿದ್ದಾಳೋ..? ಎಂಬ ಚಿಂತೆಯಲ್ಲಿಯೇ ದಿನ ಕಳೆಯುತ್ತಿದ್ದಾರೆ. ಸದ್ಯಕ್ಕೆ ಸಿಎಂ ಸಿದ್ದರಾಮಯ್ಯ ಹೇಳಿರುವ ಮಾತುಗಳುಗೆ ಕೊಂಚ ಧೈರ್ಯ ತೆಗೆದುಕೊಂಡಿದ್ದಾರೆ. ಮಗಳು ಸುರಕ್ಷಿತವಾಗಿರಲಿ ಎಂದು ದೇವರಲ್ಲಿ ಪ್ರತಿ ದಿನ, ಪ್ರತಿ ಕ್ಷಣ ಪೂಜೆ ಸಲ್ಲಿಸುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

error: Content is protected !!