Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸುಪ್ರೀಂನಿಂದ ಜಾಮೀನು ರದ್ದು : ಅನುಕುಮಾರ್ ತಾಯಿ ಹೇಳಿದ್ದೇನು..?

---Advertisement---

ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇಂದು ಸುಪ್ರೀಂ ಕೋರ್ಟ್ ನಿಂದ ಜಾಮೀನು ರದ್ದಾಗಿದೆ. ಹೀಗಾಗಿ ಏಳು ಜನ ಮತ್ತೆ ಜೈಲು ಪಾಲಾಗಿದ್ದಾರೆ. ಅದರಲ್ಲಿ ಅನುಕುಮಾರ್ ಕೂಡ ಜೈಲು ಪಾಲಾಗಲಿದ್ದಾರೆ. ಈ ಸ್ಥಿತಿ‌ ಕಂಡು ಅನುಕುಮಾರ್ ತಾಯಿ ಕಣ್ಣೀರಾಕಿದ್ದಾರೆ. ದೇವರು ನಮಗೆ ನೆಮ್ಮದಿಯನ್ನೇ ಕೊಡಲಿಲ್ಲ ಎಂದು ಕಣ್ಣೀರಿಟ್ಟಿದ್ದಾರೆ. ಜೈಲಿಗೆ ಹೋದವನು ಬಂದನಲ್ಲ ಅಂತ ಆ ತಾಯಿ ನೆಮ್ಮದಿಯಾಗಿದ್ದರೆ ಇದೀಗ ಸುಪ್ರೀಂ ಕೋರ್ಟ್ ನಿರ್ಧಾರ ಆ ಹೆತ್ತ ತಾಯಿಗೆ ಮತ್ತೆ ಮಂಕಾಗುವಂತೆ ಮಾಡಿದೆ.

ಮಾಧ್ಯಮದವರೊಂದಿಗೆ ಮಾತನಾಡಿದ ಜಯಮ್ಮ, ಜೈಲಿಗೆ ಹೋದ ಮಗ ಮತ್ತೆ ಬಂದನಲ್ಲ ಎಂಬ ನೆಮ್ಮದಿ ಇತ್ತು. ಮನೆಯಲ್ಲಿ ಕೂಲಿ ಮಾಡಿಕೊಂಡು ಚೆನ್ನಾಗಿ ಇದ್ವಿ. ಮತ್ತೆ ಈಗ ಅದೇ ಪರಿಸ್ಥಿತಿ ಬಂದಿದೆ. ಜಾಮೀನು ಪಡೆಯುವುದಕ್ಕೆ ಎಲ್ಲೆಲ್ಲೋ ಸಾಲ ಮಾಡಿ ಮಗನನ್ನು ಕರೆದುಕೊಂಡು ಬಂದ್ವಿ. ಮಾಡಿರುವ ಸಾಲವನ್ನ ಮಗ ಅನುಕುಮಾರ್ ತೀರಿಸುತ್ತಾನೆ ಎಂದುಕೊಂಡೆವು. ಈಗ ಮತ್ತೆ ಇದೇ ಸಂಕಷ್ಟ ಬಂದಿದೆ.

ಈ ರೀತಿಯಾದರೆ ನಾವೂ ಬದುಕುವುದು ಹೇಗೆ..? ನಾವೂ ನೋವು ಹೇಗೆ ಸುಧಾರಿಸಿಕೊಳ್ಳಬೇಕು..? ಮತ್ತೆ ಅದೇ ಕೊರಗು ನಮ್ಮನ್ನ ಕಾಡುತ್ತಿದೆ. ಬೆಳಗ್ಗೆ ಇದನ್ನು ಕೇಳಿ ಬೇಸರ ಆಯ್ತು. ಶ್ಯೂರಿಟಿಗೆ ಸಾಕಷ್ಟು ಓಡಾಡಿ ಬೇಲ್ ತಂದಿದ್ದೇವೆ. ನಮ್ಮ ಕಷ್ಟಕ್ಕೆ ಯಾರೂ ಆಗಲೇ ಇಲ್ಲ. ದೇವರು ಹೀಗೆ ವನವಾಸ ಕೊಟ್ಟರೇ ಏನು ಮಾಡುವುದು. ಮಳೆ ಬಂದರೆ ಮನೆ ಸೋರುತ್ತದೆ. ಹೇಗೋ ಮಾಡಿ ಮನೆ ಕಟ್ಟೋಣಾ, ಸೀಟು ಹಾಕೊಂಡು ಇರೋಣಾ ಅಂತ ಅಂದುಕೊಂಡಿದ್ದೆವು. ಆದರೆ ದೇವರು ನಮಗೆ ನೆಮ್ಮದಿನೇ ಕೊಡಲಿಲ್ಲ. ಏನು ಮಾಡುವುದು. ಇನ್ನೇನು ಇಲ್ಲ ದೇವರ ಮೇಲೆ ಭಾರ ಹಾಕಿ ಬದುಕುವುದು ಅಷ್ಟೇ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment